Lalbagh Mango Mela: ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ಮಾವು ಮೇಳ

ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ ಆವರಣದಲ್ಲಿ ಜೂನ್ 11 ರವರೆಗೆ 9 ದಿನಗಳ ಕಾಲ ಮಾವು ಮೇಳ ನಡೆಯಲಿದೆ.

Lalbagh Mango Mela: ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ಮಾವು ಮೇಳ
ಸಾಂದರ್ಭಿಕ ಚಿತ್ರ
Follow us
|

Updated on:May 31, 2023 | 5:10 PM

ಬೆಂಗಳೂರು: ಕರ್ನಾಟಕ ತೋಟಗಾರಿಕೆ ಇಲಾಖೆ (Horticulture department) ವತಿಯಿಂದ ಲಾಲ್‌ಬಾಗ್‌ನಲ್ಲಿ (Lalbagh) ಆಯೋಜಿಸಲಾಗುವ ವಾರ್ಷಿಕ ಮಾವು ಮೇಳವು ಈ ವರ್ಷ ಜೂನ್ 2 ರಂದು ಆರಂಭವಾಗಲಿದೆ. ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ (Lalbagh Botanical Garden) ಆವರಣದಲ್ಲಿ ಮಾವು ಮೇಳ ನಡೆಯಲಿದೆ. ಮಾವಿನ ಮೇಳವು ಜೂನ್ 11 ರವರೆಗೆ 9 ದಿನಗಳ ಕಾಲ ನಡೆಯಲಿದೆ ಮತ್ತು ಎಲ್ಲಾ ಗ್ರಾಹಕರಿಗೆ ಉಚಿತ ಪ್ರವೇಶ ನೀಡಲಾಗಿದೆ. ಮೇಳದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದ ಬೆಳೆಗಾರರು ಮಳಿಗೆಗಳನ್ನು ತೆರೆಯಲಿದ್ದು ಮಾವು ಮಾರಾಟ ಮಾಡಲಿದ್ದಾರೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಪ್ರತಿ ವರ್ಷ ಸುಮಾರು 100 ರಿಂದ 120 ರಷ್ಟು ಮಳಿಗೆಗಳು ಮಾವು ಮೇಳದಲ್ಲಿರುತ್ತವೆ. ಆದರೆ, ಈ ವರ್ಷ ಇಳುವರಿ ಕಡಿಮೆಯಾಗಿರುವುದರಿಂದಾಗಿ ಮಳಿಗೆಗಳ ಸಂಖ್ಯೆಯನ್ನು 40 ಕ್ಕೆ ಇಳಿಸಲಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಈ ವರ್ಷ ಆಲಿಕಲ್ಲು ಮಳೆಯಿಂದಾಗಿ ಮಾವಿನ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಡಿಮೆ ಮಳಿಗೆಗಳನ್ನು ತೆರೆಯಲಾಗುತ್ತಿದೆ.

ಮಾವು ಮೇಳ ವಿಳಂಬಕ್ಕೆ ಕಾರಣವೇನು?

ಸಾಮಾನ್ಯವಾಗಿ ಪ್ರತಿ ವರ್ಷ ಲಾಲ್​ಬಾಗ್​ನಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಾವು ಮೇಳ ನಡೆಯುತ್ತದೆ. ಆದರೆ ಈ ಬಾರಿ ವಿಧಾನಸಭಾ ಚುನಾವಣೆಯಿಂದಾಗಿ ವಿಳಂಬವಾಗಿದೆ.

ಇದನ್ನೂ ಓದಿ: Mango Price: ಮಾವು ಪ್ರಿಯರಿಗೆ ಕಹಿ ಸುದ್ದಿ, ಈ ಬಾರಿ ಬೆಲೆ ದುಬಾರಿ: ದರ ಏರಿಕೆಯ ಸತ್ಯ ಇಲ್ಲಿದೆ

ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಮಾವು ಬೆಳೆಗಾರರು ಇಲ್ಲಿ ಮಳಿಗೆಗಳನ್ನು ತೆರೆಯುತ್ತಾರೆ. ವಿವಿಧ ತಳಿಗಳ ಹಣ್ಣುಗಳು ಮಾವು ಪ್ರಿಯರನ್ನು ಸೆಳೆಯುತ್ತವೆ. ಮಲ್ಲಿಕಾ, ಮಾಲ್ಗೋವಾ, ಸೆಂಧೂರ, ಸಕ್ಕರೆಗುತ್ತಿ ಮತ್ತು ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ಮಾವು ಮೇಳದಲ್ಲಿ ಮಾರಾಟ ಮಾಡಲಾಗುತ್ತದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:09 pm, Wed, 31 May 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ