AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ ಅಂತ್ಯದ ವೇಳೆ ಬೆಂಗಳೂರಿನ ಕೆಎಸ್​ಆರ್​, ಎಸ್​ಎಂವಿಟಿ ರೈಲ್ವೆ ನಿಲ್ದಾಣದಲ್ಲಿ ರೈಲು ಕೋಚ್​ ರೆಸ್ಟೋರೆಂಟ್ ಆರಂಭ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಮಾರ್ಚ್​ ಅಂತ್ಯದ ವೇಳೆಗೆ ರೈಲು ಕೋಚ್ ರೆಸ್ಟೋರೆಂಟ್‌ಗಳು ಶುರುವಾಗಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್​ ಅಂತ್ಯದ ವೇಳೆ ಬೆಂಗಳೂರಿನ ಕೆಎಸ್​ಆರ್​, ಎಸ್​ಎಂವಿಟಿ ರೈಲ್ವೆ ನಿಲ್ದಾಣದಲ್ಲಿ ರೈಲು ಕೋಚ್​ ರೆಸ್ಟೋರೆಂಟ್ ಆರಂಭ
ಹುಬ್ಬಳ್ಳಿ ರೈಲು ಕೋಚ್ ರೆಸ್ಟೋರೆಂಟ್​​ ಬೋಗಿ ಬೋಗಿ
ವಿವೇಕ ಬಿರಾದಾರ
|

Updated on: Mar 11, 2024 | 7:56 AM

Share

ಬೆಂಗಳೂರು, ಮಾರ್ಚ್​​ 11: ಹಳೆಯ ರೈಲುಗಳನ್ನು ಗುಜರಿಗೆ ಹಾಕುವ ಮೂಲಕ ಐದರಿಂದ ಆರು ಲಕ್ಷ ರೂಪಾಯಿಯನ್ನು ರೈಲ್ವೆ ಇಲಾಖೆ ಪಡೆಯುತ್ತಿತ್ತು. ಆದರೆ ಇದರ ಬದಲು ಏನು ಮಾಡುಬಹುದು ಎಂದು ಯೋಚಿಸುತ್ತಿರುವಾಗಲೆ ರೈಲ್ವೆ ಇಲಾಖೆ ಹೊಸ ಉಪಯಾವೊಂದನ್ನು ಕಂಡುಕೊಂಡಿದೆ. ಅದು ರೈಲು ಕೋಚ್​ ರೆಸ್ಟೋರೆಂಟ್ (Rail Coach Restaurant)​​. ಹೌದು ಬೆಂಗಳೂರಿನ (Bengaluru) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಮತ್ತು ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ (SMVT) ರೈಲು ನಿಲ್ದಾಣದಲ್ಲಿ ಮಾರ್ಚ್​ ಅಂತ್ಯದ ವೇಳೆಗೆ ರೈಲು ಕೋಚ್ ರೆಸ್ಟೋರೆಂಟ್‌ಗಳು ಶುರುವಾಗಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆಯ (South Western Railway Division) ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಕೋಚ್ ರೆಸ್ಟೋರೆಂಟ್‌ ನಿರ್ಮಾಣಕ್ಕೆ 2023ರ ಜೂನ್​​ನಲ್ಲಿ​ ಟೆಂಡರ್​ ಕರೆಯಲಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲು ಕೋಚ್​ ರೆಸ್ಟೋರೆಂಟ್​ನ ಗುತ್ತಿಗೆಯನ್ನು ಒಎಎಂ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ ಮತ್ತು ಬೈಯಪ್ಪನಹಳ್ಳಿ ರೈಲು ನಿಲ್ದಾಣದ ರೈಲು ಕೋಚ್​ ರೆಸ್ಟೋರೆಂಟ್​ನ ಗುತ್ತಿಗೆಯನ್ನು ಗೌರವ್ ಎಂಟರ್‌ಪ್ರೈಸಸ್ ಪಡೆದುಕೊಂಡಿದೆ. ಈ ಗುತ್ತಿಗೆ​​ ಐದು ವರ್ಷಗಳವರೆಗೆ ಇರುತ್ತದೆ.

ಈಗಾಗಲೇ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ರೈಲು ಕೋಚ್ ರೆಸ್ಟೋರೆಂಟ್ ಅನ್ನು ಸ್ಥಾಪಿಸಲಾಗಿದೆ. ರೈಲು ಕೋಚ್ ರೆಸ್ಟೋರೆಂಟ್‌ಗೆ ‘ಬೋಗಿ ಬೋಗಿ’ ಎಂದು ಹೆಸರಿಡಲಾಗಿದೆ. ಈ ರೈಲು ಕೋಚ್​ ರೆಸ್ಟೋರೆಂಟ್​ ಯಶಸ್ವಿಯಾಗಿದೆ. ಹೀಗಾಗಿ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಆರಂಭಿಸಲಾಗುತ್ತದೆ. ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿರುವ ‘ಬೋಗಿ ಬೋಗಿ’ ರೈಲು ಕೋಚ್ ರೆಸ್ಟೋರೆಂಟ್ 24/7 ಕಾರ್ಯನಿರ್ವಹಿಸುತ್ತದೆ. ಈ ರೆಸ್ಟೋರೆಂಟ್​ ಎಸಿ ಮತ್ತು ನಾನ್-ಎಸಿ ಆಸನಗಳನ್ನು ಹೊಂದಿದೆ.

ಇದನ್ನೂ ಓದಿ: ಮಾರ್ಚ್ 12 ರಿಂದ ಕಲಬುರಗಿ – ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ

ಬೆಂಗಳೂರಿನಲ್ಲಿ ರೈಲು ಕೋಚ್ ರೆಸ್ಟೋರೆಂಟ್‌ ಪ್ರಾರಂಭಿಸಲು 2023 ಅಕ್ಟೋಬರ್​ ಗಡುವು ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಐದು ತಿಂಗಳು ತಡವಾಗಿ ಪ್ರಾರಂಭವಾಗುತ್ತಿದೆ. ರೈಲ್ ಕೋಚ್ ರೆಸ್ಟೋರೆಂಟ್‌ ರೈಲ್ವೇ ನಿಲ್ದಾಣಗಳ ಮುಖ್ಯ ದ್ವಾರದ ಬಳಿ ಸ್ಥಾಪಿಸಲಾಗುತ್ತದೆ. ನೈಋತ್ಯ ರೈಲ್ವೆ ವಿಭಾಗ ಪ್ರತಿಯೊಂದು ರೈಲು ನಿಲ್ದಾಣದಲ್ಲೂ ಇಂತಹ ರೆಸ್ಟೋರೆಂಟ್​ ತೆರೆಯಲು ಯೋಚಿಸಿದೆ.

ಸಸ್ಯಹಾರಿ ಮತ್ತು ಮಾಂಸಾಹಾರಿ ಅಡುಗೆಗಾಗಿ ಪ್ರತ್ಯೇಕ ಅಡುಗೆ ಮನೆ ಇರುತ್ತದೆ. ಮತ್ತು ಈ ರೆಸ್ಟೋರೆಂಟ್​​ನಲ್ಲಿ ಉತ್ತರ ಮತ್ತು ದಕ್ಷಿಣ ಭಾರತೀಯ ಆಹಾರ ಸಿಗುತ್ತದೆ. ರೆಸ್ಟೋರೆಂಟ್‌ ಒಳಗೆ 50 ಜನರು ಕೂರಬಹುದು ಮತ್ತು ಹೆಚ್ಚುವರಿಯಾಗಿ ಹೊರಾಂಗಣದಲ್ಲಿ ಆಸನಗಳಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದರು.

ಹುಬ್ಬಳ್ಳಿ, ಚೆನ್ನೈ, ಹೈದರಾಬಾದ್, ವಿಜಯವಾಡ, ಭೋಪಾಲ್, ಮುಂಬೈ, ನಾಗ್ಪುರ, ಲಕ್ನೋ ಮತ್ತು ಕೋಲ್ಕತ್ತಾದಂತಹ ನಗರಗಳಲ್ಲಿನ ರೈಲು ನಿಲ್ದಾಣಗಳಲ್ಲಿ ಈಗಾಗಲೇ ಈ ರೀತಿ ರೈಲು ರೆಸ್ಟೋರೆಂಟ್‌ಗಳಿವೆ. ಬೆಂಗಳೂರಿಗರು ಕೂಡ ಈ ತಿಂಗಳ ಕೊನೆಯಲ್ಲಿ ಈ ವಿಶಿಷ್ಟ ಅನುಭವವನ್ನು ಪಡೆಯಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?