AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಮುಂಜಾನೆ 234 ರೌಡಿಶೀಟರ್​ ಮನೆಗಳ ಮೇಲೆ ದಾಳಿ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ರೌಡಿಶೀಟರ್​​ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ
ವಿವಿ ಪುರಂ ಪೊಲೀಸ್​ ಠಾಣೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Mar 22, 2024 | 8:26 AM

ಬೆಂಗಳೂರು, ಮಾರ್ಚ್​ 22: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ (Bengaluru South) ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ (Police Station) ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಗುರುವಾರ ಮುಂಜಾನೆ ಹಠಾತ್​ನೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ.

ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮ‌ನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ರೌಡಿಶೀಟರ್‌ಗಳ ಮನೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಾಯಿತು. ಆದರೆ, ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ 102 ಕಡೆ ನಾಕಾಬಂದಿ

ಬೆಂಗಳೂರಿನ ಎಂಟು ವಿಭಾಗದಲ್ಲಿ 102 ಕಡೆ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಕೇಂದ್ರ ವಿಭಾಗದಲ್ಲಿ 16 ಕಡೆ, ಪೂರ್ವ ವಿಭಾಗದಲ್ಲಿ 10, ಉತ್ತರ ವಿಭಾಗದಲ್ಲಿ 27, ಈಶಾನ್ಯ ವಿಭಾಗದಲ್ಲಿ 12, ದಕ್ಷಿಣ ವಿಭಾಗದಲ್ಲಿ 8, ಆಗ್ನೇಯ ವಿಭಾಗದಲ್ಲಿ 10, ಪಶ್ಚಿಮ ವಿಭಾಗದಲ್ಲಿ 12, ವೈಟ್ ಫೀಲ್ಡ್ ವಿಭಾಗದಲ್ಲಿ 7 ಕಡೆ ನಾಕಾಬಂದಿ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ