AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪುಟ್ಟೇನಹಳ್ಳಿ ಕೆರೆಗೆ ಸೇರುತ್ತಿದೆ ರಾಜಕಾಲುವೆ ನೀರು, “ಸೇವ್ ಪುಟ್ಟೇನಹಳ್ಳಿ ಲೇಕ್” ಅಭಿಯಾನ

ಅದು ನೂರಾರು ಬಗೆಯ ಪಕ್ಷಿಗಳಿಗೆ ಆಶ್ರಯತಾಣವಾಗಿದ್ದ ಕೆರೆ. ಕೆರೆಯಂಗಳದ ಸ್ವಚ್ಛ ನೀರಿಗೆ ಇದೀಗ ರಾಜಕಾಲುವೆ ಕಂಟಕವಾಗಿ ಪರಿಣಮಿಸಿದೆ. ಇತ್ತೀಚೆಗಷ್ಟೆ ವಿಲ್ಲಾಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದ್ದ ರಾಜಕಾಲುವೆ ನೀರಿಗೆ ಬೇರೆ ಮಾರ್ಗ ತೋರಿಸಬೇಕಿದ್ದ ಮಹಾನಗರ ಪಾಲಿಕೆ, ಇದೀಗ ರಾಜಕಾಲುವೆ ನೀರು ಕೆರೆಗೆ ಸೇರುತ್ತಿದ್ದರೂ ಮೌನ ವಹಿಸಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ಪುಟ್ಟೇನಹಳ್ಳಿ ಕೆರೆಗೆ ಸೇರುತ್ತಿದೆ ರಾಜಕಾಲುವೆ ನೀರು, ಸೇವ್ ಪುಟ್ಟೇನಹಳ್ಳಿ ಲೇಕ್ ಅಭಿಯಾನ
ಪುಟ್ಟೇನಹಳ್ಳಿ ಕೆರೆ
ಶಾಂತಮೂರ್ತಿ
| Updated By: ವಿವೇಕ ಬಿರಾದಾರ|

Updated on:May 27, 2024 | 7:46 AM

Share

ಬೆಂಗಳೂರು, ಮೇ 27: ಪಕ್ಷಿಗಳ ಸಂರಕ್ಷಣಾತಾಣವಾಗಿದ್ದ ಪುಟ್ಟೇನಹಳ್ಳಿ ಕೆರೆಗೆ (Puttenahalli Lake) ರಾಜಕಾಲುವೆಯಿಂದ ಸಂಕಷ್ಟ ಎದುರಾಗಿದೆ. ಯಲಹಂಕದ (Yalahanka) ನಾರ್ಥ್ ಹುಡ್ ವಿಲ್ಲಾಗೆ ಇತ್ತೀಚೆಗೆ ರಾಜಕಾಲುವೆ ನೀರು ತುಂಬಿ ಅವಾಂತರ ಸೃಷ್ಟಿಯಾಗಿತ್ತು. ಈ ವೇಳೆ ಪಕ್ಕದಲ್ಲಿದ್ದ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಸಲಾಗಿತ್ತು, ಆದರೆ ಇದೀಗ ರಾಜಕಾಲುವೆಯ (Rajkaluve) ಕಲುಷಿತ ನೀರು ಕೂಡ ಕೆರೆಯ ಒಡಲು ಸೇರುತ್ತಿದೆ. ಇತ್ತ ಪ್ರವಾಹದ ಸ್ಥಿತಿ ನಿರ್ಮಾಣವಾದ ವೇಳೆ ದೊಡ್ಡ ದೊಡ್ಡ ಪೈಪ್ ಅಳವಡಿಸಿ ಬೇರೆಡೆ ನೀರು ಬಿಡಲಾಗುತ್ತೆ ಎಂದಿದ್ದ ಮಹಾನಗರ ಪಾಲಿಕೆ, ಸದ್ಯ ಯಾವುದೆ ಪೈಪ್ ಅಳವಡಿಸದೆ ಇರುವುದು ಮತ್ತಷ್ಟು ಸಮಸ್ಯೆ ತಂದೊಡ್ಡಿದೆ.

ಕೆರೆಗೆ ಮಲಿನ ನೀರು ಸೇರುತ್ತಿರುವುದರಿಂದ ವಲಸೆ ಪಕ್ಷಿಗಳು ಕೂಡ ಕಡಿಮೆಯಾಗುತ್ತಿವೆ. ಅಲ್ಲದೆ ವಾಯುವಿಹಾರಕ್ಕೆ ಬಂದವರು ಮಾಡುವವರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ಪರಮೇಶ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು

ಇನ್ನು ಕೆರೆ ನೀರು ಮಲಿನವಾಗುರುವುದರಿಂದ ಜಲಚರಗಳು, ಪಕ್ಷಿಗಳಿಗೂ ಕಂಟಕ ಎದುರಾಗುತ್ತಿರುವುದಕ್ಕೆ ಪರಿಸರಪ್ರೇಮಿಗಳು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ “ಸೇವ್ ಪುಟ್ಟೇನಹಳ್ಳಿ ಲೇಕ್” ಅಂತ ಅಭಿಯಾನ ಆರಂಭಿಸಿದ್ದು, ಕೆರೆ ಒಡಲಿಗೆ ವಿಷ ಹಾಕಬೇಡಿ ಅಂತ ಕಿಡಿಕಾರುತ್ತಿದ್ದಾರೆ. ಅಲ್ಲದೆ ರಾಜಕಾಲುವೆ ನೀರನ್ನು ಸಂಸ್ಕರಿಸದೆ ಹಾಗೆ ಕೆರೆಗೆ ಬಿಡುತ್ತಿರುವುದು ವ್ಯತಿರಿಕ್ತ ಪರಿಣಾಮ ಬೀರುತ್ತೆ ಅಂತ ಪರಿಸರಪ್ರೇಮಿ ಅರುಣ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಟ್ಟೇನಹಳ್ಳಿ ಕೆರೆ

ಒಟ್ಟಿನಲ್ಲಿ ಅಪಾರ್ಟ್​ಮೆಂಟ್, ವಿಲ್ಲಾಗಳ ಜನರಿಗೆ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ಪ್ರಕೃತಿಗೆ ವಿಷ ಹಾಕುತ್ತಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಅರೆಬರೆ ರಾಜಕಾಲುವೆ ಮಾಡಿ ನೀರು ಎಲ್ಲಿ ಬಿಡಬೇಕು ಅಂತ ಅರಿಯದೆ ಕೆರೆ ಮಡಿಲಿಗೆ ಕಂಟಕ ತಂದಿಟ್ಟಿರುವ ಪಾಲಿಕೆ, ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Mon, 27 May 24

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!