Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು

ಬೆಂಗಳೂರಿನ ಕೆಂಪಾಪುರ ಬಳಿ ಇರುವ ರಾಜಕಾಲುವೆ ಕಾಮಗಾರಿ ಶುರು ಮಾಡಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸುಳ್ಳು ಹೇಳಿ ಚಳ್ಳೆ ಹಣ್ಣು ತಿನ್ನಿಸಿದ್ದರು. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಬಂಡವಾಳ ಬಯಲಾಗಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿರಲಿಲ್ಲ. ಇದರಿಂದ ಸಚಿವ ಕೃಷ್ಣಭೈರೇಗೌಡ ಬೇಸರಗೊಂಡರು.

ಸಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು
ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ
Follow us
ವಿವೇಕ ಬಿರಾದಾರ
|

Updated on: May 25, 2024 | 9:54 AM

ಬೆಂಗಳೂರು, ಮೇ 25: ಬಿಬಿಎಂಪಿ (BBMP) ಅಧಿಕಾರಿಗಳ ನಡೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪಾಪುರ ಬಳಿ ಇರುವ ರಾಜಕಾಲುವೆ (Rajakaluve) ಕಾಮಗಾರಿ ಶುರು ಮಾಡಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸುಳ್ಳು ಹೇಳಿ ಚಳ್ಳೆ ಹಣ್ಣು ತಿನ್ನಿಸಿದ್ದರು. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಬಂಡವಾಳ ಬಯಲಾಗಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿರಲಿಲ್ಲ. ಇದರಿಂದ ಸಚಿವ ಕೃಷ್ಣಭೈರೇಗೌಡ ಬೇಸರಗೊಂಡರು.

ಇದರಿಂದ ಆಕ್ರೋಶಗೊಂಡ ಸಚಿವ ಕೃಷ್ಣ ಬೈರೇಗೌಡ, ಜನ ನಮ್ಮನ್ನು ಬೈತಾರೆ, ಅಧಿಕಾರಿಗಳನ್ನು ಪ್ರಶ್ನೆ ಮಾಡುವುದು ಕಮ್ಮಿ. ಶಾಸಕಾಂಗ, ಕಾರ್ಯಾಂಗ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಮಳೆ ಮುನ್ಸೂಚನೆ; ಯಾವುದೇ ಕಾರಣಕ್ಕೂ ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನಿರ್ಲಕ್ಷ್ಯ ಬೇಡ -ತುಷಾರ್ ಗಿರಿನಾಥ್ ಆದೇಶ

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸೂಚನೆ ಕೊಟ್ಟರೂ ಕೆಲ ಅಧಿಕಾರಿಗಳು ಕಳ್ಳಾಟವಾಡುತ್ತಿದ್ದಾರೆ. ಇಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುತ್ತೇವೆ. ಬಿಬಿಎಂಪಿ ಅಧಿಕಾರಿಗಳು ಮಳೆ ನಿರ್ವಹಣೆಗೆ ಸನ್ನದ್ಧರಾಗಬೇಕು. ಒತ್ತುವರಿದಾರರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರಿಗಿಸುತ್ತೇವೆ. ಬೆಂಗಳೂರು ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು. ಬಿಜೆಪಿಯವರು ಬೇಕಾದಲ್ಲಿ ಸಲಹೆ ಸೂಚನೆಗಳನ್ನು ಮಾಡಲಿ. ಬ್ರ್ಯಾಂಡ್ ಬೆಂಗಳೂರು ಹೆಸರನ್ನ ರಾಜಕೀಯಕ್ಕೆ ಬಳಸಬಾರದು ಎಂದು ಮನವಿ ಮಾಡಿದರು.

ನಾವು ಭೂ ಒತ್ತುವರಿ ತಡೆಯಲು ಜಿಯೋ ಮ್ಯಾಪಿಂಗ್ ಮಾಡುತ್ತಿದ್ದೇವೆ. ನಮ್ಮ ಕಂದಾಯ ಅಧಿಕಾರಿಗಳು 3 ತಿಂಗಳಿಗೊಮ್ಮೆ ಸ್ಥಳ ಪರಿಶೀಲನೆ ಮಾಡುತ್ತಾರೆ. ನಾವು ಭೂ ಒತ್ತುವರಿ ಶಾಶ್ವತವಾಗಿ ತಪ್ಪಿಸಲು ಈ ಪ್ಲಾನ್ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ