AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪಿಜಿಯಲ್ಲಿ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು

ಆರ್ಯಕುಮಾರ್ ನಡ್ಡಾ ಎಂಬ 23 ವರ್ಷದ ಲಾ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಿಮಾಚಲ ಪ್ರದೇಶ ಮೂಲದ ಆರ್ಯಕುಮಾರ್ ಓದಿನ ಸಲುವಾಗಿ ನಗರಕ್ಕೆ ಬಂದು ಪಿಜಿಯಲ್ಲಿ ನೆಲೆಸಿದ್ದ.

ಬೆಂಗಳೂರು: ಪಿಜಿಯಲ್ಲಿ ಕಾನೂನು ವಿದ್ಯಾರ್ಥಿ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 07, 2023 | 2:19 PM

ಬೆಂಗಳೂರು, ಆ.07: ನಗರದ ಖಾಸಗಿ ಕಾಲೇಜಿನಲ್ಲಿ ಕಾನೂನು ಓದುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಆರ್ಯಕುಮಾರ್ ಕೊಠಡಿಯಲ್ಲಿ ಯಾರು ಇಲ್ಲದಿದ್ದಾಗ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನೇಹಿತರು ಪಿಜಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆಗಮಿಸಿದ್ದು ಯುಡಿಆರ್ ದಾಖಲಿಸಿದ್ದಾರೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಡಿ.ಗ್ರೂಪ್ ಲೇಔಟ್ ಸಮೀಪದ ಶ್ರೀಗಂಧ ಕಾವಲು ಬಡಾವಣೆಯಲ್ಲಿ ಪಿಜಿಯಲ್ಲಿ ನೆಲೆಸಿದ್ದ ಆರ್ಯಕುಮಾರ್ ನಡ್ಡಾ ಎಂಬ 23 ವರ್ಷದ ಲಾ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಿಮಾಚಲ ಪ್ರದೇಶ ಮೂಲದ ಆರ್ಯಕುಮಾರ್ ಓದಿನ ಸಲುವಾಗಿ ನಗರಕ್ಕೆ ಬಂದು ಪಿಜಿಯಲ್ಲಿ ನೆಲೆಸಿದ್ದ. ಸಮೀಪದ ಖಾಸಗಿ ಕಾನೂನು ಕಾಲೇಜಿನಲ್ಲಿ 3ನೇ ವರ್ಷದ ಕಾನೂನು ಪದವಿಯಲ್ಲಿ ಓದುತ್ತಿದ್ದ. ಇನ್ನು ಆರ್ಯಕುಮಾರ್​ ಕಳೆದ 10 ವರ್ಷದಿಂದ ತೀವ್ರ ಮೈಗ್ರೇನ್‌ನಿಂದ ಬಳಲುತ್ತಿದ್ದ. ಮೈಗ್ರೇನ್ ನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅನ್ನಪೂರ್ಣೇಶ್ವರಿ ನಗರ ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಶಿವಮೊಗ್ಗ ನಗರದಲ್ಲಿ ಕರಾಟೆ ಕಲರವ, ಗಮನ ಸೆಳೆದ ಕರಾಟೆ ಫೈಟ್- 4ನೇ ಅಂತರಾಷ್ಟ್ರೀಯ ಶಿವಮೊಗ್ಗ ಓಪನ್ ಕರಾಟೆ

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನೆಲೆಸಿರುವ ಮೃತನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ನಗರಕ್ಕೆ ಬಂದ ಮೇಲೆ ಮರಣೋತ್ತರ ಪರೀಕ್ಷೆ ಒಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು. ತನಿಖೆ ವೇಳೆ ಸಾವಿಗೆ ಬೇರೆ ಯಾವುದೇ ಕಾರಣ ಪತ್ತೆಯಾಗದ ಕಾರಣ, ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ನಿಮಗೆ ಬೆಂಬಲ ಬೇಕಾದರೆ ಅಥವಾ ಆತ್ಮಹತ್ಯಾ ಆಲೋಚನೆಗಳನ್ನು ಹೊಂದಿರುವ ಯಾರಾದರೂ ತಿಳಿದಿದ್ದರೆ, ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಅಥವಾ ಭಾವನಾತ್ಮಕ ಬೆಂಬಲವನ್ನು ನೀಡುವ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಪರಿವರ್ತನ್ ಕೌನ್ಸೆಲಿಂಗ್ ಸಹಾಯವಾಣಿ ಸೇವೆಗಳು +91 7676 602 602; ಸಹಾಯ ವಾಣಿ ಸಂಖ್ಯೆ, +91 080 25497777, 9886444075, +91 9880396331, ಆರೋಗ್ಯ ಸಹಾಯವಾಣಿ -104.)

ಬೆಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:34 pm, Mon, 7 August 23

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ