AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು

ಬೆಂಗಳೂರಿನ ಕೆಂಪಾಪುರ ಬಳಿ ಇರುವ ರಾಜಕಾಲುವೆ ಕಾಮಗಾರಿ ಶುರು ಮಾಡಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸುಳ್ಳು ಹೇಳಿ ಚಳ್ಳೆ ಹಣ್ಣು ತಿನ್ನಿಸಿದ್ದರು. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಬಂಡವಾಳ ಬಯಲಾಗಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿರಲಿಲ್ಲ. ಇದರಿಂದ ಸಚಿವ ಕೃಷ್ಣಭೈರೇಗೌಡ ಬೇಸರಗೊಂಡರು.

ಸಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು
ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 25, 2024 | 9:54 AM

Share

ಬೆಂಗಳೂರು, ಮೇ 25: ಬಿಬಿಎಂಪಿ (BBMP) ಅಧಿಕಾರಿಗಳ ನಡೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪಾಪುರ ಬಳಿ ಇರುವ ರಾಜಕಾಲುವೆ (Rajakaluve) ಕಾಮಗಾರಿ ಶುರು ಮಾಡಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸುಳ್ಳು ಹೇಳಿ ಚಳ್ಳೆ ಹಣ್ಣು ತಿನ್ನಿಸಿದ್ದರು. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಬಂಡವಾಳ ಬಯಲಾಗಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿರಲಿಲ್ಲ. ಇದರಿಂದ ಸಚಿವ ಕೃಷ್ಣಭೈರೇಗೌಡ ಬೇಸರಗೊಂಡರು.

ಇದರಿಂದ ಆಕ್ರೋಶಗೊಂಡ ಸಚಿವ ಕೃಷ್ಣ ಬೈರೇಗೌಡ, ಜನ ನಮ್ಮನ್ನು ಬೈತಾರೆ, ಅಧಿಕಾರಿಗಳನ್ನು ಪ್ರಶ್ನೆ ಮಾಡುವುದು ಕಮ್ಮಿ. ಶಾಸಕಾಂಗ, ಕಾರ್ಯಾಂಗ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಮಳೆ ಮುನ್ಸೂಚನೆ; ಯಾವುದೇ ಕಾರಣಕ್ಕೂ ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನಿರ್ಲಕ್ಷ್ಯ ಬೇಡ -ತುಷಾರ್ ಗಿರಿನಾಥ್ ಆದೇಶ

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸೂಚನೆ ಕೊಟ್ಟರೂ ಕೆಲ ಅಧಿಕಾರಿಗಳು ಕಳ್ಳಾಟವಾಡುತ್ತಿದ್ದಾರೆ. ಇಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುತ್ತೇವೆ. ಬಿಬಿಎಂಪಿ ಅಧಿಕಾರಿಗಳು ಮಳೆ ನಿರ್ವಹಣೆಗೆ ಸನ್ನದ್ಧರಾಗಬೇಕು. ಒತ್ತುವರಿದಾರರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರಿಗಿಸುತ್ತೇವೆ. ಬೆಂಗಳೂರು ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು. ಬಿಜೆಪಿಯವರು ಬೇಕಾದಲ್ಲಿ ಸಲಹೆ ಸೂಚನೆಗಳನ್ನು ಮಾಡಲಿ. ಬ್ರ್ಯಾಂಡ್ ಬೆಂಗಳೂರು ಹೆಸರನ್ನ ರಾಜಕೀಯಕ್ಕೆ ಬಳಸಬಾರದು ಎಂದು ಮನವಿ ಮಾಡಿದರು.

ನಾವು ಭೂ ಒತ್ತುವರಿ ತಡೆಯಲು ಜಿಯೋ ಮ್ಯಾಪಿಂಗ್ ಮಾಡುತ್ತಿದ್ದೇವೆ. ನಮ್ಮ ಕಂದಾಯ ಅಧಿಕಾರಿಗಳು 3 ತಿಂಗಳಿಗೊಮ್ಮೆ ಸ್ಥಳ ಪರಿಶೀಲನೆ ಮಾಡುತ್ತಾರೆ. ನಾವು ಭೂ ಒತ್ತುವರಿ ಶಾಶ್ವತವಾಗಿ ತಪ್ಪಿಸಲು ಈ ಪ್ಲಾನ್ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್