AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವೀರ ಸಾವರ್ಕರ್ ನಾಮಫಲಕಕ್ಕೆ ಮಸಿ: ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರಿನ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್​ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವೀರ ಸಾವರ್ಕರ್ ನಾಮಫಲಕಕ್ಕೆ ಮಸಿ: ಬಿವೈ ವಿಜಯೇಂದ್ರ ಕಿಡಿ
ಬಿವೈ ವಿಜಯೇಂದ್ರ, ವೀರ್​ ಸಾವರ್ಕರ್​ ಹೆಸರಿಗೆ ಮಸಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 29, 2024 | 12:30 PM

Share

ಬೆಂಗಳೂರು, ಮೇ 29: ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ (Veer Savarkar) ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಖಂಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿದ ಅವರು “ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿ ಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್​ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ.”

ಇದನ್ನೂ ಓದಿ: ಸಾವರ್ಕರ್​​ ಮೇಲಿನ ಗೌರವಕ್ಕೆ ಈ ರೀತಿ ಬದಲಾದ ನಟ ರಣದೀಪ್​ ಹೂಡಾ

“ಸಾರ್ವಕರ್ ಅವರನ್ನು ಅಪಮಾನಿಸುವ ಸಂದರ್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರದರ್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ” ಎಂದು ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಏನಿದು ಘಟನೆ

ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಂಗಳವಾರ ಮಸಿ ಬಳಿದಿದ್ದರು. ಘಟನೆಯಲ್ಲಿ ನಿಶ್ಚಯ್‌ ಗೌಡ, ಲಕ್ಷಗೌಡ, ಪ್ರವೀಣ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಾವರ್ಕರ್ ಮೇಲ್ಸೇತುವೆ ನಾಮ ಫಲಕಕ್ಕೆ ಮಸಿ ಬಳಿದಿರುವ ಎನ್​ಎಸ್‌ಯುಐ ಕಾರ್ಯಕರ್ತರು, ವೀರ್​ ಸಾವರ್ಕ್​​ಗೆ ಸಿಗುತ್ತಿರುವ ಸಿಗುತ್ತಿರುವ ಗೌರವ ಭಗತ್​ ಸಿಂಗ್​ಗೆ ಸಿಗುತ್ತಿಲ್ಲ, ಸಾವರ್ಕರ್ ಸೇತುವೆ ಬದಲು ಭಗತ್ ಸಿಂಗ್ ಹೆಸರಿಡುವಂತೆ ಆಗ್ರಹಿಸಿ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಸಾವರ್ಕರ್​ ಹೆಸರಿಗೆ ಮತ್ತು ಭಾವಚಿತ್ರಕ್ಕೆ ಮಸಿ ಬಳಿದಿದ್ದರು. ಬಳಿಕ ಸೇತುವೆಗೆ ಭಗತ್ ಸಿಂಗ್ ಮೇಲ್ಲೇತುವೆ ಹೆಸರಿನ ಬ್ಯಾನರ್ ಹಾಕಿದ್ದರು.

ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರಕರ್ತರು ಹಾಗೂ ಜನರ ನಡುವೆ ವಾಗ್ವಾದ ಉಂಟಾಗಿತ್ತು. ಸ್ಥಳೀಯ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್, ಬಿಜೆಪಿ ಕಾರ್ಯಕರ್ತರು ಕೂಡ ಇದರ ವಿರುದ್ದ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಬಿಬಿಎಂಪಿಯ ಅಧಿಕಾರಿಗಳು ಯಲಹಂಕ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ