AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಬೆಂಗಳೂರಿನ ದೇವನಗಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇನಲ್ಲಿ ಭದ್ರತಾ ದೃಷ್ಟಿಯಿಂದ ವಿಡಿಯೋ ಚಿತ್ರೀಕರಣವನ್ನು ನಿರ್ಭಂದಿಸಲಾಗಿದೆ. ಈ ನಿಯಮವನ್ನು ಮೀರಿ ಯಲಹಂಕದ ಓರ್ವ ಯೂಟ್ಯೂಬರ್ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ
ಬಂಧಿತ ವಿಕಾಸ್​ ಗೌಡ
Shivaprasad B
| Edited By: |

Updated on:Apr 23, 2024 | 9:32 AM

Share

ಬೆಂಗಳೂರು, ಏಪ್ರಿಲ್​ 19: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರನ್​ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್​ನನ್ನು (Youtuber) ಪೊಲೀಸರು ​ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್.

ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಇದನ್ನೂ ಓದಿ: ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ

ನಂತರ ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:19 am, Wed, 17 April 24

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು