AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಬೆಂಗಳೂರಿನ ದೇವನಗಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇನಲ್ಲಿ ಭದ್ರತಾ ದೃಷ್ಟಿಯಿಂದ ವಿಡಿಯೋ ಚಿತ್ರೀಕರಣವನ್ನು ನಿರ್ಭಂದಿಸಲಾಗಿದೆ. ಈ ನಿಯಮವನ್ನು ಮೀರಿ ಯಲಹಂಕದ ಓರ್ವ ಯೂಟ್ಯೂಬರ್ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ
ಬಂಧಿತ ವಿಕಾಸ್​ ಗೌಡ
Shivaprasad B
| Edited By: |

Updated on:Apr 23, 2024 | 9:32 AM

Share

ಬೆಂಗಳೂರು, ಏಪ್ರಿಲ್​ 19: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರನ್​ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್​ನನ್ನು (Youtuber) ಪೊಲೀಸರು ​ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್.

ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಇದನ್ನೂ ಓದಿ: ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ

ನಂತರ ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:19 am, Wed, 17 April 24

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ