AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು
ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ
Follow us
TV9 Web
| Updated By: ಆಯೇಷಾ ಬಾನು

Updated on:Nov 19, 2023 | 10:48 AM

ಬೆಂಗಳೂರು, ನ.19: ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಬೆಸ್ಕಾಂ ಸಿಬ್ಬಂದಿ (BESCOM) ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ (Death). ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತ ಸೌಂದರ್ಯ ತಮ್ಮ ಮಗುವಿನ ಜೊತೆಗೆ ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ವಾಪಸ್ ಆಗುತ್ತಿದ್ದರು. ಮುಂಜಾನೆ 5 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮುಂಜಾನೆ 5 ಗಂಟೆ ವೇಳೆ ಕತ್ತಲಿದ್ದ ಕಾರಣ ರಸ್ತೆ ಬದಿ ಕಟ್ ಆಗಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್​​ ವೈಯರ್​​​ ಕಾಣಿಸದೇ ತುಳಿದಿದ್ದಾರೆ. ಈ ವೇಳೆ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304ಎ ಅಡಿ ಪ್ರಕರಣ ದಾಖಲಾಗಿದೆ. ಎಇ ಚೇತನ್‌, ಜೆಇ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜು ಸೇರಿ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಿಸಿಯೂಟದ ಸಾಂಬಾರ್​ಗೆ​ ಬಿದ್ದು ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು, ಇಬ್ಬರು ಅಮಾನತು

ಇನ್ನು ಮೃತ ಸೌಂದರ್ಯ ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿಯ ನಿವಾಸಿ. ಬೆಂಗಳೂರಿನ ಸೌಂದರ್ಯರನ್ನು ಚೆನ್ನೈಗೆ ಮದುವೆ ಮಾಡಿಕೊಡಲಾಗಿತ್ತು. ದೀಪಾವಳಿ ಹಬ್ಬ ಆಚರಿಸಲು ಗಂಡ, ಹೆಂಡತಿ, ಮಗು ಊರಿಗೆ ಹೋಗಿದ್ದರು. ಇಂದು ಮುಂಜಾನೆ ಊರಿನಿಂದ ಹಸುಗೂಸು ಜೊತೆ ದಂಪತಿ ಬೆಂಗಳೂರಿಗೆ ಬಂದಿದ್ದಾರೆ. ಬಸ್ ಇಳಿದು ಮನೆಗೆ ನಡೆದು ಹೋಗುವಾಗ ರಸ್ತೆಯಲ್ಲಿ ತಂತಿ ತುಂಡಾಗಿ ಬಿದ್ದಿದ್ದನ್ನು ನೋಡದೆ ತಂತಿ ಮೇಲೆ ಸೌಂದರ್ಯ ಕಾಲಿಟ್ಟಿದ್ದಾರೆ. ಇದರಿಂದ ವಿದ್ಯುತ್ ಶಾಕ್ ಹೊಡೆದು ಬೆಂಕಿ ಹತ್ತಿಕೊಂಡಿದ್ದು ಪತಿ ಎದುರೇ ಪತ್ನಿ ಹಾಗೂ 9 ತಿಂಗಳ ಹಸುಗೂಸು ಸಜೀವದಹನವಾಗಿದ್ದಾರೆ. ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದ್ರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿಲ್ಲ. ಇದರಿಂದ ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿ ಸಂತೋಷ್ ಇದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:31 am, Sun, 19 November 23

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ