AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು

ಬೆಂಗಳೂರಿನಲ್ಲಿ ಅಪಘಾತಕ್ಕೀಡಾದ ಆಟೋ ಚಾಲಕ ನಿಖಿಲ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ  ಸೇರಿಸಿದ್ದರು. ಚಿಕಿತ್ಸೆ ಬಳಿಕ ಚಾಲಕ ಅಪಘಾತಕ್ಕೀಡಾದ ಜಾಗಕ್ಕೆ ಬಂದು ನೋಡಿದಾಗ ಆಟೋ ಮಾಯವಾಗಿತ್ತು. ಹೀಗಾಗಿ ನಿಖಿಲ್, ತನ್ನ ರಕ್ಷಣೆಗೆ ಬಂದವರಲ್ಲಿ ಒಬ್ಬರು ತಮ್ಮ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 09, 2023 | 12:25 PM

Share

ಬೆಂಗಳೂರು, ಸೆ.09: ಸೆಪ್ಟೆಂಬರ್ 3 ರಂದು ಅಪಘಾತಕ್ಕೀಡಾಗಿದ್ದ 38 ವರ್ಷದ ಆಟೋ ಚಾಲಕ(Auto Driver) ತನ್ನ ಆಟೋ ಕಳೆದೋಗಿದೆ ಎಂದು ಕಂಗಾಲಾಗಿದ್ದಾರೆ. ಬೆಂಗಳೂರಿನಲ್ಲಿ ಅಪಘಾತಕ್ಕೀಡಾದ ಆಟೋ ಚಾಲಕ ನಿಖಿಲ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ  ಸೇರಿಸಿದ್ದರು. ಚಿಕಿತ್ಸೆ ಬಳಿಕ ಚಾಲಕ ಅಪಘಾತಕ್ಕೀಡಾದ ಜಾಗಕ್ಕೆ ಬಂದು ನೋಡಿದಾಗ ಆಟೋ ಮಾಯವಾಗಿತ್ತು. ಹೀಗಾಗಿ ನಿಖಿಲ್, ತನ್ನ ರಕ್ಷಣೆಗೆ ಬಂದವರಲ್ಲಿ ಒಬ್ಬರು ತಮ್ಮ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ(Auto Theft).

ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಡೆದ ಅಪಘಾತದಲ್ಲಿ ನನ್ನ ಆಟೋರಿಕ್ಷಾ ಪಲ್ಟಿಯಾಗಿತ್ತು. ಮತ್ತು ತಾನು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದೆ. ಕೆಲವು ಜನರು ನನ್ನನ್ನು ಕಾಪಾಡಲು ಮುಂದಾದರು ವಾಹನವನ್ನು ಎತ್ತಿ, ನನ್ನನ್ನು ಹೊರತೆಗೆದು ಮತ್ತೊಂದು ಆಟೋರಿಕ್ಷಾದಲ್ಲಿ ಕೆಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೂರು ಗಂಟೆಗಳ ನಂತರ ಅಪಘಾತ ಸ್ಥಳಕ್ಕೆ ಹೋದಾಗ ಆಟೋ ಕಣ್ಮರೆಯಾಗಿತ್ತು ಎಂದು ವರ್ತೂರಿನ ಚಾಲಕ ನಿಖಿಲ್ ಅವರು ಪೊಲೀಸರ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ನಾನು ಎರಡು ತಿಂಗಳ ಹಿಂದೆ ಸುಮಾರು 3.5 ಲಕ್ಷ ರೂಪಾಯಿ ಪಾವತಿಸಿ ಆಟೋವನ್ನು ಖರೀದಿಸಿದ್ದೆ. ನಾನು ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲವನ್ನು ಪಡೆದಿದ್ದೇನೆ ಮತ್ತು ಇಎಂಐ ರೂ 10,000 ಆಗಿದೆ. ನಾನು ಪೊಲೀಸ್ ಠಾಣೆಗೆ ಹೋದೆ ಮತ್ತು ಪೊಲೀಸರು ಆಟೋವನ್ನು ಪತ್ತೆಹಚ್ಚಲು ಸಮಯ ಬೇಕು ಎಂದು ಹೇಳಿದರು ಎಂದು ನಿಖಿಲ್ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು; ಪಬ್, ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ಪೊಲೀಸರ ದಾಳಿ

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವೈರ್​ ತಗುಲಿ ಇಬ್ಬರು ಸಾವು

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಗುಂಡಾಲ್​ನಲ್ಲಿ ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವೈರ್​ ತಗುಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಲಾರಿ ಚಾಲಕ ಚಿನ್ನು, ಲಾರಿ ಮಾಲೀಕ ಪ್ರಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಗೆ ಅತಿ ಹೆಚ್ಚು ಎತ್ತರಕ್ಕೆ ಕಬ್ಬು ತುಂಬಿದ ಪರಿಣಾಮ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?