AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ 3 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​​

ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಭಯೋತ್ಪಾದನೆಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ 3 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​​
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 28, 2022 | 9:04 PM

ಬೆಂಗಳೂರು: ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನಜೀರ್ ಶೇಖ್ – 7 ವರ್ಷ ಸಜೆ ಹಾಗೂ 48 ಸಾವಿರ ರೂ ದಂಡ, ಹಬೀಬುರ್ ರೆಹಮಾನ್ – 7 ವರ್ಷ ಸಜೆ ಹಾಗೂ 49 ಸಾವಿರ ರೂ ದಂಡ ಹಾಗೂ ಮೊಸ್ರಫ್ ಹೊಸೈನ್ – 7 ವರ್ಷ ಸಜೆ ಹಾಗೂ 41 ಸಾವಿರ ರೂ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಇದನ್ನೂ ಓದಿ: ಖತರ್ನಾಕ್ ಮರ್ಡರ್ ಸ್ಟೋರಿ! ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?

ಮೂವರು ಆರೋಪಿಗಳು ಬಾಂಗ್ಲಾದೇಶ್​ದ ಜಮಾತ್ ಉಲ್ ಮುಜಾಹಿದೀನ್ ಸಂಘಟನೆಗೆ ಸೇರಿದ್ದಾರೆ. ಮೂವರಲ್ಲಿ ಹಬೀಬುರ್ ರೆಹಮಾನ್ ಎಂಬುವ 2014ರ ಬುರ್ದ್ವಾನ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದನು.

ಈ ಆರೋಪಿಗಳು 2018ರಲ್ಲಿ ಬೆಂಗಳೂರಿನ ಅತ್ತಿಬೆಲೆಯ 2, ಕೆ.ಆರ್.ಪುರಂ, ಕೊತ್ತನೂರಿನ ತಲಾ 1 ಮನೆಗಳಲ್ಲಿ ಡಕಾಯಿತಿ ಮಾಡಿದ್ದರು. ಡಕಾಯಿತಿ ಮಾಡಿದ ಹಣದಲ್ಲಿ ಸ್ಪೋಟಕ ತಯಾರಿಕೆಗೆ ಬೇಕಾಗುವ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. 2019 ರಲ್ಲಿ ಚಿಕ್ಕಬಾಣಾವರ ಬಳಿ ಮನೆಯೊಂದರಲ್ಲಿ ಹಬೀಬುರ್ ನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:  ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ

ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ನಗರದ ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಜಾಜ್, ಅರಾಫತ್​ ಬಂಧಿತ ಆರೋಪಿಗಳು. ನೈಜೀರಿಯಾ ಮೂಲದವಾರದ ಇಬ್ಬರು ಆರೋಪಿಗಳು ಡ್ರಗ್ಸ್ ಖರೀದಿಸಿ ಮಾರಾಟ ಮಾರುತ್ತಿದ್ದರು. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 10 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್​ನ್ನು ಜಪ್ತಿ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:52 pm, Mon, 28 November 22

ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್