AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಂದು RCB vs LSG ಪಂದ್ಯ: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ

IPL 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB vs LSG ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು RCB vs LSG ಪಂದ್ಯ: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ
RCB vs LGS ಪಂದ್ಯಕ್ಕೆ ಸಂಚಾರ ಸಲಹೆ
ವಿವೇಕ ಬಿರಾದಾರ
|

Updated on:Apr 02, 2024 | 9:39 AM

Share

ಬೆಂಗಳೂರು, ಏಪ್ರಿಲ್​​​​ 02: ಟಾಟಾ ಸರಣಿಯ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು (RCB) vs ಲಕ್ನೋ ಸೂಪರ್​ ಜೈಂಟ್ಸ್​ (LSG) ಪಂದ್ಯ ಇಂದು (ಏ.02) ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Ground) ನಡೆಯಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ (Traffic advisory) ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ತಿಳಿಸಿದೆ.

ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲಯಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್​ ಪ್ರೇಮಿಗಳ ಅನುಕೂಲಕ್ಕಾಗಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ.

ವಾಹನ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ

ರಾತ್ರಿ 7:30ಕ್ಕೆ RCB vs LSG ಪಂದ್ಯ ಆರಂಭವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಧ್ಯಾಹ್ನ 3 ಗಂಟೆಯಿಂದಲೆ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ನಿಲುಗಡೆ ನಿಷೇಧವಿರುವ ಸ್ಥಳಗಳು ಹೀಗಿದೆ..

ಕ್ವೀನ್ಸ್​ ರಸ್ತೆ, ಎಂಜಿ ರಸ್ತೆ, ಕಬ್ಬನ್​ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್​ ಸ್ಟ್ರೀಟ್​ ರಸ್ತೆ, ಸೆಂಟ್​ ಮಾರ್ಕ್ಸ್​ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್​ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್​​ ಮಲ್ಯ ರಸ್ತೆ, ಕಿಂಗ್ಸ್​ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಗೆಲ್ಲಬೇಕಾದರೆ ಬದಲಾವಣೆ ಅನಿವಾರ್ಯ

ವಾಹನ ನಿಲುಗಡೆ ಸ್ಥಳಗಳು

ಇನ್ನು ಕ್ರಿಕೇಟ್​ ಪ್ರೇಮಿಗಳ ವಾಹನ ನಿಲುಗಡೆಗಾಗಿ ಬೆಂಗಳೂರು ಸಂಚಾರ ಪೊಲೀಸ್​ ಅಧಿಕಾರಿಗಳು ಕೆಲವು ಸ್ಥಳಗಳನ್ನು ಗುರುತಿಸಿದ್ದಾರೆ. ವಾಹನ ನಿಲುಗಡೆ ಸ್ಥಳಗಳು…

ಸೆಂಟ್​ ಜೋಸೆಫ್​​ ಇಂಡಿಯನ್ ಸ್ಕೂಲ್​ ನೈದಾನ, ಯು.ಬಿ ಸಿಟಿ ಪಾರ್ಕಿಂಗ್​ ಸ್ಥಳ, ಬಿಎಂಟಿಸಿ ಬಸ್​ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್​ ಕೆಜಿಐಡಿ ಬಿಲ್ಡಿಂಗ್​, ಕಿಂಗ್ಸ್​ ರಸ್ತೆ (ಕಬ್ಬನ್​ಪಾರ್ಕ್​ ಒಳಭಾಗ) ದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ಇಂದಿನ ಪಂದ್ಯದ ಬಗ್ಗೆ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ನಾಲ್ಕನೇ ಪಂದ್ಯವಾಗಿದ್ದು, ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 2 April 24

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ