AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ಎಫೆಕ್ಟ್: ನಮ್ಮ ಮೆಟ್ರೋದಲ್ಲಿ ಒಂದೇ ದಿನ 7, ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ

ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬೆಂಗಳೂರಿನಲ್ಲಿ ಅತಿ ದೊಡ್ಡ ಸಂಪರ್ಕ ಸಾರಿಗೆ. ಈ ಎರಡೂ ಸಂಪರ್ಕ ಸಾರಿಗೆಯಲ್ಲಿ ದಿನಕ್ಕೆ ಲಕ್ಷಾಂತರ ಜನರು ಸಂಚರಿಸುತ್ತಾರೆ. ಇದೀಗ ಬೇಸಿಗೆಯಲ್ಲಿ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಾರಣ ಬೇಸಿಗೆ ರಜೆ ಮತ್ತು ಸುಡುವ ರಣ ಬಿಸಿಲು. ಹಾಗಿದ್ದರೆ ಎಷ್ಟು ಹೆಚ್ಚಾಗಿದೆ ಈ ಸ್ಟೋರಿ ಓದಿ..

ಬೇಸಿಗೆ ಎಫೆಕ್ಟ್: ನಮ್ಮ ಮೆಟ್ರೋದಲ್ಲಿ ಒಂದೇ ದಿನ 7, ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ
ನಮ್ಮ ಮೆಟ್ರೋ, ಬಿಎಂಟಿಸಿ
Kiran Surya
| Edited By: |

Updated on: Apr 20, 2024 | 8:09 AM

Share

ಬೆಂಗಳೂರು, ಏಪ್ರಿಲ್​ 20: ಬೆಂಗಳೂರು ಮಹಾನಗರ ಸಾರಿಗೆ (BMTC) ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರಾಜಧಾನಿಯ ಎರಡು ಕಣ್ಣುಗಳು ಇದ್ದಂತೆ. ಸಿಲಿಕಾನ್ ಸಿಟಿಯ ಜನರ ಪಾಲಿಗೆ ಪ್ರಮುಖ ಸಂಪರ್ಕ ಸಾರಿಗೆಗಳು. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರಿಂದ ಜನರು ತಂಪನೆಯ ವಾತಾವರಣ ಬಯಸುತ್ತಿದ್ದಾರೆ. ರಣ ಬಿಸಿಲಿನಲ್ಲಿ ಟ್ರಾಫಿಕ್​ನಲ್ಲಿ ಬೈಕ್ ಮತ್ತು ಕಾರಿನಲ್ಲಿ ಸಂಚಾರ ಜನರನ್ನು ಹೈರಾಣಾಗಿಸಿದೆ. ಹೀಗಾಗಿ ಜನರು ಕಾರು, ಬೈಕು ಬಿಟ್ಟು ನಮ್ಮ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚಿರಿಸುತ್ತಿದ್ದಾರೆ.

ಬಿಸಿಲ ಹೊಡೆತಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏಕಾಏಕಿ ಏರಿಕೆಯಾಗಿದೆ. ಒಂದೇ ದಿನ ನಮ್ಮ ಮೆಟ್ರೋದಲ್ಲಿ ದಾಖಲೆಯ 7.9 ಲಕ್ಷ ಜನ ಪ್ರಯಾಣ ಮಾಡಿದ್ದಾರೆ. ಮೆಟ್ರೋದಲ್ಲಿ ಎಸಿ ಇರುತ್ತೆ ಜೊತೆಗೆ ಟ್ರಾಫಿಕ್ ಕಿರಿಕಿರಿಯಿಲ್ಲದೆ ಹೋಗಬಹುದು ಅಂತ ಪ್ರಯಾಣಿಕರು ಮೆಟ್ರೋ ಮೊರೆ ಹೋಗುತ್ತಿದ್ದಾರೆ.

ಇನ್ನು ಈ ಬಿಸಿಲ ಹೊಡೆತ ಮುಂದುವರಿದರೆ, ಕೆಲ ದಿನಗಳಲ್ಲಿಯೇ ಪ್ರಯಾಣಿಕರ ಸಂಖ್ಯೆ 8 ಲಕ್ಷ ದಾಟುವ ನಿರೀಕ್ಷೆಯೂ ಇದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಬಿಎಂಟಿಸಿಯಲ್ಲೂ ಏಕಾಏಕಿ ಒಂದೇ ದಿನಕ್ಕೆ 10 ಲಕ್ಷ ಜನ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಬಿಎಂಟಿಎಸಿ ಎಸಿ‌ ಬಸ್​ಗಳಿಗಂತು ಡಿಮ್ಯಾಂಡ್ ಹೆಚ್ಚಾಗಿದೆ. ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಆಗಿದೆ ಈ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆಯಿಂದ ಬಹುತೇಕರು ಬೆಂಗಳೂರಿಗೆ ಪ್ರವಾಸ ಬರುತ್ತಿದ್ದಾರೆ. ಇದರಿಂದ ಬಿಎಂಟಿಸಿ, ನಮ್ಮ ಮೆಟ್ರೋ ಏರಿ ಬೆಂಗಳೂರಿನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಸಿಗುತ್ತಿಲ್ಲ ಚಾಲಕರು, ಸಂಬಳ ಸರಿಯಾಗಿ ಕೊಡದಿರುವುದೇ ಕಾರಣ

ಈ ಹಿಂದೆ ನಮ್ಮ ಮೆಟ್ರೋದಲ್ಲಿ 5 ರಿಂದ 6 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರೆ, ಬಿಎಂಟಿಸಿಯಲ್ಲಿ 30 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೇಸಿಗೆಗೆ ಬರೋಬ್ಬರಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ.

ನಮ್ಮ ಮಕ್ಕಳ ಶಾಲೆ ರಜೆ ಇದೆ. ಹೀಗಾಗಿ ಬಿಎಂಟಿಸಿ ಎಸಿ ಬಸ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್​ಗೆ ಹೋಗುತ್ತಿದ್ದೇವೆ ಎಂದು ಪೋಷಕಿ ದಿವ್ಯಾ ಹೇಳಿದ್ದಾರೆ.

ಒಟ್ಟಿನಲ್ಲಿ ಬೇಸಿಗೆಯ ಸುಡು ಬಿಸಿಲಿಗೆ ಬೈಕ್, ಆಟೋ ಅಂತ ಪ್ರಯಾಣ ಮಾಡುತ್ತಿದ್ದವರೆಲ್ಲ ಮೆಟ್ರೋ ಮತ್ತು ಬಿಎಂಟಿಸಿ ಬಸ್​ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿಯೇ ಎರಡರಲ್ಲೂ ಪ್ರಯಾಣಿಕರ ಸಂಖ್ಯೆ ವಿಪರೀತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ