AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪುಟ್ಟೇನಹಳ್ಳಿ ಕೆರೆಗೆ ಸೇರುತ್ತಿದೆ ರಾಜಕಾಲುವೆ ನೀರು, “ಸೇವ್ ಪುಟ್ಟೇನಹಳ್ಳಿ ಲೇಕ್” ಅಭಿಯಾನ

ಅದು ನೂರಾರು ಬಗೆಯ ಪಕ್ಷಿಗಳಿಗೆ ಆಶ್ರಯತಾಣವಾಗಿದ್ದ ಕೆರೆ. ಕೆರೆಯಂಗಳದ ಸ್ವಚ್ಛ ನೀರಿಗೆ ಇದೀಗ ರಾಜಕಾಲುವೆ ಕಂಟಕವಾಗಿ ಪರಿಣಮಿಸಿದೆ. ಇತ್ತೀಚೆಗಷ್ಟೆ ವಿಲ್ಲಾಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದ್ದ ರಾಜಕಾಲುವೆ ನೀರಿಗೆ ಬೇರೆ ಮಾರ್ಗ ತೋರಿಸಬೇಕಿದ್ದ ಮಹಾನಗರ ಪಾಲಿಕೆ, ಇದೀಗ ರಾಜಕಾಲುವೆ ನೀರು ಕೆರೆಗೆ ಸೇರುತ್ತಿದ್ದರೂ ಮೌನ ವಹಿಸಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ಪುಟ್ಟೇನಹಳ್ಳಿ ಕೆರೆಗೆ ಸೇರುತ್ತಿದೆ ರಾಜಕಾಲುವೆ ನೀರು, ಸೇವ್ ಪುಟ್ಟೇನಹಳ್ಳಿ ಲೇಕ್ ಅಭಿಯಾನ
ಪುಟ್ಟೇನಹಳ್ಳಿ ಕೆರೆ
ಶಾಂತಮೂರ್ತಿ
| Edited By: |

Updated on:May 27, 2024 | 7:46 AM

Share

ಬೆಂಗಳೂರು, ಮೇ 27: ಪಕ್ಷಿಗಳ ಸಂರಕ್ಷಣಾತಾಣವಾಗಿದ್ದ ಪುಟ್ಟೇನಹಳ್ಳಿ ಕೆರೆಗೆ (Puttenahalli Lake) ರಾಜಕಾಲುವೆಯಿಂದ ಸಂಕಷ್ಟ ಎದುರಾಗಿದೆ. ಯಲಹಂಕದ (Yalahanka) ನಾರ್ಥ್ ಹುಡ್ ವಿಲ್ಲಾಗೆ ಇತ್ತೀಚೆಗೆ ರಾಜಕಾಲುವೆ ನೀರು ತುಂಬಿ ಅವಾಂತರ ಸೃಷ್ಟಿಯಾಗಿತ್ತು. ಈ ವೇಳೆ ಪಕ್ಕದಲ್ಲಿದ್ದ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಸಲಾಗಿತ್ತು, ಆದರೆ ಇದೀಗ ರಾಜಕಾಲುವೆಯ (Rajkaluve) ಕಲುಷಿತ ನೀರು ಕೂಡ ಕೆರೆಯ ಒಡಲು ಸೇರುತ್ತಿದೆ. ಇತ್ತ ಪ್ರವಾಹದ ಸ್ಥಿತಿ ನಿರ್ಮಾಣವಾದ ವೇಳೆ ದೊಡ್ಡ ದೊಡ್ಡ ಪೈಪ್ ಅಳವಡಿಸಿ ಬೇರೆಡೆ ನೀರು ಬಿಡಲಾಗುತ್ತೆ ಎಂದಿದ್ದ ಮಹಾನಗರ ಪಾಲಿಕೆ, ಸದ್ಯ ಯಾವುದೆ ಪೈಪ್ ಅಳವಡಿಸದೆ ಇರುವುದು ಮತ್ತಷ್ಟು ಸಮಸ್ಯೆ ತಂದೊಡ್ಡಿದೆ.

ಕೆರೆಗೆ ಮಲಿನ ನೀರು ಸೇರುತ್ತಿರುವುದರಿಂದ ವಲಸೆ ಪಕ್ಷಿಗಳು ಕೂಡ ಕಡಿಮೆಯಾಗುತ್ತಿವೆ. ಅಲ್ಲದೆ ವಾಯುವಿಹಾರಕ್ಕೆ ಬಂದವರು ಮಾಡುವವರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ಪರಮೇಶ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು

ಇನ್ನು ಕೆರೆ ನೀರು ಮಲಿನವಾಗುರುವುದರಿಂದ ಜಲಚರಗಳು, ಪಕ್ಷಿಗಳಿಗೂ ಕಂಟಕ ಎದುರಾಗುತ್ತಿರುವುದಕ್ಕೆ ಪರಿಸರಪ್ರೇಮಿಗಳು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ “ಸೇವ್ ಪುಟ್ಟೇನಹಳ್ಳಿ ಲೇಕ್” ಅಂತ ಅಭಿಯಾನ ಆರಂಭಿಸಿದ್ದು, ಕೆರೆ ಒಡಲಿಗೆ ವಿಷ ಹಾಕಬೇಡಿ ಅಂತ ಕಿಡಿಕಾರುತ್ತಿದ್ದಾರೆ. ಅಲ್ಲದೆ ರಾಜಕಾಲುವೆ ನೀರನ್ನು ಸಂಸ್ಕರಿಸದೆ ಹಾಗೆ ಕೆರೆಗೆ ಬಿಡುತ್ತಿರುವುದು ವ್ಯತಿರಿಕ್ತ ಪರಿಣಾಮ ಬೀರುತ್ತೆ ಅಂತ ಪರಿಸರಪ್ರೇಮಿ ಅರುಣ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಟ್ಟೇನಹಳ್ಳಿ ಕೆರೆ

ಒಟ್ಟಿನಲ್ಲಿ ಅಪಾರ್ಟ್​ಮೆಂಟ್, ವಿಲ್ಲಾಗಳ ಜನರಿಗೆ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ಪ್ರಕೃತಿಗೆ ವಿಷ ಹಾಕುತ್ತಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಅರೆಬರೆ ರಾಜಕಾಲುವೆ ಮಾಡಿ ನೀರು ಎಲ್ಲಿ ಬಿಡಬೇಕು ಅಂತ ಅರಿಯದೆ ಕೆರೆ ಮಡಿಲಿಗೆ ಕಂಟಕ ತಂದಿಟ್ಟಿರುವ ಪಾಲಿಕೆ, ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Mon, 27 May 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ