AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ
ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅನಕೊಂಡ ಹಾವುಗಳು
TV9 Web
| Edited By: ವಿವೇಕ ಬಿರಾದಾರ|

Updated on:Apr 23, 2024 | 9:34 AM

Share

ಬೆಂಗಳೂರು, ಏಪ್ರಿಲ್​ 23: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು (Anaconda Snake) ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್​ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್​ನನ್ನು ಪೊಲೀಸರು ​ಬಂಧಿಸಿದ್ದರು.

ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದರು.

ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದನು. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Tue, 23 April 24

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?