AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬರ್​ಗೆ ಬಂದಿತ್ತು ವಿದೇಶದಿಂದ ಹಣ, ಪಾಕಿಸ್ತಾನಕ್ಕೆ ಹಾರಲು ಸಿದ್ಧವಾಗಿತ್ತು ಯೋಜನೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಎನ್​ಐಎ ವಿಚಾರಣೆಗೆ ಒಳಪಡಿಸುತ್ತಿದ್ದು, ಅನೇಕ ಸ್ಫೋಟಕ ಅಂಶಗಳು ಬೆಳಕಿಗೆ ಬರುತ್ತಿವೆ. ಬಾಂಬರ್ ಹಾಗೂ ಪ್ರಕರಣದ ಮಾಸ್ಟರ್ ಮೈಂಡ್​ಗೆ ವಿದೇಶದಿಂದ ಹಣ ಬರುತ್ತಿತ್ತು ಎಂಬ ಸ್ಫೋಟಕ ಅಂಶ ಇದೀಗ ಬಯಲಾಗಿದೆ. ಅಷ್ಟೇ ಅಲ್ಲದೆ, ಅವರು ಪಾಕಿಸ್ತಾನಕ್ಕೆ ಪಲಾಯನಗೈಯಲೂ ಯೋಜನೆ ಸಿದ್ಧವಾಗಿತ್ತು ಎಂಬುದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಬಾಂಬರ್​ಗೆ ಬಂದಿತ್ತು ವಿದೇಶದಿಂದ ಹಣ, ಪಾಕಿಸ್ತಾನಕ್ಕೆ ಹಾರಲು ಸಿದ್ಧವಾಗಿತ್ತು ಯೋಜನೆ
ರಾಮೇಶ್ವರಂ ಕೆಫೆ
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 23, 2024 | 7:27 AM

Share

ಬೆಂಗಳೂರು, ಏಪ್ರಿಲ್ 23: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ಆರೋಪಿಗಳಿಗೆ ಖೆಡ್ಡ ತೋಡಿರುವ ರಾಷ್ಟ್ರೀಯ ತನಿಖಾ ದಳ (NIA) ಬಾಂಬರ್ ಸೇರಿದಂತೆ ಇತರ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆಚ್ಚಿ ಬೀಳುವ ಮಾಹಿತಿಗಳು ತಿಳಿದುಬಂದಿದೆ. ಆರೋಪಿಗಳಿಗೆ ವಿದೇಶದಿಂದ ಹಣ ಬರುತ್ತಿತ್ತು ಎಂಬ ವಿಚಾರ ಕೂಡ ಬೆಳಕಿಗೆ ಬಂದಿದ್ದು, ಪಾಕಿಸ್ತಾನಕ್ಕೆ ಹಾರಲು ಹೊಂಚು ಹಾಕಿದ್ದ ಸಂಗತಿ ಕೂಡ ಬಯಲಾಗಿದೆ.

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಹತ್ತಾರು ಜನರ ಜೀವದ ಜೊತೆಗೆ ಚೆಲ್ಲಾಟ ಆಡಿದ್ದ ಆರೋಪಿ ಪರಾರಿಯಾಗಿದ್ದ. ತಲೆ ಮರೆಸಿಕೊಂಡಿದ್ದ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿದ್ ಹಾಗೂ ಅಬ್ದುಲ್ ಮತೀನ್ ತಾಹ ಇಬ್ಬರನ್ನು ಕೊಲ್ಕತ್ತದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವು ಭಯಾನಕ ಸಂಗತಿಗಳು ಬೆಳಕಿಗೆ ಬಂದಿವೆ.

ಬಾಂಬರ್ ಮುಸ್ಸಾವಿರ್ ಹಾಗೂ ಅಬ್ದುಲ್ ಮತೀನ್​​ಗೆ ವಿದೇಶದಿಂದ ಹಣ ಬರುತ್ತಿತ್ತು. ಇವರಿಬ್ಬರಿಗೆ ಸಹಾಯ ಮಾಡಿದ್ದ ಆರೋಪಿ ಮುಜಾಮಿಲ್, ಅತನದ್ದು ಮತ್ತು ಅವನ ಗೆಳೆಯರ ಬ್ಯಾಂಕ್ ಅಕೌಂಟ್ ಹಾಗೂ ಎಟಿಎಂ ಕಾರ್ಡ್ ನೀಡಿದ್ದ. ವಿದೇಶದಿಂದಲೂ ಇವರ ಖಾತೆಗೆ ಹಣ ಬರುತ್ತಿತ್ತು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಯಾವಾಗ ಎನ್ಐಎಗೆ ಬ್ಯಾಂಕ್ ಅಕೌಂಟ್ ಬಗ್ಗೆ ಮಾಹಿತಿ ಸಿಕ್ಕಿತೋ ಬಳಿಕ ಅಬ್ದುಲ್ ಮತೀನ್ ತಾಹ ಮತ್ತು ಮುಸ್ಸಾವೀರ್ ಅಕೌಂಟ್ ಬಳಕೆ ನಿಲ್ಲಿಸಿಬಿಟ್ಟಿದ್ದರು. ಇದರಿಂದ ಆರ್ಥಿಕ ಸಂಕಷ್ಟ ಎದುರಾಗಿತ್ತು.

ಬಳಿಕ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿಂದ ಬಾಂಗ್ಲಾದೇಶದ ಮೂಲಕ ಪಾಕಿಸ್ತಾನ ತಲುಪಲು ಯೋಜನೆ ಮಾಡಿಕೊಂಡಿದ್ದರು. ಅದಕ್ಕಾಗಿ ಕನಿಷ್ಠ ಒಂದು ಲಕ್ಷ ರೂ. ಹಣದ ಅವಶ್ಯಕತೆ ಇತ್ತು. ಆದರೆ ಅದು ಪಡೆಯಲು ಸಾದ್ಯವಾಗಿರಲಿಲ್ಲ. ಹಾಗಾಗಿ ಪಶ್ಚಿಮ ಬಂಗಾಳದಲ್ಲಿರುವಾಗಲೇ ಲಾಕ್ ಆಗಿದ್ದಾರೆ.‌ ಈ ಆರೋಪಿಗಳು ಟೆಲಿಗ್ರಾಂ, ಸಿಗ್ನಲ್ ಸೇರಿ ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಮಾದರಿಯಲ್ಲಿ ಸಂವನ ಮಾಡುತ್ತಿದ್ದರು. ತಾವು ಏನೆಲ್ಲ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಮತಿನ್​​ಗೆ ನಿರ್ದೇಶನ ಕೂಡ ಬರುತಿತ್ತು. ಹ್ಯಾಂಡರ್ಸ್, ಕಮಾಂಡರ್ ಅಥವಾ ಕರ್ನಲ್ ಎಂಬ ಹೆಸರಿನಲ್ಲಿ ಸಂದೇಶ ಬರ್ತಿತ್ತು. ಈ ಹ್ಯಾಂಡ್ಲರ್ ಮೂಲತಃ ಪಾಕಿಸ್ತಾನದ ವ್ಯಕ್ತಿ ಎನ್ನು ಶಂಕೆ ಇದೆ. ಮಧ್ಯಪ್ರಾಚ್ಯ ದೇಶದಲ್ಲಿ ಇದ್ದುಕೊಂಡು ತಾಹಗೆ ನಿರ್ದೇಶನ ನೀಡಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಎನ್​ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!

ಇದೆಲ್ಲದರ‌ ಜೊತೆಗೆ ಆರೋಪಿಗಳಿಬ್ಬರ ಎನ್ಐಎ ಕಸ್ಟಡಿ ಅಂತ್ಯವಾದ ಕಾರಣ ಇಬ್ಬರನ್ನು ಕೋರ್ಟ್​ಗೆ ಹಾಜರುಪಡಿಸಿ ಮತ್ತೆ ಒಂದು ವಾರ ಎನ್ಐಎ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?