AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 2024 ರ ಕೊನೆಯ ದಿನ 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಸ್ವಾಗತ ಭರ್ಜರಿಯಾಗಿ ನಡೆದಿದೆ. ನಗರದ ಹಲವು ಕಡೆಗಳಲ್ಲಿ ಪಾರ್ಟಿ, ಮೋಜು ಮಸ್ತಿ ನಡೆದಿವೆ. ಆದರೆ, ಈ ಪಾರ್ಟಿಗಳಿಗೆ ಪೂರೈಕೆ ಆಗಬೇಕಿದ್ದ ಸುಮಾರು ಎರಡುವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 2024ರ ಕೊನೆಯ ದಿನದ ಸಿಸಿಬಿ ಬೇಟೆಯ ವಿವರ ಇಲ್ಲಿದೆ.

ಬೆಂಗಳೂರು: 2024 ರ ಕೊನೆಯ ದಿನ 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 01, 2025 | 7:19 AM

Share

ಬೆಂಗಳೂರು, ಜನವರಿ 1: ಅಲ್ಲಿ ಕಾಣಿಸಿದ್ದೆಲ್ಲ ಕೇಕ್ ಪ್ಯಾಕ್, ಕಿಟ್ ಕ್ಯಾಟ್ ಪ್ಯಾಕ್​ಗಳು. ಆದರೆ, ಆ ಪ್ಯಾಕೆಟ್​​ಗಳಲ್ಲಿ ಇದ್ದಿದ್ದು ಚಾಕೊಲೇಟ್ ಅಥವಾ ಕೇಕ್ ಅಲ್ಲ! ಬದಲಾಗಿ ಹೈಡ್ರೋ ಗಾಂಜಾ. ಈ ಹೈಡ್ರೋ ಗಾಂಜಾ ಬೆಂಗಳೂರಿನ ಮೂಲೆ ಮೂಲೆಯಲ್ಲಿ ನಡೆಯುವ ಪಾರ್ಟಿಗಳಿಗೆ ಸೇರಬೇಕಿತ್ತು. ಆದರೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಲ್ಲದೆ, ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

ಥೈಲ್ಯಾಂಡ್​ನಿಂದ ತರಿಸಿದ್ದ ಹೈಡ್ರೋ ಗಂಜಾ

ಬೆಂಗಳೂರಿನ ಮೂಲೆ ಮೂಲೆಯಲ್ಲಿ ಹೊಸ ವರ್ಷದ ಪಾರ್ಟಿ ನಡೆಯುವುದು ಸಹಜ. ಹುಡುಗರಿಂದ ತೊಡಗಿ ಹಣ್ಣು ಹಣ್ಣು ಮುದುಕರ ವರೆಗೆ ಅವರದೇ ಆದ ರೀತಿಯಲ್ಲಿ ಪಾರ್ಟಿ ಮಾಡುತ್ತಾರೆ. ಆದರೆ ಪಾರ್ಟಿಯಲ್ಲಿ ಮದ್ಯ ಮಾತ್ರವಲ್ಲದೆ ಒಂದಷ್ಟು ಜನರು ಡ್ರಗ್ಸ್​​ಗೆ ಮಾರು ಹೋಗುತ್ತಾರೆ. ಅಂತಹವರಿಗೆ ಮಾರಾಟ ಮಾಡಲು ಅಂತ ಥೈಲ್ಯಾಂಡ್​ನಿಂದ ತರಿಸಿದ್ದ ಹೈಡ್ರೋ ಗಂಜಾವನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ಮೂಲದ ರಕ್ಷಿತ್ ರಮೇಶ್ ಎಂಬಾತನನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಆತನ ಸಂಪಿಗೆಹಳ್ಳಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ ಬೆಂಗಳೂರಿನ ಪಾರ್ಟಿಗಳಿಗೆ ಪೂರೈಕೆ ಮಾಡಲು ತರಿಸಿದ್ದ ಬರೋಬ್ಬರಿ ಹದಿನಾರು ಕೆಜಿ ಗಾಂಜಾ ಸೊಪ್ಪು ಮತ್ತು ಥೈಲ್ಯಾಂಡ್​​ನಿಂದ ತರಿಸಿದ್ದ ಸುಮಾರು ಮೂರು ಕೆಜಿ ಹೈಡ್ರೋ ಗಾಂಜಾ ದೊರೆತಿದೆ. ಎಂಡಿಎಂಎ, ಎಲ್​ಎಸ್​ಡಿ ಮತ್ತು ಚರಸ್ ಎಲ್ಲ ಸೇರಿ ಸುಮಾರು 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

40 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಎಂಡಿಎಂಎ ವಶಕ್ಕೆ

ಇನ್ನು ನಗರದ ಯಲಹಂಕ ನ್ಯೂಟೌನ್, ಗೋವಿಂದ ರಾಜನಗರ, ಕಾಮಾಕ್ಷಿ ಪಾಳ್ಯ, ಬಾಗಲೂರು, ಕೊಡಿಗೆಹಳ್ಳಿ, ಅಮೃತಹಳ್ಳಿ ಪೊಲೀಸರು ಸಹ ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಜನರನ್ನು ಬಂಧಿಸಿ ಪ್ರತ್ಯೇಕ ವಾಗಿ ಸುಮಾರು 40 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. 2024ರ ಕೊನೆಯ ದಿನ ಸಹ ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗ ನಗರ ಪಾರ್ಟಿಗಳ ಮೇಲೆ ಕಣ್ಣಿಟ್ಟಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ