AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬರ್​ಗೆ ಬಂದಿತ್ತು ವಿದೇಶದಿಂದ ಹಣ, ಪಾಕಿಸ್ತಾನಕ್ಕೆ ಹಾರಲು ಸಿದ್ಧವಾಗಿತ್ತು ಯೋಜನೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಎನ್​ಐಎ ವಿಚಾರಣೆಗೆ ಒಳಪಡಿಸುತ್ತಿದ್ದು, ಅನೇಕ ಸ್ಫೋಟಕ ಅಂಶಗಳು ಬೆಳಕಿಗೆ ಬರುತ್ತಿವೆ. ಬಾಂಬರ್ ಹಾಗೂ ಪ್ರಕರಣದ ಮಾಸ್ಟರ್ ಮೈಂಡ್​ಗೆ ವಿದೇಶದಿಂದ ಹಣ ಬರುತ್ತಿತ್ತು ಎಂಬ ಸ್ಫೋಟಕ ಅಂಶ ಇದೀಗ ಬಯಲಾಗಿದೆ. ಅಷ್ಟೇ ಅಲ್ಲದೆ, ಅವರು ಪಾಕಿಸ್ತಾನಕ್ಕೆ ಪಲಾಯನಗೈಯಲೂ ಯೋಜನೆ ಸಿದ್ಧವಾಗಿತ್ತು ಎಂಬುದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಬಾಂಬರ್​ಗೆ ಬಂದಿತ್ತು ವಿದೇಶದಿಂದ ಹಣ, ಪಾಕಿಸ್ತಾನಕ್ಕೆ ಹಾರಲು ಸಿದ್ಧವಾಗಿತ್ತು ಯೋಜನೆ
ರಾಮೇಶ್ವರಂ ಕೆಫೆ
Follow us
ರಾಚಪ್ಪಾಜಿ ನಾಯ್ಕ್
| Updated By: Ganapathi Sharma

Updated on: Apr 23, 2024 | 7:27 AM

ಬೆಂಗಳೂರು, ಏಪ್ರಿಲ್ 23: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ಆರೋಪಿಗಳಿಗೆ ಖೆಡ್ಡ ತೋಡಿರುವ ರಾಷ್ಟ್ರೀಯ ತನಿಖಾ ದಳ (NIA) ಬಾಂಬರ್ ಸೇರಿದಂತೆ ಇತರ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಬೆಚ್ಚಿ ಬೀಳುವ ಮಾಹಿತಿಗಳು ತಿಳಿದುಬಂದಿದೆ. ಆರೋಪಿಗಳಿಗೆ ವಿದೇಶದಿಂದ ಹಣ ಬರುತ್ತಿತ್ತು ಎಂಬ ವಿಚಾರ ಕೂಡ ಬೆಳಕಿಗೆ ಬಂದಿದ್ದು, ಪಾಕಿಸ್ತಾನಕ್ಕೆ ಹಾರಲು ಹೊಂಚು ಹಾಕಿದ್ದ ಸಂಗತಿ ಕೂಡ ಬಯಲಾಗಿದೆ.

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಹತ್ತಾರು ಜನರ ಜೀವದ ಜೊತೆಗೆ ಚೆಲ್ಲಾಟ ಆಡಿದ್ದ ಆರೋಪಿ ಪರಾರಿಯಾಗಿದ್ದ. ತಲೆ ಮರೆಸಿಕೊಂಡಿದ್ದ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿದ್ ಹಾಗೂ ಅಬ್ದುಲ್ ಮತೀನ್ ತಾಹ ಇಬ್ಬರನ್ನು ಕೊಲ್ಕತ್ತದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವು ಭಯಾನಕ ಸಂಗತಿಗಳು ಬೆಳಕಿಗೆ ಬಂದಿವೆ.

ಬಾಂಬರ್ ಮುಸ್ಸಾವಿರ್ ಹಾಗೂ ಅಬ್ದುಲ್ ಮತೀನ್​​ಗೆ ವಿದೇಶದಿಂದ ಹಣ ಬರುತ್ತಿತ್ತು. ಇವರಿಬ್ಬರಿಗೆ ಸಹಾಯ ಮಾಡಿದ್ದ ಆರೋಪಿ ಮುಜಾಮಿಲ್, ಅತನದ್ದು ಮತ್ತು ಅವನ ಗೆಳೆಯರ ಬ್ಯಾಂಕ್ ಅಕೌಂಟ್ ಹಾಗೂ ಎಟಿಎಂ ಕಾರ್ಡ್ ನೀಡಿದ್ದ. ವಿದೇಶದಿಂದಲೂ ಇವರ ಖಾತೆಗೆ ಹಣ ಬರುತ್ತಿತ್ತು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಯಾವಾಗ ಎನ್ಐಎಗೆ ಬ್ಯಾಂಕ್ ಅಕೌಂಟ್ ಬಗ್ಗೆ ಮಾಹಿತಿ ಸಿಕ್ಕಿತೋ ಬಳಿಕ ಅಬ್ದುಲ್ ಮತೀನ್ ತಾಹ ಮತ್ತು ಮುಸ್ಸಾವೀರ್ ಅಕೌಂಟ್ ಬಳಕೆ ನಿಲ್ಲಿಸಿಬಿಟ್ಟಿದ್ದರು. ಇದರಿಂದ ಆರ್ಥಿಕ ಸಂಕಷ್ಟ ಎದುರಾಗಿತ್ತು.

ಬಳಿಕ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಅಲ್ಲಿಂದ ಬಾಂಗ್ಲಾದೇಶದ ಮೂಲಕ ಪಾಕಿಸ್ತಾನ ತಲುಪಲು ಯೋಜನೆ ಮಾಡಿಕೊಂಡಿದ್ದರು. ಅದಕ್ಕಾಗಿ ಕನಿಷ್ಠ ಒಂದು ಲಕ್ಷ ರೂ. ಹಣದ ಅವಶ್ಯಕತೆ ಇತ್ತು. ಆದರೆ ಅದು ಪಡೆಯಲು ಸಾದ್ಯವಾಗಿರಲಿಲ್ಲ. ಹಾಗಾಗಿ ಪಶ್ಚಿಮ ಬಂಗಾಳದಲ್ಲಿರುವಾಗಲೇ ಲಾಕ್ ಆಗಿದ್ದಾರೆ.‌ ಈ ಆರೋಪಿಗಳು ಟೆಲಿಗ್ರಾಂ, ಸಿಗ್ನಲ್ ಸೇರಿ ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಮಾದರಿಯಲ್ಲಿ ಸಂವನ ಮಾಡುತ್ತಿದ್ದರು. ತಾವು ಏನೆಲ್ಲ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಮತಿನ್​​ಗೆ ನಿರ್ದೇಶನ ಕೂಡ ಬರುತಿತ್ತು. ಹ್ಯಾಂಡರ್ಸ್, ಕಮಾಂಡರ್ ಅಥವಾ ಕರ್ನಲ್ ಎಂಬ ಹೆಸರಿನಲ್ಲಿ ಸಂದೇಶ ಬರ್ತಿತ್ತು. ಈ ಹ್ಯಾಂಡ್ಲರ್ ಮೂಲತಃ ಪಾಕಿಸ್ತಾನದ ವ್ಯಕ್ತಿ ಎನ್ನು ಶಂಕೆ ಇದೆ. ಮಧ್ಯಪ್ರಾಚ್ಯ ದೇಶದಲ್ಲಿ ಇದ್ದುಕೊಂಡು ತಾಹಗೆ ನಿರ್ದೇಶನ ನೀಡಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಎನ್​ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!

ಇದೆಲ್ಲದರ‌ ಜೊತೆಗೆ ಆರೋಪಿಗಳಿಬ್ಬರ ಎನ್ಐಎ ಕಸ್ಟಡಿ ಅಂತ್ಯವಾದ ಕಾರಣ ಇಬ್ಬರನ್ನು ಕೋರ್ಟ್​ಗೆ ಹಾಜರುಪಡಿಸಿ ಮತ್ತೆ ಒಂದು ವಾರ ಎನ್ಐಎ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?