AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Night Curfew: ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ, ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ ಹತ್ತು ಗಂಟೆಯಿಂದ ಬೆಳಗಿನ ಜಾವ 5 ಗಂಟೆ ತನಕ ನೈಟ್ ಕರ್ಫ್ಯೂ ಇರಲಿದೆ. ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದ್ರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

Bengaluru Night Curfew: ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ, ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Oct 12, 2021 | 12:17 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ ಹತ್ತು ಗಂಟೆಯಿಂದ ಬೆಳಗಿನ ಜಾವ 5 ಗಂಟೆ ತನಕ ನೈಟ್ ಕರ್ಫ್ಯೂ ಇರಲಿದೆ. ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದ್ರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಜಿಲ್ಲೆಯಲ್ಲಿ ಅಕ್ಟೋಬರ್ 11ರ ವರೆಗೂ ನೈಟ್​ ಕರ್ಫ್ಯೂ ಮುಂದುವರಿಕೆ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದರು. ಅದರಂತೆ, ರಾತ್ರಿ 10 ಗಂಟೆಯಿಂದ ಮುಂಜಾನೆ 5ರ ವರೆಗೆ ನೈಟ್ ಕರ್ಫ್ಯೂ ಇತ್ತು. ಈಗ ಇದು ಅಕ್ಟೋಬರ್ 25ರ ವರೆಗೂ ವಿಸ್ತರಣೆಯಾಗಿದೆ.

ಕರ್ನಾಟಕದಲ್ಲಿ ಸೋಮವಾರ 373 ಮಂದಿಯಲ್ಲಿ ಹೊಸದಾಗಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, 10 ಮಂದಿ ಮೃತಪಟ್ಟದ್ದಾರೆ. 611 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 9906 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.45, ಸೋಂಕಿತರ ಸಾವಿನ ಪ್ರಮಾಣ ಶೇ 2.68 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,81,400 ಮಂದಿಯಲ್ಲಿ ಸೋಂಕು ಖಚಿತವಾಗಿದ್ದು, 29,33,570 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರದಲ್ಲಿ ಸೋಮವಾರ 146 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 210 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಐವರು ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ 12,48,459 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,25,685 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 6580 ಸಕ್ರಿಯ ಪ್ರಕರಣಗಳಿದ್ದರೆ, ಈವರೆಗೆ ಒಟ್ಟು 16,193 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

Published On - 12:09 pm, Tue, 12 October 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು