AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ಕಿಡ್ನ್ಯಾಪ್ ಮಾಡಿದ ಮೂವರು ಆರೋಪಿಗಳು ಅರೆಸ್ಟ್

ತಮ್ಮ ಮೇಲಿರುವ ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿದ್ದ ಮೂವರು ಆರೋಪಿಗಳನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್​ 31ರಂದು ಬೆಳಗ್ಗಿನ ಜಾವ 2.30ಕ್ಕೆ ಸಂದೀಪ್​ಕುಮಾರ್ ಎಂಬ ವ್ಯಕ್ತಿಯನ್ನು​​ ಕಿಡ್ನ್ಯಾಪ್ ಮಾಡಿ ತಮಿಳುನಾಡಿಗೆ ಕರೆದೊಯ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಹುಡುಕಾಟ ನಡೆಯುತ್ತಿದೆ.

ಬೆಂಗಳೂರು: ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ಕಿಡ್ನ್ಯಾಪ್ ಮಾಡಿದ ಮೂವರು ಆರೋಪಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
Shivaprasad
| Updated By: ಆಯೇಷಾ ಬಾನು

Updated on: Sep 10, 2023 | 9:35 AM

ಬೆಂಗಳೂರು, ಸೆ.10: ತಮ್ಮ ಮೇಲಿರುವ ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ವ್ಯಕ್ತಿಯನ್ನು ಕಿಡ್ನ್ಯಾಪ್(Kidnap)​ ಮಾಡಿದ್ದ ರೌಡಿಶೀಟರ್​ ಸೇರಿ ಮೂವರನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ(CK Achukattu Police Station). ಅರುಣ್​ ಅಲಿಯಾಸ್​ ಸುನಾಮಿ, ಕಿರಣ್​ಕುಮಾರ್​, ಸೋಮಶೇಖರ್ ಬಂಧಿತ ಆರೋಪಿಗಳು. ಆಗಸ್ಟ್​ 31ರಂದು ಬೆಳಗ್ಗಿನ ಜಾವ 2.30ಕ್ಕೆ ಸಂದೀಪ್​ಕುಮಾರ್ ಎಂಬ ವ್ಯಕ್ತಿಯನ್ನು​​ ಕಿಡ್ನ್ಯಾಪ್ ಮಾಡಿ ತಮಿಳುನಾಡಿಗೆ ಕರೆದೊಯ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಹುಡುಕಾಟ ನಡೆಯುತ್ತಿದೆ.

ಆಗಸ್ಟ್​ 31ರಂದು ಸಂದೀಪ್​ಕುಮಾರ್​ನನ್ನು ಕಿಡ್ನ್ಯಾಪ್ ಮಾಡಿ ತಮಿಳುನಾಡಿಗೆ ಕರೆದೊಯ್ದಿದ್ದ ಆರೋಪಿಗಳು ತಮಿಳುನಾಡಿನ ಫಾರಂ ಹೌಸ್​​ನಲ್ಲಿಟ್ಟು 50 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಸಂದೀಪ್ ಕುಟುಂಬಕ್ಕೆ ಬೆದರಿಸಿದ್ದರು. ಆದರೆ ಬೇರೆ ಜಾಗಕ್ಕೆ ಶಿಫ್ಟ್ ಮಾಡುವ ವೇಳೆ ಸಂದೀಪ್​ಕುಮಾರ್​ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದರು. ಬಳಿಕ ತಮಿಳುನಾಡಿನ ಪೊಲೀಸರ ಸಹಾಯ ಪಡೆದು ಬೆಂಗಳೂರಿಗೆ ವಾಪಸಾಗಿದ್ದರು. ನಂತರ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಂದೀಪ್ ದೂರು ಆಧರಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗ: ಸ್ನೇಹಿತನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಪ್ರಯತ್ನ; ಆರೋಪಿಗಳು ಸಿಕ್ಕಿಬಿದ್ದಿದ್ದೆ ರೋಚಕ

ಗಾಂಜಾ‌ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಕೋಲಾರ: ಕೆಜಿಎಫ್ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.  ಕೆಜಿಎಫ್​ ತಾಲೂಕಿನ ಚೊಕ್ಕರ ಬಂಡೆ ಬಳಿ ಗಾಂಜಾ ಮಾರುತ್ತಿದ್ದ ಆಂಧ್ರ ಮೂಲದ ರೆಡ್ಡಪ್ಪರಾಜು ಎಂಬ ವ್ಯಕ್ತಿಯನ್ನು ಕೆಜಿಎಫ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 11 ಕೆಜಿ 200 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆ್ಯಂಡರ್​​ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಅಪರಾಧ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ