AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸುಮನಹಳ್ಳಿ ಚಿತಾಗಾರ 10 ದಿನಗಳ ಕಾಲ ಬಂದ್​

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ಫೆಬ್ರವರಿ 20 ರಿಂದ ಫೆಬ್ರವರಿ 29ರ ವರೆಗೆ 10 ದಿನಗಳ ಕಾಲ ಬಂದ್​ ಇರಲಿದೆ.

ಬೆಂಗಳೂರಿನ ಸುಮನಹಳ್ಳಿ ಚಿತಾಗಾರ 10 ದಿನಗಳ ಕಾಲ ಬಂದ್​
ವಿದ್ಯುತ್​ ಚಿತಾಗಾರ
TV9 Web
| Edited By: |

Updated on: Feb 19, 2024 | 3:02 PM

Share

ಬೆಂಗಳೂರು, ಫೆಬ್ರವರಿ 19: ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ (Rajrajeshwari Nagar) ವಲಯ ವ್ಯಾಪ್ತಿಯಲ್ಲಿರುವ ಸುಮನಹಳ್ಳಿ ವಿದ್ಯುತ್​ ಚಿತಾಗಾರ (Sumanahalli Electric Chitagar) ಮಂಗಳವಾರ “ಫೆಬ್ರವರಿ 20 ರಿಂದ ಫೆಬ್ರವರಿ 29ರ ವರೆಗೆ” 10 ದಿನಗಳ ಕಾಲ ಬಂದ್​ ಇರಲಿದೆ. ಸುಮನಹಳ್ಳಿ ಚಿತಾಗಾರ ಬದಲು, ಕೆಂಗೇರಿ, ಮೇಡಿ ಅಗ್ರಹಾರ, ಪೀಣ್ಯ ಚಿತಾಗಾರ ಬಳಸಿಕೊಳ್ಳುವಂತೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನವಿ ಮಾಡಿದೆ.

ಬಿಬಿಎಂಪಿ ಪತ್ರದಲ್ಲಿ ಏನಿದೆ?

“ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ದಿನಾಂಕ: 20/02/2024 ರಿಂದ 29/02/2024 (10 ದಿನಗಳು) ವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗೆ ತರುವ ಸಾರ್ವಜನಿಕರು ಸಮೀಪದಲ್ಲಿರುವ ಕೆಂಗೇರಿ, ಮೇಡಿ ಅಗ್ರಹಾರ ಅಥವಾ ಪೀಣ್ಯ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ” ಎಂದು ಮನವಿ ಮಾಡಿದೆ.

ಯುವಕರ ಅಪಾಯಕಾರಿ ವೀಲ್ಹಿಂಗ್

ಬೆಂಗಳೂರಿನ ಬಾಬುಸಪಾಳ್ಯದ ಟಿನ್ ಫಾಕ್ಟರಿ ರಿಂಗ್ ರೋಡ್​ನಲ್ಲಿ ಯುವಕ ಅಪಾಯಕಾರಿಯಾಗಿ ವೀಲ್ಹಿಂಗ್ ಮಾಡಿ ಸಾರ್ವಜನಿಕರಿಗೆ ಉಪದ್ರವ ಕೊಡುತ್ತಿದ್ದಾರೆ. ಯುವಕ ದ್ವಿ ಚಕ್ರ ವಾಹನದಲ್ಲಿ ವೀಲ್ಹಿಂಗ್ ಮಾಡಿರುವುದನ್ನು ಸಾರ್ವಜನಿಕರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೋವಿಡ್​ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಸ್ಮಶಾನ, ಚಿತಾಗಾರದಲ್ಲಿ ನಿರಾಕರಿಸದಂತೆ ಸುತ್ತೋಲೆ

85 ವಾಹನಗಳ ಮೇಲೆ ಬರೋಬ್ಬರಿ 1 ಕೋಟಿ ದಂಡ

ಟ್ರಾಫಿಕ್ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆ ವೇಳೆ 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದರು. ವಶಪಡಿಸಿಕೊಂಡ ವಾಹನಗಳ ಮೇಲೆ ಒಟ್ಟು 10,210 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಒಟ್ಟು 85 ವಾಹನಗಳ ಮೇಲೆ ಬರೋಬ್ಬರಿ 1 ಕೋಟಿ 7 ಲಕ್ಷ ದಂಡ ಬಾಕಿ ಇದೆ. ಸದ್ಯ ಎಲ್ಲಾ ವಾಹನಗಳನ್ನು ಸೀಜ್ ಮಾಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?