AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾಗಿ ಸಂಬಳ ಸಿಗದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಚಾಲಕರ ಪರದಾಟ, ಡಿಪೋ ಎದುರು ಪ್ರತಿಭಟನೆ

ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 600ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳನ್ನು ರಸ್ತೆಗೆ ಇಳಿಸಿದೆ. ಈ ಬಸ್​ಗಳಿಗೆ ಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಸರಿಯಾಗಿ ಸಂಬಳ ಸಿಗದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಚಾಲಕರ ಪರದಾಟ, ಡಿಪೋ ಎದುರು ಪ್ರತಿಭಟನೆ
ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: May 14, 2024 | 11:57 AM

Share

ಬೆಂಗಳೂರು, ಮೇ 14: ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡುತ್ತೇವೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಲೆಕ್ಟ್ರಿಕ್​ ಬಸ್​ಗಳು (E-Bus) ಸರಿಯಾಗಿ ಸೇವೆ ಒದಗಿಸುತ್ತಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲೇ ಇದೀಗ, ಈ ಬಸ್​​ಗಳ ಚಾಲಕರಿಗೆ (Drivers) ಸರಿಯಾಗಿ ವೇತನ ನೀಡುತ್ತಿಲ್ಲ ಅಂತ ಕೂಗು ಕೇಳಿಬರುತ್ತಿದೆ. ಎಲೆಕ್ಟ್ರಿಕ್​ ಬಸ್​ಗಳ ಚಾಲಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಇವರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪವಿದೆ.​ ಈ ಸಂಬಂಧ ಚಾಲಕರು ಶಾಂತಿನಗರ ಡಿಪೋ 3ರ ಮುಂದೆ ಧರಣಿ ಮಾಡುತ್ತಿದ್ದಾರೆ.

ಕೆಲಸಕ್ಕೆ ಸೇರಿಸಿಕೊಳ್ಳುವಾಗ 26 ರೂ. ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ಕೇವಲ 18 ಸಾವಿರ ರೂ. ಕೊಡುತ್ತಿದ್ದಾರೆ. ಕಡಿತ​ ಮಾಡುತ್ತಿರುವ ಹಣ ಪಿಎಫ್​ ಖಾತೆಗೂ ಜಮೆ ಆಗಿಲ್ಲ. ಟಾಟಾ ಕಂಪನಿಯಲ್ಲಿ ಕೆಲಸ ಎಂದು ನಮಗೆ ಹೇಳಿದ್ದರು, ಆದರೆ ಈಗ ಯಾವುದೋ ಆರ್ಯ ಕಂಪನಿಯಲ್ಲಿ ಕೆಲಸ ನೀಡಿದ್ದಾರೆ. ವಸತಿ ಸೌಲಭ್ಯ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಇಲ್ಲಿ ಯಾವುದೇ ರೀತಿಯ ಸೌಲಭ್ಯ ನೀಡಿಲ್ಲ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಬಿಎಂಟಿಸಿಯಲ್ಲಿ ಒಟ್ಟು 6842 ಬಸ್​​ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್​​ಗಳಿದ್ದರೆ, 600 ಎಸಿ ಬಸ್​​ಗಳಿವೆ. 600 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್​ ಬಸ್​ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್​​​ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?

ಸೇವೆ ಒದಗಿಸುತ್ತಿಲ್ಲ

ಬಿಎಂಟಿಸಿಯ ಚಾಲಕರಿಗೆ ತಿಂಗಳಿಗೆ 35 ರಿಂದ 40 ಸಾವಿರ ರೂಪಾಯಿ ಸಂಬಳ ನೀಡಿದರೆ, ಖಾಸಗಿ ಕಂಪನಿಗಳು ಎಲೆಕ್ಟ್ರಿಕ್ ಬಸ್ ಡ್ರೈವರ್​​​ಗಳಿಗೆ 15 ರಿಂದ 18 ಸಾವಿರ ರೂಪಾಯಿ ಸಂಬಳ ನೀಡುತ್ತಿವೆ. ಅದು ಕೂಡ ಸರಿಯಾಗಿ ನೀಡುತ್ತಿಲ್ಲ. ನೀಡುವ ಸಂಬಳದಲ್ಲೂ ಎರಡರಿಂದ ಮೂರು ಸಾವಿರ ರೂಪಾಯಿಯನ್ನು ಬಿಎಂಟಿಸಿಯ ಅಧಿಕಾರಿಗಳು ಮತ್ತು ಖಾಸಗಿ ಏಜೆನ್ಸಿಗಳು ಪಡೆದಕೊಳ್ಳುವ ಆರೋಪ ಇದೆ.

ಇದರಿಂದ 600 ಎಲೆಕ್ಟ್ರಿಕ್​ ಬಸ್​ಗಳಲ್ಲಿ 300ಕ್ಕೂ ಹೆಚ್ಚು ಬಸ್​​​ಗಳು ಸಮಯಕ್ಕೆ ಸರಿಯಾಗಿ ಸಂಚರಿಸುತ್ತಿಲ್ಲ. ಎಲೆಕ್ಟ್ರಿಕ್ ಬಸ್​​ಗಳು ಸರಿಯಾಗಿ ಸಂಚರಿಸದೇ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆ ಆಗ್ತಿದೆ. ಇದರಿಂದ ಬೆಂಗಳೂರಲ್ಲಿ ಬಸ್​​​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿದೆ. ಪ್ರಯಾಣಿಕರು ದುಬಾರಿ ಹಣ ಕೊಟ್ಟು ಕ್ಯಾಬ್, ಆಟೋಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಬಸ್ ಪ್ರಯಾಣಿಕರ ವೇದಿಕೆಯ ಸದಸ್ಯ ವಿನಯ್ ಶ್ರೀ ನಿವಾಸ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ