AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ.

Bengaluru News: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ
ಮಹಿಳೆಯ ಬೈಕ್​, ಕೆಎಸ್​ಆರ್​ಟಿಸಿ ಬಸ್
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 5:07 PM

Share

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ (KSRTC bus) ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್​ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್​ನಲ್ಲಿ ಬಟ್ಟೆ ಅಂಗಡಿಗೆ ಶಾಪಿಂಗ್​ಗಾಗಿ ತೆರಳುತ್ತಿದ್ದರು. ಮತ್ತೊಂದು ಬೈಕ್​ನಲ್ಲಿ ಪುತ್ರಿ ಕೂಡ ತೆರಳುತ್ತಿದ್ದರು. ಈ ವೇಳೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಸ್ ಬಂದಿದ್ದು, ಬಸ್​​ ಹಿಂಬದಿ ದ್ವಿಚಕ್ರ ವಾಹನಕ್ಕೆ ಟಚ್ ಆಗಿ ಇಬ್ಬರು ರಸ್ತೆಗೆ ಬಿದ್ದಿದ್ದಾರೆ.

ಈ ವೇಳೆ ಮಹಿಳೆ ಮೇಲೆ ಬಸ್​​ ಹರಿದಿದೆ. ಸದ್ಯ ಲತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾಡಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಅಕ್ಕ ತಂಗಿ ಆತ್ಮಹತ್ಯೆ

ಧಾರವಾಡ: ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಸೀರೆಯಿಂದ ನೇಣುಬಿಗಿದುಕೊಂಡು ಅಕ್ಕ ಮತ್ತು ತಂಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಭೂಮಿಕಾ ಹಡಪದ(19), ತಂಗಿ ಕಾವೇರಿ ಹಡಪದ(17) ಮೃತ ಸಹೋದರಿಯರು. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿದ ‘ಕಿಂಗ್ ಕೊಹ್ಲಿ’

ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರುಣ್​ಗೆ ಚಾಕು ಇರಿದು ಕಬಾಬ್ ಮೂರ್ತಿ ಎಂಬಾತ ಪರಾರಿಯಾಗಿದ್ದ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ: ಬೆಸ್ಕಾಂಗೆ ನಕಲಿ ನೇಮಕಾತಿ ಮಾಡಿದ್ದ ಅರೋಪಿಗಳು ಅರೆಸ್ಟ್

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:51 pm, Sun, 4 June 23

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ