AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Mango Mela: ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ಮಾವು ಮೇಳ

ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ ಆವರಣದಲ್ಲಿ ಜೂನ್ 11 ರವರೆಗೆ 9 ದಿನಗಳ ಕಾಲ ಮಾವು ಮೇಳ ನಡೆಯಲಿದೆ.

Lalbagh Mango Mela: ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ಮಾವು ಮೇಳ
ಸಾಂದರ್ಭಿಕ ಚಿತ್ರ
Ganapathi Sharma
|

Updated on:May 31, 2023 | 5:10 PM

Share

ಬೆಂಗಳೂರು: ಕರ್ನಾಟಕ ತೋಟಗಾರಿಕೆ ಇಲಾಖೆ (Horticulture department) ವತಿಯಿಂದ ಲಾಲ್‌ಬಾಗ್‌ನಲ್ಲಿ (Lalbagh) ಆಯೋಜಿಸಲಾಗುವ ವಾರ್ಷಿಕ ಮಾವು ಮೇಳವು ಈ ವರ್ಷ ಜೂನ್ 2 ರಂದು ಆರಂಭವಾಗಲಿದೆ. ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ (Lalbagh Botanical Garden) ಆವರಣದಲ್ಲಿ ಮಾವು ಮೇಳ ನಡೆಯಲಿದೆ. ಮಾವಿನ ಮೇಳವು ಜೂನ್ 11 ರವರೆಗೆ 9 ದಿನಗಳ ಕಾಲ ನಡೆಯಲಿದೆ ಮತ್ತು ಎಲ್ಲಾ ಗ್ರಾಹಕರಿಗೆ ಉಚಿತ ಪ್ರವೇಶ ನೀಡಲಾಗಿದೆ. ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದ ಬೆಳೆಗಾರರು ಮಳಿಗೆಗಳನ್ನು ತೆರೆಯಲಿದ್ದು ಮಾವು ಮಾರಾಟ ಮಾಡಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಪ್ರತಿ ವರ್ಷ ಸುಮಾರು 100 ರಿಂದ 120 ರಷ್ಟು ಮಳಿಗೆಗಳು ಮಾವು ಮೇಳದಲ್ಲಿರುತ್ತವೆ. ಆದರೆ, ಈ ವರ್ಷ ಇಳುವರಿ ಕಡಿಮೆಯಾಗಿರುವುದರಿಂದಾಗಿ ಮಳಿಗೆಗಳ ಸಂಖ್ಯೆಯನ್ನು 40 ಕ್ಕೆ ಇಳಿಸಲಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಈ ವರ್ಷ ಆಲಿಕಲ್ಲು ಮಳೆಯಿಂದಾಗಿ ಮಾವಿನ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಡಿಮೆ ಮಳಿಗೆಗಳನ್ನು ತೆರೆಯಲಾಗುತ್ತಿದೆ.

ಮಾವು ಮೇಳ ವಿಳಂಬಕ್ಕೆ ಕಾರಣವೇನು?

ಸಾಮಾನ್ಯವಾಗಿ ಪ್ರತಿ ವರ್ಷ ಲಾಲ್​ಬಾಗ್​ನಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಾವು ಮೇಳ ನಡೆಯುತ್ತದೆ. ಆದರೆ ಈ ಬಾರಿ ವಿಧಾನಸಭಾ ಚುನಾವಣೆಯಿಂದಾಗಿ ವಿಳಂಬವಾಗಿದೆ.

ಇದನ್ನೂ ಓದಿ: Mango Price: ಮಾವು ಪ್ರಿಯರಿಗೆ ಕಹಿ ಸುದ್ದಿ, ಈ ಬಾರಿ ಬೆಲೆ ದುಬಾರಿ: ದರ ಏರಿಕೆಯ ಸತ್ಯ ಇಲ್ಲಿದೆ

ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಮಾವು ಬೆಳೆಗಾರರು ಇಲ್ಲಿ ಮಳಿಗೆಗಳನ್ನು ತೆರೆಯುತ್ತಾರೆ. ವಿವಿಧ ತಳಿಗಳ ಹಣ್ಣುಗಳು ಮಾವು ಪ್ರಿಯರನ್ನು ಸೆಳೆಯುತ್ತವೆ. ಮಲ್ಲಿಕಾ, ಮಾಲ್ಗೋವಾ, ಸೆಂಧೂರ, ಸಕ್ಕರೆಗುತ್ತಿ ಮತ್ತು ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ಮಾವು ಮೇಳದಲ್ಲಿ ಮಾರಾಟ ಮಾಡಲಾಗುತ್ತದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:09 pm, Wed, 31 May 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು