AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಮುಂಜಾನೆ 234 ರೌಡಿಶೀಟರ್​ ಮನೆಗಳ ಮೇಲೆ ದಾಳಿ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ರೌಡಿಶೀಟರ್​​ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ
ವಿವಿ ಪುರಂ ಪೊಲೀಸ್​ ಠಾಣೆ
TV9 Web
| Edited By: |

Updated on: Mar 22, 2024 | 8:26 AM

Share

ಬೆಂಗಳೂರು, ಮಾರ್ಚ್​ 22: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ (Bengaluru South) ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ (Police Station) ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಗುರುವಾರ ಮುಂಜಾನೆ ಹಠಾತ್​ನೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ.

ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮ‌ನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ರೌಡಿಶೀಟರ್‌ಗಳ ಮನೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಾಯಿತು. ಆದರೆ, ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ 102 ಕಡೆ ನಾಕಾಬಂದಿ

ಬೆಂಗಳೂರಿನ ಎಂಟು ವಿಭಾಗದಲ್ಲಿ 102 ಕಡೆ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಕೇಂದ್ರ ವಿಭಾಗದಲ್ಲಿ 16 ಕಡೆ, ಪೂರ್ವ ವಿಭಾಗದಲ್ಲಿ 10, ಉತ್ತರ ವಿಭಾಗದಲ್ಲಿ 27, ಈಶಾನ್ಯ ವಿಭಾಗದಲ್ಲಿ 12, ದಕ್ಷಿಣ ವಿಭಾಗದಲ್ಲಿ 8, ಆಗ್ನೇಯ ವಿಭಾಗದಲ್ಲಿ 10, ಪಶ್ಚಿಮ ವಿಭಾಗದಲ್ಲಿ 12, ವೈಟ್ ಫೀಲ್ಡ್ ವಿಭಾಗದಲ್ಲಿ 7 ಕಡೆ ನಾಕಾಬಂದಿ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!