AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಎಫೆಕ್ಟ್: ನಮ್ಮ ಮೆಟ್ರೋದಲ್ಲಿ ಒಂದೇ ದಿನ 7, ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ

ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬೆಂಗಳೂರಿನಲ್ಲಿ ಅತಿ ದೊಡ್ಡ ಸಂಪರ್ಕ ಸಾರಿಗೆ. ಈ ಎರಡೂ ಸಂಪರ್ಕ ಸಾರಿಗೆಯಲ್ಲಿ ದಿನಕ್ಕೆ ಲಕ್ಷಾಂತರ ಜನರು ಸಂಚರಿಸುತ್ತಾರೆ. ಇದೀಗ ಬೇಸಿಗೆಯಲ್ಲಿ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಾರಣ ಬೇಸಿಗೆ ರಜೆ ಮತ್ತು ಸುಡುವ ರಣ ಬಿಸಿಲು. ಹಾಗಿದ್ದರೆ ಎಷ್ಟು ಹೆಚ್ಚಾಗಿದೆ ಈ ಸ್ಟೋರಿ ಓದಿ..

ಬೇಸಿಗೆ ಎಫೆಕ್ಟ್: ನಮ್ಮ ಮೆಟ್ರೋದಲ್ಲಿ ಒಂದೇ ದಿನ 7, ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ
ನಮ್ಮ ಮೆಟ್ರೋ, ಬಿಎಂಟಿಸಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Apr 20, 2024 | 8:09 AM

Share

ಬೆಂಗಳೂರು, ಏಪ್ರಿಲ್​ 20: ಬೆಂಗಳೂರು ಮಹಾನಗರ ಸಾರಿಗೆ (BMTC) ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರಾಜಧಾನಿಯ ಎರಡು ಕಣ್ಣುಗಳು ಇದ್ದಂತೆ. ಸಿಲಿಕಾನ್ ಸಿಟಿಯ ಜನರ ಪಾಲಿಗೆ ಪ್ರಮುಖ ಸಂಪರ್ಕ ಸಾರಿಗೆಗಳು. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರಿಂದ ಜನರು ತಂಪನೆಯ ವಾತಾವರಣ ಬಯಸುತ್ತಿದ್ದಾರೆ. ರಣ ಬಿಸಿಲಿನಲ್ಲಿ ಟ್ರಾಫಿಕ್​ನಲ್ಲಿ ಬೈಕ್ ಮತ್ತು ಕಾರಿನಲ್ಲಿ ಸಂಚಾರ ಜನರನ್ನು ಹೈರಾಣಾಗಿಸಿದೆ. ಹೀಗಾಗಿ ಜನರು ಕಾರು, ಬೈಕು ಬಿಟ್ಟು ನಮ್ಮ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚಿರಿಸುತ್ತಿದ್ದಾರೆ.

ಬಿಸಿಲ ಹೊಡೆತಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏಕಾಏಕಿ ಏರಿಕೆಯಾಗಿದೆ. ಒಂದೇ ದಿನ ನಮ್ಮ ಮೆಟ್ರೋದಲ್ಲಿ ದಾಖಲೆಯ 7.9 ಲಕ್ಷ ಜನ ಪ್ರಯಾಣ ಮಾಡಿದ್ದಾರೆ. ಮೆಟ್ರೋದಲ್ಲಿ ಎಸಿ ಇರುತ್ತೆ ಜೊತೆಗೆ ಟ್ರಾಫಿಕ್ ಕಿರಿಕಿರಿಯಿಲ್ಲದೆ ಹೋಗಬಹುದು ಅಂತ ಪ್ರಯಾಣಿಕರು ಮೆಟ್ರೋ ಮೊರೆ ಹೋಗುತ್ತಿದ್ದಾರೆ.

ಇನ್ನು ಈ ಬಿಸಿಲ ಹೊಡೆತ ಮುಂದುವರಿದರೆ, ಕೆಲ ದಿನಗಳಲ್ಲಿಯೇ ಪ್ರಯಾಣಿಕರ ಸಂಖ್ಯೆ 8 ಲಕ್ಷ ದಾಟುವ ನಿರೀಕ್ಷೆಯೂ ಇದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಬಿಎಂಟಿಸಿಯಲ್ಲೂ ಏಕಾಏಕಿ ಒಂದೇ ದಿನಕ್ಕೆ 10 ಲಕ್ಷ ಜನ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಬಿಎಂಟಿಎಸಿ ಎಸಿ‌ ಬಸ್​ಗಳಿಗಂತು ಡಿಮ್ಯಾಂಡ್ ಹೆಚ್ಚಾಗಿದೆ. ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಆಗಿದೆ ಈ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆಯಿಂದ ಬಹುತೇಕರು ಬೆಂಗಳೂರಿಗೆ ಪ್ರವಾಸ ಬರುತ್ತಿದ್ದಾರೆ. ಇದರಿಂದ ಬಿಎಂಟಿಸಿ, ನಮ್ಮ ಮೆಟ್ರೋ ಏರಿ ಬೆಂಗಳೂರಿನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಸಿಗುತ್ತಿಲ್ಲ ಚಾಲಕರು, ಸಂಬಳ ಸರಿಯಾಗಿ ಕೊಡದಿರುವುದೇ ಕಾರಣ

ಈ ಹಿಂದೆ ನಮ್ಮ ಮೆಟ್ರೋದಲ್ಲಿ 5 ರಿಂದ 6 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರೆ, ಬಿಎಂಟಿಸಿಯಲ್ಲಿ 30 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೇಸಿಗೆಗೆ ಬರೋಬ್ಬರಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ.

ನಮ್ಮ ಮಕ್ಕಳ ಶಾಲೆ ರಜೆ ಇದೆ. ಹೀಗಾಗಿ ಬಿಎಂಟಿಸಿ ಎಸಿ ಬಸ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್​ಗೆ ಹೋಗುತ್ತಿದ್ದೇವೆ ಎಂದು ಪೋಷಕಿ ದಿವ್ಯಾ ಹೇಳಿದ್ದಾರೆ.

ಒಟ್ಟಿನಲ್ಲಿ ಬೇಸಿಗೆಯ ಸುಡು ಬಿಸಿಲಿಗೆ ಬೈಕ್, ಆಟೋ ಅಂತ ಪ್ರಯಾಣ ಮಾಡುತ್ತಿದ್ದವರೆಲ್ಲ ಮೆಟ್ರೋ ಮತ್ತು ಬಿಎಂಟಿಸಿ ಬಸ್​ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿಯೇ ಎರಡರಲ್ಲೂ ಪ್ರಯಾಣಿಕರ ಸಂಖ್ಯೆ ವಿಪರೀತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?