AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ ಅಂತ್ಯದ ವೇಳೆ ಬೆಂಗಳೂರಿನ ಕೆಎಸ್​ಆರ್​, ಎಸ್​ಎಂವಿಟಿ ರೈಲ್ವೆ ನಿಲ್ದಾಣದಲ್ಲಿ ರೈಲು ಕೋಚ್​ ರೆಸ್ಟೋರೆಂಟ್ ಆರಂಭ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಮಾರ್ಚ್​ ಅಂತ್ಯದ ವೇಳೆಗೆ ರೈಲು ಕೋಚ್ ರೆಸ್ಟೋರೆಂಟ್‌ಗಳು ಶುರುವಾಗಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್​ ಅಂತ್ಯದ ವೇಳೆ ಬೆಂಗಳೂರಿನ ಕೆಎಸ್​ಆರ್​, ಎಸ್​ಎಂವಿಟಿ ರೈಲ್ವೆ ನಿಲ್ದಾಣದಲ್ಲಿ ರೈಲು ಕೋಚ್​ ರೆಸ್ಟೋರೆಂಟ್ ಆರಂಭ
ಹುಬ್ಬಳ್ಳಿ ರೈಲು ಕೋಚ್ ರೆಸ್ಟೋರೆಂಟ್​​ ಬೋಗಿ ಬೋಗಿ
ವಿವೇಕ ಬಿರಾದಾರ
|

Updated on: Mar 11, 2024 | 7:56 AM

Share

ಬೆಂಗಳೂರು, ಮಾರ್ಚ್​​ 11: ಹಳೆಯ ರೈಲುಗಳನ್ನು ಗುಜರಿಗೆ ಹಾಕುವ ಮೂಲಕ ಐದರಿಂದ ಆರು ಲಕ್ಷ ರೂಪಾಯಿಯನ್ನು ರೈಲ್ವೆ ಇಲಾಖೆ ಪಡೆಯುತ್ತಿತ್ತು. ಆದರೆ ಇದರ ಬದಲು ಏನು ಮಾಡುಬಹುದು ಎಂದು ಯೋಚಿಸುತ್ತಿರುವಾಗಲೆ ರೈಲ್ವೆ ಇಲಾಖೆ ಹೊಸ ಉಪಯಾವೊಂದನ್ನು ಕಂಡುಕೊಂಡಿದೆ. ಅದು ರೈಲು ಕೋಚ್​ ರೆಸ್ಟೋರೆಂಟ್ (Rail Coach Restaurant)​​. ಹೌದು ಬೆಂಗಳೂರಿನ (Bengaluru) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಮತ್ತು ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ (SMVT) ರೈಲು ನಿಲ್ದಾಣದಲ್ಲಿ ಮಾರ್ಚ್​ ಅಂತ್ಯದ ವೇಳೆಗೆ ರೈಲು ಕೋಚ್ ರೆಸ್ಟೋರೆಂಟ್‌ಗಳು ಶುರುವಾಗಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆಯ (South Western Railway Division) ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಕೋಚ್ ರೆಸ್ಟೋರೆಂಟ್‌ ನಿರ್ಮಾಣಕ್ಕೆ 2023ರ ಜೂನ್​​ನಲ್ಲಿ​ ಟೆಂಡರ್​ ಕರೆಯಲಾಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲು ಕೋಚ್​ ರೆಸ್ಟೋರೆಂಟ್​ನ ಗುತ್ತಿಗೆಯನ್ನು ಒಎಎಂ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ ಮತ್ತು ಬೈಯಪ್ಪನಹಳ್ಳಿ ರೈಲು ನಿಲ್ದಾಣದ ರೈಲು ಕೋಚ್​ ರೆಸ್ಟೋರೆಂಟ್​ನ ಗುತ್ತಿಗೆಯನ್ನು ಗೌರವ್ ಎಂಟರ್‌ಪ್ರೈಸಸ್ ಪಡೆದುಕೊಂಡಿದೆ. ಈ ಗುತ್ತಿಗೆ​​ ಐದು ವರ್ಷಗಳವರೆಗೆ ಇರುತ್ತದೆ.

ಈಗಾಗಲೇ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ರೈಲು ಕೋಚ್ ರೆಸ್ಟೋರೆಂಟ್ ಅನ್ನು ಸ್ಥಾಪಿಸಲಾಗಿದೆ. ರೈಲು ಕೋಚ್ ರೆಸ್ಟೋರೆಂಟ್‌ಗೆ ‘ಬೋಗಿ ಬೋಗಿ’ ಎಂದು ಹೆಸರಿಡಲಾಗಿದೆ. ಈ ರೈಲು ಕೋಚ್​ ರೆಸ್ಟೋರೆಂಟ್​ ಯಶಸ್ವಿಯಾಗಿದೆ. ಹೀಗಾಗಿ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಆರಂಭಿಸಲಾಗುತ್ತದೆ. ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿರುವ ‘ಬೋಗಿ ಬೋಗಿ’ ರೈಲು ಕೋಚ್ ರೆಸ್ಟೋರೆಂಟ್ 24/7 ಕಾರ್ಯನಿರ್ವಹಿಸುತ್ತದೆ. ಈ ರೆಸ್ಟೋರೆಂಟ್​ ಎಸಿ ಮತ್ತು ನಾನ್-ಎಸಿ ಆಸನಗಳನ್ನು ಹೊಂದಿದೆ.

ಇದನ್ನೂ ಓದಿ: ಮಾರ್ಚ್ 12 ರಿಂದ ಕಲಬುರಗಿ – ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ

ಬೆಂಗಳೂರಿನಲ್ಲಿ ರೈಲು ಕೋಚ್ ರೆಸ್ಟೋರೆಂಟ್‌ ಪ್ರಾರಂಭಿಸಲು 2023 ಅಕ್ಟೋಬರ್​ ಗಡುವು ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಐದು ತಿಂಗಳು ತಡವಾಗಿ ಪ್ರಾರಂಭವಾಗುತ್ತಿದೆ. ರೈಲ್ ಕೋಚ್ ರೆಸ್ಟೋರೆಂಟ್‌ ರೈಲ್ವೇ ನಿಲ್ದಾಣಗಳ ಮುಖ್ಯ ದ್ವಾರದ ಬಳಿ ಸ್ಥಾಪಿಸಲಾಗುತ್ತದೆ. ನೈಋತ್ಯ ರೈಲ್ವೆ ವಿಭಾಗ ಪ್ರತಿಯೊಂದು ರೈಲು ನಿಲ್ದಾಣದಲ್ಲೂ ಇಂತಹ ರೆಸ್ಟೋರೆಂಟ್​ ತೆರೆಯಲು ಯೋಚಿಸಿದೆ.

ಸಸ್ಯಹಾರಿ ಮತ್ತು ಮಾಂಸಾಹಾರಿ ಅಡುಗೆಗಾಗಿ ಪ್ರತ್ಯೇಕ ಅಡುಗೆ ಮನೆ ಇರುತ್ತದೆ. ಮತ್ತು ಈ ರೆಸ್ಟೋರೆಂಟ್​​ನಲ್ಲಿ ಉತ್ತರ ಮತ್ತು ದಕ್ಷಿಣ ಭಾರತೀಯ ಆಹಾರ ಸಿಗುತ್ತದೆ. ರೆಸ್ಟೋರೆಂಟ್‌ ಒಳಗೆ 50 ಜನರು ಕೂರಬಹುದು ಮತ್ತು ಹೆಚ್ಚುವರಿಯಾಗಿ ಹೊರಾಂಗಣದಲ್ಲಿ ಆಸನಗಳಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದರು.

ಹುಬ್ಬಳ್ಳಿ, ಚೆನ್ನೈ, ಹೈದರಾಬಾದ್, ವಿಜಯವಾಡ, ಭೋಪಾಲ್, ಮುಂಬೈ, ನಾಗ್ಪುರ, ಲಕ್ನೋ ಮತ್ತು ಕೋಲ್ಕತ್ತಾದಂತಹ ನಗರಗಳಲ್ಲಿನ ರೈಲು ನಿಲ್ದಾಣಗಳಲ್ಲಿ ಈಗಾಗಲೇ ಈ ರೀತಿ ರೈಲು ರೆಸ್ಟೋರೆಂಟ್‌ಗಳಿವೆ. ಬೆಂಗಳೂರಿಗರು ಕೂಡ ಈ ತಿಂಗಳ ಕೊನೆಯಲ್ಲಿ ಈ ವಿಶಿಷ್ಟ ಅನುಭವವನ್ನು ಪಡೆಯಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ