AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ

ಶನಿವಾರದಿಂದ ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ದ್ವಿಚಕ್ರವಾಹನ, ಆಟೋರಿಕ್ಷಾ ಮತ್ತು ಕಾರುಗಳಂತಹ ಲಘು ಮೋಟಾರು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು BBMP ಅಧಿಕಾರಿಗಳು ತಿಳಿಸಿದ್ದಾರೆ.

Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ
ಯಮಲೂರು-ಬೆಳ್ಳಂದೂರು ಕೆರೆ ರಸ್ತೆ
TV9 Web
| Edited By: |

Updated on: Jun 03, 2023 | 3:24 PM

Share

ಬೆಂಗಳೂರು: ದುರಸ್ತಿ ಕಾರ್ಯ ಹಿನ್ನೆಲೆ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯನ್ನು(Yemalur-Bellandur Lake Road) ಶನಿವಾರ ದ್ವಿಚಕ್ರವಾಹನ, ಆಟೋರಿಕ್ಷಾ ಮತ್ತು ಕಾರುಗಳಂತಹ ಲಘು ಮೋಟಾರು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ತಿಳಿಸಿದ್ದಾರೆ. ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ ಮಾತನಾಡಿ, ಸೇತುವೆ ಮರುನಿರ್ಮಾಣದಿಂದಾಗಿ ಯಮಲೂರು-ಬೆಳ್ಳಂದೂರು ಕೆರೆ ಕೋಡಿ ರಸ್ತೆ ಬಂದ್ ಆಗಿತ್ತು. ಹೆವಿ ವಾಹನಗಳ ಸಂಚಾರಕ್ಕೆ ಸದ್ಯ ಅನುಮತಿ ಇಲ್ಲ. ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಹಳೆಯ ಸೇತುವೆ ಕೇವಲ 12 ಮೀಟರ್ ಅಗಲವಿದ್ದು, ಮರುನಿರ್ಮಾಣ ಮಾಡಲಾಗಿದೆ ಎಂದು ಇಂಜಿನಿಯರ್ ಬಸವರಾಜ ಕಬಾಡೆ ಮಾಹಿತಿ ನೀಡಿದರು. “ತೆರಪಿನ ಅಗಲವು ಕೇವಲ 15-16 ಮೀಟರ್ ಆಗಿತ್ತು. ಈಗ ನೀರು ಹರಿಯುವಂತೆ ಸಂಪರ್ಗ ಗಾತ್ರವನ್ನು 24 ಮೀಟರ್‌ಗೆ ಮತ್ತು ರಸ್ತೆಯ ಅಗಲವನ್ನು 30 ಮೀಟರ್‌ಗೆ ಹೆಚ್ಚಿಸುತ್ತಿದ್ದೇವೆ. ರಸ್ತೆ ಮಟ್ಟಕ್ಕಿಂತ ಸುಮಾರು ಎರಡು ಅಡಿ ಎತ್ತರವಿದ್ದು, ಬೆಳ್ಳಂದೂರು ಕೆರೆಯಿಂದ ನೀರು ಸರಾಗವಾಗಿ ಹರಿಯುತ್ತದೆ ಎಂದರು.

ಶುಕ್ರವಾರ ರಸ್ತೆ ಬಂದ್‌ ಮಾಡಿದ್ದರಿಂದ ಬೆಂಗಳೂರು ನಿವಾಸಿಗಳು ದಿನನಿತ್ಯದ ಸಂಚಾರಕ್ಕೆ ತೊಂದರೆ ಅನುಭವಿಸಿದರು. ಹಲವು ಸ್ಥಳೀಯರು ವಾಹನ ಸಂಚಾರದ ವೇಳೆ ತಾವು ಎದುರಿಸಿದ ಕೆಟ್ಟ ಪರಿಸ್ಥಿತಿಯ ಬಗ್ಗೆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ

ಫುಡ್ ಬ್ಲಾಗರ್ ಹೇಮಂತ್ ಕಾಮತ್ ಎಂಬುವವರು ಟ್ವೀಟ್ ಮಾಡಿ, ಬೆಳ್ಳಂದೂರು ಕೆರೆ ರಸ್ತೆ ದುರಸ್ತಿ ಕಾರ್ಯ ಹಿನ್ನೆಲೆ ಬಂದ್ ಆಗಿದ್ದು, ನೀವು ಮಾರತ್ತಹಳ್ಳಿ ರಸ್ತೆ ಮೂಲಕ ಸಂಚರಿಸಬಹುದು. ಹಾಗೂ ಕೋರಮಂಗಲದಿಂದ ಬರಬಹುದು ಆದರೆ ಟ್ರಾಫಿಕ್ ಹೆಚ್ಚಿರುತ್ತೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!