Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ವಯಂ ಅಪಘಾತಗಳ ಸಂಖ್ಯೆ ಹೆಚ್ಚಳ

ಬೆಂಗಳೂರು ನಗರದಲ್ಲಿ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಸಂಚಾರಿ ನಿಯಮಗಳ ಪಾಲನೆ ಮಾಡುವಂತೆ ಎಷ್ಟೇ ಸೂಚನೆ ನೀಡಿದರೂ, ಕೆಲವರು ಪಾಲನೆ ಮಾಡುತ್ತಿಲ್ಲ. ಇದರಿಂದ ಅಪಘಾತ ಸಂಭವಿಸಿ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹೌದು, ನಗರದಲ್ಲಿ ಕೇವಲ 152 ದಿನಗಳಲ್ಲಿ 159 ಅಪಘಾತಗಳು ಸಂಭವಿಸಿವೆ.

ಬೆಂಗಳೂರಿನಲ್ಲಿ ಸ್ವಯಂ ಅಪಘಾತಗಳ ಸಂಖ್ಯೆ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: May 31, 2024 | 10:03 AM

ಬೆಂಗಳೂರು, ಮೇ 31: ಬೆಂಗಳೂರು (Bengaluru) ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕೇವಲ 152 ದಿನಗಳಲ್ಲಿ 159 ಅಪಘಾತಗಳು ಸಂಭವಿಸಿವೆ. ಈ ಪೈಕಿ 95 ಮಾರಣಾಂತಿಕ ಮತ್ತು 64 ಮಾರಣಾಂತಿಕವಲ್ಲ. 34 ಸ್ವಯಂ ಅಪಘಾತಗಳು ಸಂಭವಿಸಿವೆ. 34 ಸ್ವಯಂ ಅಪಘಾತಗಳಲ್ಲಿ 25 ಮಾರಣಾಂತಿಕ ಮತ್ತು 9 ಮಾರಣಾಂತಿಕವಲ್ಲದ ಅಪಘಾತಗಳಿವೆ. ಸ್ವಯಂ ಅಪಘಾತಕ್ಕೆ ಒಳಗಾದ ಚಾಲಕರು ಮತ್ತು ಸವಾರರು ಮದ್ಯದ ಅಮಲಿನಲ್ಲಿದ್ದರು.

ಸ್ವಯಂ-ಅಪಘಾತಗಳಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮತ್ತು ಅತಿವೇಗವು ಪ್ರಮುಖ ಕಾರಣಗಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ತಜ್ಞರು ಈ ಅಪಘಾತಗಳಿಗೆ ಮೂಲಸೌಕರ್ಯಗಳ ಕೊರತೆ ಮತ್ತು ಕಳಪೆ ವಾಹನ ಚಾಲಕರ ನಡವಳಿಕೆ ಅಪಘಾತಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮಾತನಾಡಿ, ನಗರದಲ್ಲಿ ಸ್ವಯಂ ಅಪಘಾತ ಪ್ರಕರಣಗಳು ಹೆಚ್ಚಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಡ್ರಿಂಕ್ ಡ್ರೈವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿವೆ. ಸ್ವಯಂ ಅಪಘಾತದಲ್ಲಿ ಮೃತಪಟ್ಟವರಲ್ಲಿ ದ್ವಿಚಕ್ರ ವಾಹನ ಸವಾರರೇ ಹೆಚ್ಚಾಗಿದ್ದಾರೆ. ಬೆಂಗಳೂರು ಉತ್ತರ ಟ್ರಾಫಿಕ್​ ಡಿಸಿಪಿ ಸಿರಿ ಗೌರಿ ಮಾತನಾಡಿ, ಮದ್ಯಪಾನ ಮಾಡಿ ಸ್ವಯಂ ಅಪಘಾತದಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಹಾಗೇ ಸವಾರರು ಹೆಲ್ಮೆಟ್ ಧರಿಸದೆ ಅಜಾಗರೂಕತೆಯಿಂದ ಸವಾರಿ ಮಾಡುವವರು ಅಧಿಕವಾಗಿದ್ದಾರೆ ಎಂದರು.

ಡ್ರೈವಿಂಗ್ ಸ್ಕೂಲ್‌ಗಳಿಗೆ 8 ಸಾವಿರ ಪಾವತಿಸಿ ಒಂದೇ ವಾರದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಾಹನ ಚಾಲಕರ ಕಳಪೆ ಚಾಲನಾ ಕೌಶಲ್ಯವೇ ಸ್ವಯಂ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸಂಚಾರ ತಜ್ಞ ಎಂ.ಎನ್.ಶ್ರೀಹರಿ ಹೇಳಿದರು. ಚಾಲನಾ ಕೌಶಲ್ಯವನ್ನು ಪರೀಕ್ಷಿಸುವ ಸಂಪೂರ್ಣ ವ್ಯವಸ್ಥೆಯನ್ನು ಬದಲಾಯಿಸಬೇಕು ಎಂದು ಅವರು ಸೂಚಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿನ ಫ್ಲೈಓವರ್, ಅಂಡರ್ ಪಾಸ್​ಗಳಲ್ಲಿ ಉರಿಯುತ್ತಿಲ್ಲ ಬೀದಿ ದೀಪಗಳು

ಯಾವುದೇ ನಾಲ್ಕು ತಪ್ಪುಗಳಿಗಾಗಿ, ವಾಹನ ಚಾಲಕರಿಗೆ ನೀಡಲಾದ ಪರವಾನಗಿಯನ್ನು ರದ್ದುಗೊಳಿಸಬೇಕು. ಭಾರತದಲ್ಲಿ, ಪರವಾನಗಿ ಪಡೆಯುವುದು ಸುಲಭ, ಈ ಲೈಸನ್ಸ್​ ವಾಹನ ಓಡಿಸಲು ಅಲ್ಲ ಕೊಲ್ಲಲು ಉಪಯೋಗಾವುತ್ತದೆ.

ನಿರ್ಲಕ್ಷ್ಯ, ಆಯಾಸ, ದುಡುಕಿನ ಚಾಲನೆ ಮತ್ತು ಕಳಪೆ ಕೌಶಲ್ಯದಿಂದ ಶೇ 68ರಷ್ಟು ಸ್ವಯಂ-ಅಪಘಾತಗಳು ಸಂಭವಿಸುತ್ತವೆ. ಆದರೆ ಶೇ 22 ರಷ್ಟು ಪ್ರಕರಣಗಳು ಹದಗೆಟ್ಟ ರಸ್ತೆ, ಮುನ್ನೆಚ್ಚರಿಕೆ ಫಲಕಗಳ ಕೊರತೆ ಇತ್ಯಾದಿಗಳಿಂದ ಉಂಟಾಗುತ್ತವೆ. ಕೆಟ್ಟ ರಸ್ತೆಯಲ್ಲಿ ಜಾಗರೂಕರಾಗಿ ವಾಹನ ಚಲಾಯಿಸುವುದು ಚಾಲಕನ ಬುದ್ಧಿವಂತಿಕೆ ಮತ್ತು ಕೌಶಲ್ಯ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ