AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಮರದಲ್ಲೇ ಹೃದಯಾಘಾತ, ಸಾವು

ಬೆಂಗಳೂರು: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಮರದ ಮೇಲೆಯೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.

Heart Attack: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಮರದಲ್ಲೇ ಹೃದಯಾಘಾತ, ಸಾವು
ಹೃದಯಾಘಾತ
ನಯನಾ ರಾಜೀವ್
|

Updated on: Feb 07, 2023 | 11:52 AM

Share

ಬೆಂಗಳೂರು: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಮರದ ಮೇಲೆಯೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ಮೈಲಸಂದ್ರ ನಿವಾಸಿಯಾಗಿರುವ ನಾರಾಯಣಪ್ಪ(60) ಮೃತರು. ಅವರು ಬೆಳಗ್ಗೆ 7.30ರ ಸುಮಾರಿಗೆ ವೆಂಕಟರಮಣ ಸ್ವಾಮಿ ದೇವಸ್ಥಾನದ ಸಮೀಪವಿರುವ 50 ಅಡಿ ತೆಂಗಿನಮರವನ್ನು ಏರಿದ್ದಾರೆ, ಇದು ಮೊದಲ ಬಾರಿಯಲ್ಲಿ ಪ್ರತಿ ಬಾರಿಯೂ ನಾರಾಯಣಪ್ಪ ಅವರೇ ತೆಂಗಿನಕಾಯಿ ಕೀಳುತ್ತಿದ್ದರು.

ಈ ಬಾರಿಯೂ ತೆಂಗಿನ ಕಾಯಿ ಕೀಳಲೆಂದು ಮರ ಹತ್ತಿದ್ದರು, ಆದರೆ ಎಷ್ಟೊತ್ತಾದರೂ ಅವರು ಕೆಳ ಬರಲಿಲ್ಲ, ಕಾಯಿಗಳನ್ನೂ ಕಿತ್ತಿರಲಿಲ್ಲ, ಕಳೆದ 1 ಗಂಟೆಯಿಂದ ಅವರು ಕುಳಿತಲ್ಲೇ ಕುಳಿತಿದ್ದರು, ಕರೆ ಮಾಡಿದರೂ ಸ್ಪಂದನೆ ಇರಲಿಲ್ಲ. ಆಗ ಅನುಮಾನ ಮೂಡಿತ್ತು, ತಕ್ಷಣ ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿ ಸಹಾಯ ಕೇಳಲಾಯಿತು.

ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಅವರನ್ನು ಕೆಳಗಿಳಿಸಿದ್ದಾರೆ, ಆಗ ನಾರಾಯಣಪ್ಪ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಮತ್ತಷ್ಟು ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ಮರದ ಬುಡದಲ್ಲಿ ಗೋಣಿ ಚೀಲ, ಹಗ್ಗದ ಬಂಡಲ್ ಮತ್ತು ಕುಡುಗೋಲು ಪತ್ತೆಯಾಗಿದ್ದು, ಮೃತರು ನಿತ್ಯ ತೆಂಗಿನ ಕಾಯಿ ಕೀಳಲು ಮರ ಹತ್ತುತ್ತಿದ್ದರು ಎಂಬುದು ತಿಳಿದುಬಂದಿದೆ.

ಒಂದೊಮ್ಮೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಚಳಿಗಾಲದಲ್ಲಿ ತುಂಬಾ ಎಚ್ಚರಿಕೆವಹಿಸಬೇಕು, ನಾರಾಯಣಪ್ಪ ಅವರಿಗೆ ಮೊದಲಿನಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿತ್ತೇ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?