AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿಲ್ಲದ ಬೈಕ್​ ವ್ಹೀಲಿಂಗ್: ವಿಡಿಯೋ ಶೇರ್ ಮಾಡಿದ ನೆಟ್ಟಿಗ, ಕ್ರಮಕೈಗೊಳ್ಳುವುದಾಗಿ ಹೇಳಿದ ಟ್ರಾಫಿಕ್ ಪೊಲೀಸ್

ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದ ಬಳಿ ಯುವಕರು ವೀಲಿಂಗ್ ಮಾಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾಗಿದೆ. ಬೈಕ್ ಸವಾರನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೈಟ್ ಫೀಲ್ಡ್ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಿಲ್ಲದ ಬೈಕ್​ ವ್ಹೀಲಿಂಗ್: ವಿಡಿಯೋ ಶೇರ್ ಮಾಡಿದ ನೆಟ್ಟಿಗ, ಕ್ರಮಕೈಗೊಳ್ಳುವುದಾಗಿ ಹೇಳಿದ ಟ್ರಾಫಿಕ್ ಪೊಲೀಸ್
ಬೈಕ್ ವೀಲಿಂಗ್ ಮಾಡುತ್ತಿರುವ ಯುವಕ
Follow us
TV9 Web
| Updated By: ಆಯೇಷಾ ಬಾನು

Updated on: Aug 01, 2023 | 3:06 PM

ಬೆಂಗಳೂರು, ಆ.01: ವೈಟ್‌ಫೀಲ್ಡ್ ಮೆಟ್ರೊ ನಿಲ್ದಾಣದ(Whitefield Metro Station) ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಯುವಕನೊಬ್ಬ ವೀಲಿಂಗ್(Bike Wheeling) ಮಾಡುತ್ತಿರುವ ವಿಡಿಯೋ ಹರಿದಾಡುತ್ತಿದ್ದು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುವಕ ಬೈಕ್ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಥರ್ಡ್ ಐ ಎಂಬ ಯೂಟ್ಯೂಬರ್ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾನೆ.

ವಿಡಿಯೋ ಅಪ್‌ಲೋಡ್ ವೇಳೆ​ ಯೂಟ್ಯೂಬರ್ ವೈಟ್‌ಫೀಲ್ಡ್ ಟ್ರಾಫಿಕ್ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ. ಹಾಗೂ ಇಂತಹ ಜನನಿಬಿಡ ಸಾರ್ವಜನಿಕ ರಸ್ತೆಯಲ್ಲಿ ಸಾಹಸ ಪ್ರದರ್ಶಿಸುವ ಬೈಕ್ ಸವಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇನ್ನು ಯುವಕ ವೀಲಿಂಗ್ ಮಾಡಲು ಬಳಸಿದ ಬೈಕ್‌ನ ನಂಬರ್ ಪ್ಲೇಟನ್ನು ಮರೆ ಮಾಡಿದ್ದು ನಂತರ ಬೈಕ್ ನ ನೋಂದಣಿ ಸಂಖ್ಯೆ KA53HB3623 ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ತುಮಕೂರು ರಿಂಗ್ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ; ವಾಹನ ಸವಾರರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ

ಇನ್ನು ಯೂಟ್ಯೂಬರ್ ಪೋಸ್ಟ್​ಗೆ ವೈಟ್‌ಫೀಲ್ಡ್ ಟ್ರಾಫಿಕ್ ಪೊಲೀಸರು ಪ್ರತಿಕ್ರಿಯಿಸಿದ್ದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ವಿಡಿಯೋದಲ್ಲಿ ವೀಲಿಂಗ್ ಮಾಡುತ್ತಿರುವ ಬೈಕ್ ಸವಾರ 18 ವರ್ಷದ ನಿರಂಜನ್ ಎಂದು ತಿಳಿದು ಬಂದಿದ್ದು ನಿರಂಜನ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಲೀಂಗ್ ಮಾಡುವ ಅನೇಕ ವಿಡಿಯೋಗಳನ್ನು ಅಪ್​ಲೋಡ್ ಮಾಡಿದ್ದಾರೆ. ಹಾಗೂ ತಮ್ಮ ಇನ್‌ಸ್ಟಾಗ್ರಾಮ್ ಬಯೋದಲ್ಲಿ, ‘ವೀಲಿಂಗ್ ಲವ್ವರ್’ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು