ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು

ಬೆಂಗಳೂರಿನಲ್ಲಿ ಅಪಘಾತಕ್ಕೀಡಾದ ಆಟೋ ಚಾಲಕ ನಿಖಿಲ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ  ಸೇರಿಸಿದ್ದರು. ಚಿಕಿತ್ಸೆ ಬಳಿಕ ಚಾಲಕ ಅಪಘಾತಕ್ಕೀಡಾದ ಜಾಗಕ್ಕೆ ಬಂದು ನೋಡಿದಾಗ ಆಟೋ ಮಾಯವಾಗಿತ್ತು. ಹೀಗಾಗಿ ನಿಖಿಲ್, ತನ್ನ ರಕ್ಷಣೆಗೆ ಬಂದವರಲ್ಲಿ ಒಬ್ಬರು ತಮ್ಮ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಅಪಘಾತಕ್ಕೀಡಾದ ಆಟೋ ಚಾಲಕ ಚಿಕಿತ್ಸೆ ಪಡೆದು ಸ್ಥಳಕ್ಕೆ ಬರುವಷ್ಟರಲ್ಲಿ ಆಟೋ ಮಾಯ, ಸಹಾಯ ಪಡೆದವರೇ ಕದ್ದರು
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Sep 09, 2023 | 12:25 PM

ಬೆಂಗಳೂರು, ಸೆ.09: ಸೆಪ್ಟೆಂಬರ್ 3 ರಂದು ಅಪಘಾತಕ್ಕೀಡಾಗಿದ್ದ 38 ವರ್ಷದ ಆಟೋ ಚಾಲಕ(Auto Driver) ತನ್ನ ಆಟೋ ಕಳೆದೋಗಿದೆ ಎಂದು ಕಂಗಾಲಾಗಿದ್ದಾರೆ. ಬೆಂಗಳೂರಿನಲ್ಲಿ ಅಪಘಾತಕ್ಕೀಡಾದ ಆಟೋ ಚಾಲಕ ನಿಖಿಲ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ  ಸೇರಿಸಿದ್ದರು. ಚಿಕಿತ್ಸೆ ಬಳಿಕ ಚಾಲಕ ಅಪಘಾತಕ್ಕೀಡಾದ ಜಾಗಕ್ಕೆ ಬಂದು ನೋಡಿದಾಗ ಆಟೋ ಮಾಯವಾಗಿತ್ತು. ಹೀಗಾಗಿ ನಿಖಿಲ್, ತನ್ನ ರಕ್ಷಣೆಗೆ ಬಂದವರಲ್ಲಿ ಒಬ್ಬರು ತಮ್ಮ ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ(Auto Theft).

ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಡೆದ ಅಪಘಾತದಲ್ಲಿ ನನ್ನ ಆಟೋರಿಕ್ಷಾ ಪಲ್ಟಿಯಾಗಿತ್ತು. ಮತ್ತು ತಾನು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದೆ. ಕೆಲವು ಜನರು ನನ್ನನ್ನು ಕಾಪಾಡಲು ಮುಂದಾದರು ವಾಹನವನ್ನು ಎತ್ತಿ, ನನ್ನನ್ನು ಹೊರತೆಗೆದು ಮತ್ತೊಂದು ಆಟೋರಿಕ್ಷಾದಲ್ಲಿ ಕೆಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೂರು ಗಂಟೆಗಳ ನಂತರ ಅಪಘಾತ ಸ್ಥಳಕ್ಕೆ ಹೋದಾಗ ಆಟೋ ಕಣ್ಮರೆಯಾಗಿತ್ತು ಎಂದು ವರ್ತೂರಿನ ಚಾಲಕ ನಿಖಿಲ್ ಅವರು ಪೊಲೀಸರ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ನಾನು ಎರಡು ತಿಂಗಳ ಹಿಂದೆ ಸುಮಾರು 3.5 ಲಕ್ಷ ರೂಪಾಯಿ ಪಾವತಿಸಿ ಆಟೋವನ್ನು ಖರೀದಿಸಿದ್ದೆ. ನಾನು ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲವನ್ನು ಪಡೆದಿದ್ದೇನೆ ಮತ್ತು ಇಎಂಐ ರೂ 10,000 ಆಗಿದೆ. ನಾನು ಪೊಲೀಸ್ ಠಾಣೆಗೆ ಹೋದೆ ಮತ್ತು ಪೊಲೀಸರು ಆಟೋವನ್ನು ಪತ್ತೆಹಚ್ಚಲು ಸಮಯ ಬೇಕು ಎಂದು ಹೇಳಿದರು ಎಂದು ನಿಖಿಲ್ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು; ಪಬ್, ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ಪೊಲೀಸರ ದಾಳಿ

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವೈರ್​ ತಗುಲಿ ಇಬ್ಬರು ಸಾವು

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಗುಂಡಾಲ್​ನಲ್ಲಿ ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವೈರ್​ ತಗುಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಲಾರಿ ಚಾಲಕ ಚಿನ್ನು, ಲಾರಿ ಮಾಲೀಕ ಪ್ರಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿಗೆ ಅತಿ ಹೆಚ್ಚು ಎತ್ತರಕ್ಕೆ ಕಬ್ಬು ತುಂಬಿದ ಪರಿಣಾಮ ಘಟನೆ ನಡೆದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!