AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಎನ್​​ಸಿಪಿ ನಾಯಕರ ಹಿಂದಿ ಬ್ಯಾನರ್‌ಗಳಿಗೆ ಮಸಿ ಬಳಿದ ಕನ್ನಡ ಪರ ಚಳವಳಿಗಾರರು ಪೊಲೀಸ್ ವಶಕ್ಕೆ

‘ನಮ್ಮ ಕರ್ನಾಟಕ ಸೇನೆ’ಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Bengaluru: ಎನ್​​ಸಿಪಿ ನಾಯಕರ ಹಿಂದಿ ಬ್ಯಾನರ್‌ಗಳಿಗೆ ಮಸಿ ಬಳಿದ ಕನ್ನಡ ಪರ ಚಳವಳಿಗಾರರು ಪೊಲೀಸ್ ವಶಕ್ಕೆ
ಹಿಂದಿ ಬ್ಯಾನರ್‌ಗಳಿಗೆ ಮಸಿ ಬಳಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು
Kiran HV
| Updated By: Ganapathi Sharma|

Updated on: Jul 18, 2023 | 6:25 PM

Share

ಬೆಂಗಳೂರು: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕರಾದ ಶರದ್ ಪವಾರ್ ಮತ್ತು ಸುಪ್ರಿಯಾ ಸುಳೆ ಅವರ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಿಂದಿಯಲ್ಲಿ (Hindi) ಬರೆಯಲಾಗಿದೆ ಎಂದು ಅವುಗಳಿಗೆ ಮಸಿ ಬಳಿದಿದ್ದ ಕನ್ನಡ ಪರ ಸಂಘಟನೆಗಳ 20 ಮಂದಿ ಕಾರ್ಯಕರ್ತರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ನಮ್ಮ ಕರ್ನಾಟಕ ಸೇನೆ’ಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದಲ್ಲಿ ಹಿಂದಿ ಹೇರಿಕೆ ಮಾಡುವವರ ವಿರುದ್ಧವೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಎನ್‌ಸಿಪಿ ಅಧ್ಯಕ್ಷ ಪವಾರ್ ಮತ್ತು ಅವರ ಪುತ್ರಿ ಸುಳೆ ಬೆಂಗಳೂರಿಗೆ ಆಗಮಿಸಿ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಖ್ಯಮಂತ್ರಿಗಳಾದ ಎಂಕೆ ಸ್ಟಾಲಿನ್, ಮಮತಾ ಬ್ಯಾನರ್ಜಿ ಮತ್ತು ಇತರರು ಸೇರಿದಂತೆ ವಿವಿಧ ರಾಜ್ಯಗಳ 26 ವಿರೋಧ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು ಒಗ್ಗಟ್ಟಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಇದನ್ನೂ ಓದಿ: ಪ್ರತಿಪಕ್ಷಗಳ ಮಹಾ ಘಟಬಂದನಕ್ಕೆ ಇದೆ ಸಾಲು ಸಾಲು ಸವಾಲು; ಅವುಗಳು ಯಾವುವು?

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಪ್ರತಿಪಕ್ಷಗಳ ಒಕ್ಕೂಟವನ್ನು ‘ಇಂಡಿಯನ್​ ನ್ಯಾಷನಲ್ ಡೆಮಾಕ್ರಟಿಕ್​​ ಇನ್​ಕ್ಲೂಸಿವ್​​​​ ಅಲೈನ್ಸ್ (INDIA)’ ಎಂದು ಕರೆಯಲಾಗುವುದು ಎಂದು ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ