AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamaraj Road: ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಕಾಮರಾಜ್ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ

ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಏಕಮುಖ ಸಂಚಾರಕ್ಕೆ ಅನುವುಮಾಡಿಕೊಡಲು ಸಂಚಾರಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಆ ಮೂಲಕ ವಾಹನಗಳು ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆಯ ಕಡೆಗೆ ಮಾತ್ರ ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತಿದೆ. 

Kamaraj Road: ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಕಾಮರಾಜ್ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 27, 2024 | 6:39 PM

Share

ಬೆಂಗಳೂರು, ಏಪ್ರಿಲ್​ 27: ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ (MG Road) ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಈ ಹಿಂದೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ರಸ್ತೆಯ ಅರ್ಧದಷ್ಟು ಭಾಗವನ್ನು ತೆರೆಯುವಂತೆ ಏಪ್ರಿಲ್ ಅಂತ್ಯದವರೆಗೆ ಗಡುವು ನೀಡಿತ್ತು. ಆದರೆ ಪ್ರಸ್ತುತ ಇದನ್ನು ಏಕಮುಖ ಮಾರ್ಗವನ್ನಾಗಿ ಮಾಡಲು ಸಂಚಾರಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಆ ಮೂಲಕ ವಾಹನಗಳು ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆಯ ಕಡೆಗೆ ಮಾತ್ರ ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತಿದೆ.

ನಾಗವಾರದಿಂದ ಕಾಳೇನ ಅಗ್ರಹಾರದ ಎಂಜಿ ರಸ್ತೆಯ ಅಂಡರ್ ಪಾಸ್ ಒಳಗೆ ಮೆಟ್ರೋ ನಿಲ್ದಾಣವನ್ನು ನಿರ್ಮಿಸಲು 220 ಮೀಟರ್ ಉದ್ದದ ಕಾಮರಾಜ್ ರಸ್ತೆಯನ್ನು 2019ರ ಜೂನ್‌ನಲ್ಲೇ ಮುಚ್ಚಲಾಗಿತ್ತು. ಈ ನಿಲ್ದಾಣವು ಅಸ್ತಿತ್ವದಲ್ಲಿರುವ ಪರ್ಪಲ್ ಲೈನ್‌ನೊಂದಿಗೆ ವರ್ಗಾವಣೆ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಡಂಪಿಂಗ್ ಯಾರ್ಡ್​ಗಳಾಗುತ್ತಿರುವ ಬೆಂಗಳೂರು ಮೇಲ್ಸೇತುವೆಗಳು, ಈಜಿಪುರ ಫ್ಲೈಓವರ್​ನಲ್ಲಿ ದುರ್ನಾತ

ರಸ್ತೆಯನ್ನು ಮುಚ್ಚಲ್ಪಟ್ಟಿರುವುದರಿಂದಾಗಿ ಶಿವಾಜಿನಗರ ಅಥವಾ ಕಮರ್ಷಿಯಲ್ ಸ್ಟ್ರೀಟ್‌ಗೆ ಹೋಗುವ ಪ್ರಯಾಣಿಕರು ತಮ್ಮ ಮಾರ್ಗವನ್ನು ಬದಲಾಯಿಸಲು ಮೊದಲು ಅನಿಲ್ ಕುಂಬ್ಳೆ ವೃತ್ತ ಅಥವಾ ಟ್ರಿನಿಟಿ ವೃತ್ತದಲ್ಲಿ ತಿರುವು ಪಡೆಯುವಂತೆ ಒತ್ತಾಯಿಸಲಾಗಿದೆ. ಇಲ್ಲದಿದ್ದರೆ ಎಂಜಿ ರಸ್ತೆಯುದ್ದಕ್ಕೂ ಇರುವ ಜಂಕ್ಷನ್‌ಗಳಲ್ಲಿ ಸಂಚಾರ ಅಡಚಣೆ ಉಂಟಾಗುತ್ತದೆ.

ಸದ್ಯಕ್ಕೆ ಏಕಮುಖ ಸಂಚಾರಕ್ಕೆ ನಿರ್ಧಾರ: ಸಂಚಾರ ಡಿಸಿಪಿ

‘ಎಂಜಿ ರಸ್ತೆಯಲ್ಲಿ ಸಾಕಷ್ಟು ಸಂಚಾರ ದಟ್ಟಣೆ ಇರುವುದರಿಂದ ಈ ಸಂಪರ್ಕ ರಸ್ತೆಯನ್ನು ಶೀಘ್ರದಲ್ಲಿಯೇ ತೆರೆಯಲು ನಾವು ಉತ್ಸುಕರಾಗಿದ್ದೇವೆ. ಕಮರ್ಷಿಯಲ್ ಸ್ಟ್ರೀಟ್‌ಗೆ ಭೇಟಿ ನೀಡಲು ಬಯಸುವವರು ಸುತ್ತು ಹಾಕಿಕೊಂಡು ಬರಬೇಕಾಗಿತ್ತು. ಹೀಗಾಗಿ ಸಾರ್ವಜನಿಕರಿಂದ ಭಾರಿ ಬೇಡಿಕೆಯಿತ್ತು. ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆಗೆ ಸದ್ಯಕ್ಕೆ ನಾವು ಏಕಮುಖ ಸಂಚಾರವನ್ನು ಮಾತ್ರ ತೆರೆಯಲು ನಿರ್ಧರಿಸಿದ್ದೇವೆ’ ಎಂದು ಪಶ್ಚಿಮ ಸಂಚಾರ ಡಿಸಿಪಿ ಅನಿತಾ ಬಿ ಹದ್ದಣ್ಣನವರ್​ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಾಮಗಾರಿ ನಡೆಯುತ್ತಿದೆ: ಬಿಎಲ್ ಯಶವಂತ ಚವ್ಹಾಣ

ಇದೇ ವೇಳೆ ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಎಲ್ ಯಶವಂತ ಚವ್ಹಾಣ ಪ್ರತಿಕ್ರಿಯಿಸಿದ್ದು, ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ಸಂಚಾರ ಪೊಲೀಸರು ಪರಿಶೀಲನೆ ಪೂರ್ಣಗೊಳಿಸಿದ್ದು, ಮತ್ತೊಂದು ತಪಾಸಣೆಗೆ ಮುಂದಾಗಿದ್ದಾರೆ. ನಾವು ಮೇ ಮಧ್ಯದಲ್ಲಿ ಕಾಮರಾಜ್ ರಸ್ತೆಯನ್ನು ಭಾಗಶಃ ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:39 pm, Sat, 27 April 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!