Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ

ಶನಿವಾರದಿಂದ ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ದ್ವಿಚಕ್ರವಾಹನ, ಆಟೋರಿಕ್ಷಾ ಮತ್ತು ಕಾರುಗಳಂತಹ ಲಘು ಮೋಟಾರು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು BBMP ಅಧಿಕಾರಿಗಳು ತಿಳಿಸಿದ್ದಾರೆ.

Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ
ಯಮಲೂರು-ಬೆಳ್ಳಂದೂರು ಕೆರೆ ರಸ್ತೆ
Follow us
| Updated By: ಆಯೇಷಾ ಬಾನು

Updated on: Jun 03, 2023 | 3:24 PM

ಬೆಂಗಳೂರು: ದುರಸ್ತಿ ಕಾರ್ಯ ಹಿನ್ನೆಲೆ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯನ್ನು(Yemalur-Bellandur Lake Road) ಶನಿವಾರ ದ್ವಿಚಕ್ರವಾಹನ, ಆಟೋರಿಕ್ಷಾ ಮತ್ತು ಕಾರುಗಳಂತಹ ಲಘು ಮೋಟಾರು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ತಿಳಿಸಿದ್ದಾರೆ. ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ ಮಾತನಾಡಿ, ಸೇತುವೆ ಮರುನಿರ್ಮಾಣದಿಂದಾಗಿ ಯಮಲೂರು-ಬೆಳ್ಳಂದೂರು ಕೆರೆ ಕೋಡಿ ರಸ್ತೆ ಬಂದ್ ಆಗಿತ್ತು. ಹೆವಿ ವಾಹನಗಳ ಸಂಚಾರಕ್ಕೆ ಸದ್ಯ ಅನುಮತಿ ಇಲ್ಲ. ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಹಳೆಯ ಸೇತುವೆ ಕೇವಲ 12 ಮೀಟರ್ ಅಗಲವಿದ್ದು, ಮರುನಿರ್ಮಾಣ ಮಾಡಲಾಗಿದೆ ಎಂದು ಇಂಜಿನಿಯರ್ ಬಸವರಾಜ ಕಬಾಡೆ ಮಾಹಿತಿ ನೀಡಿದರು. “ತೆರಪಿನ ಅಗಲವು ಕೇವಲ 15-16 ಮೀಟರ್ ಆಗಿತ್ತು. ಈಗ ನೀರು ಹರಿಯುವಂತೆ ಸಂಪರ್ಗ ಗಾತ್ರವನ್ನು 24 ಮೀಟರ್‌ಗೆ ಮತ್ತು ರಸ್ತೆಯ ಅಗಲವನ್ನು 30 ಮೀಟರ್‌ಗೆ ಹೆಚ್ಚಿಸುತ್ತಿದ್ದೇವೆ. ರಸ್ತೆ ಮಟ್ಟಕ್ಕಿಂತ ಸುಮಾರು ಎರಡು ಅಡಿ ಎತ್ತರವಿದ್ದು, ಬೆಳ್ಳಂದೂರು ಕೆರೆಯಿಂದ ನೀರು ಸರಾಗವಾಗಿ ಹರಿಯುತ್ತದೆ ಎಂದರು.

ಶುಕ್ರವಾರ ರಸ್ತೆ ಬಂದ್‌ ಮಾಡಿದ್ದರಿಂದ ಬೆಂಗಳೂರು ನಿವಾಸಿಗಳು ದಿನನಿತ್ಯದ ಸಂಚಾರಕ್ಕೆ ತೊಂದರೆ ಅನುಭವಿಸಿದರು. ಹಲವು ಸ್ಥಳೀಯರು ವಾಹನ ಸಂಚಾರದ ವೇಳೆ ತಾವು ಎದುರಿಸಿದ ಕೆಟ್ಟ ಪರಿಸ್ಥಿತಿಯ ಬಗ್ಗೆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ

ಫುಡ್ ಬ್ಲಾಗರ್ ಹೇಮಂತ್ ಕಾಮತ್ ಎಂಬುವವರು ಟ್ವೀಟ್ ಮಾಡಿ, ಬೆಳ್ಳಂದೂರು ಕೆರೆ ರಸ್ತೆ ದುರಸ್ತಿ ಕಾರ್ಯ ಹಿನ್ನೆಲೆ ಬಂದ್ ಆಗಿದ್ದು, ನೀವು ಮಾರತ್ತಹಳ್ಳಿ ರಸ್ತೆ ಮೂಲಕ ಸಂಚರಿಸಬಹುದು. ಹಾಗೂ ಕೋರಮಂಗಲದಿಂದ ಬರಬಹುದು ಆದರೆ ಟ್ರಾಫಿಕ್ ಹೆಚ್ಚಿರುತ್ತೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು