AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಫ್ಲೈಓವರ್‌ಗಳ ಕೆಳಗೆ ಬರಲಿದೆ ಹೈಟೆಕ್ ಫುಡ್ ಕೋರ್ಟ್, ಗಿಗ್ ಹಬ್: ಬಿಎಸ್‌ಎಂಐಎಲ್‌ ಮಾಸ್ಟರ್ ಪ್ಲಾನ್

ಬೆಂಗಳೂರಿನ ಸಿಲ್ಕ್ ಬೋರ್ಡ್‌ನಿಂದ ಕೆಆರ್ ಪುರಂವರೆಗಿನ ಹೊರವರ್ತುಲ ರಸ್ತೆಯನ್ನು (ORR) 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು BSMILE ಮಾಸ್ಟರ್ ಪ್ಲಾನ್ ರೂಪಿಸಿದೆ. ಈ ಯೋಜನೆಯಲ್ಲಿ 10 ಸ್ಮಾರ್ಟ್ ಬಸ್ ನಿಲ್ದಾಣಗಳು, ಪ್ರತ್ಯೇಕ ಬಸ್ ಲೇನ್‌ಗಳು, ಗಿಗ್ ಹಬ್‌ಗಳು ಮತ್ತು ಸೈಕಲ್ ಪಥಗಳನ್ನು ನಿರ್ಮಿಸಲಾಗುವುದು. ಮೇಲ್ಸೇತುವೆ ಕೆಳಗಿನ ಸ್ಥಳಗಳನ್ನು ಸಾರ್ವಜನಿಕ ಬಳಕೆಗೆ ಪರಿವರ್ತಿಸಲಾಗುತ್ತಿದ್ದು, ಇದು ಪಾದಚಾರಿ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಸಹಕಾರಿಯಾಗಲಿದೆ.

ಬೆಂಗಳೂರು ಫ್ಲೈಓವರ್‌ಗಳ ಕೆಳಗೆ ಬರಲಿದೆ ಹೈಟೆಕ್ ಫುಡ್ ಕೋರ್ಟ್, ಗಿಗ್ ಹಬ್: ಬಿಎಸ್‌ಎಂಐಎಲ್‌ ಮಾಸ್ಟರ್ ಪ್ಲಾನ್
ಸಾಂದರ್ಭಿಕ ಚಿತ್ರ Image Credit source: Google
ಅಕ್ಷಯ್​ ಪಲ್ಲಮಜಲು​​
|

Updated on:Jul 29, 2026 | 10:59 AM

Share

ಬೆಂಗಳೂರು, ಜು.29: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ಹೆದ್ದಾರಿಯಾದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್‌ ಪುರಂವರೆಗಿನ ಔಟರ್ ರಿಂಗ್ ರೋಡ್ (ORR) ಅಭಿವೃದ್ಧಿಪಡಿಸಲು ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (BSMILE) ಮಾಸ್ಟರ್ ಪ್ಲಾನ್ ರೂಪಿಸಿದೆ. ಸುಮಾರು 450 ಕೋಟಿ ರೂ. ವೆಚ್ಚದಲ್ಲಿ 17.1 ಕಿ.ಮೀ. ವರೆಗೆ ಒಟ್ಟು 6 ಪ್ರಮುಖ ಜಂಕ್ಷನ್‌ಗಳನ್ನು ಮರುಅಭಿವೃದ್ಧಿಪಡಿಸಲಾಗುತ್ತಿದ್ದು, ವಿದೇಶಿ ಮಾದರಿಯ ಸ್ಮಾರ್ಟ್ ಸೌಲಭ್ಯಗಳನ್ನು ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಒದಗಿಸಲು ಯೋಜನೆ ಸಿದ್ಧವಾಗಿದೆ.

ಇದರಲ್ಲಿ 10 ಸ್ಮಾರ್ಟ್ ಬಸ್ ಸ್ಟಾಪ್‌ಗಳನ್ನು ನೀಡಲಾಗುತ್ತದೆ. ಈ ಮಾರ್ಗದಲ್ಲಿರುವ 10 ಬಸ್ ತಾಣಗಳನ್ನು ಸುಸಜ್ಜಿತ ಸ್ಮಾರ್ಟ್ ಬಸ್ ಶೆಲ್ಟರ್‌ಗಳಾಗಿ ಪರಿವರ್ತಿಸಲಾಗುತ್ತದೆ. ಬಸ್ ಆಗಮನದ ಡಿಜಿಟಲ್ ಮಾಹಿತಿ ಪರದೆಗಳು , ಸಿಸಿಟಿವಿ ಕ್ಯಾಮೆರಾಗಳು, ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಈ ಸ್ಟಾಪ್‌ಗಳಲ್ಲಿ ಅಳವಡಿಸಲಾಗುತ್ತದೆ. ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಲು ಪ್ರತ್ಯೇಕ ಬಸ್ ಲೇನ್, ಅಗಲವಾದ ಕಾಲುದಾರಿ ಹಾಗೂ ಸಾಧ್ಯವಿರುವ ಕಡೆಗಳಲ್ಲಿ ಸೈಕಲ್ ಪಥಗಳನ್ನು ನಿರ್ಮಿಸಲಾಗುತ್ತದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇತ್ತೀಚೆಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ವಿವಿಧ ಹಿತಾಶಕ್ತಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಮೇಲ್ಸೇತುವೆಗಳ (Flyovers) ಕೆಳಗಿರುವ ಖಾಲಿ ಜಾಗಗಳನ್ನು ಉಪಯುಕ್ತ ಸಾರ್ವಜನಿಕ ಸ್ಥಳಗಳಾಗಿ ಪರಿವರ್ತಿಸುವುದಾಗಿ ಭರವಸೆ ನೀಡಿದ್ದರು. ಗಿಗ್ ಕಾರ್ಮಿಕರು (ಡೆಲಿವರಿ ಬಾಯ್ಸ್, ರೈಡರ್ಸ್) ಹಾಗೂ ಪ್ರವಾಸಿಗರಿಗಾಗಿ ನೆರಳಿನ ಆಸನ ವ್ಯವಸ್ಥೆ, ಚಾರ್ಜಿಂಗ್ ಲಾಕರ್‌ಗಳು, ವೈಫೈ (Wi-Fi) ಮತ್ತು ಮೈಕ್ರೋ-ಮೊಬಿಲಿಟಿ ಡಾಕ್‌ಗಳನ್ನು ಒಳಗೊಂಡ ‘ಗಿಗ್ ಹಬ್’ ನಿರ್ಮಿಸಲಾಗುತ್ತದೆ.

ಸೋಲಾರ್ ಪವರ್ ಆಧಾರಿತ ಚಾರ್ಜಿಂಗ್ ಹಾಗೂ ಡಿಜಿಟಲ್ ಕ್ಯೂ ಸಿಸ್ಟಮ್ ಹೊಂದಿದ ಸುಸಜ್ಜಿತ ಆಟೋ ರಿಕ್ಷಾ ತಾಣಗಳನ್ನು ಯೋಜಿಸಲಾಗಿದೆ. ಮೇಲ್ಸೇತುವೆಗಳ ಕೆಳಗಿನ ಜಾಗವನ್ನು ಮನರಂಜನಾ ಸೌಲಭ್ಯಗಳು, ಫುಡ್ ಕೋರ್ಟ್‌ಗಳು ಹಾಗೂ ಸಣ್ಣ ಮಾರುಕಟ್ಟೆ ಪ್ರದೇಶಗಳನ್ನಾಗಿ ಬಳಸಲಾಗುತ್ತದೆ. ಈ ಯೋಜನೆಯ ಕಲ್ಪನೆ ಮತ್ತು ವಿನ್ಯಾಸಗಳನ್ನು ಹಾಂಗ್ ಕಾಂಗ್, ಮೆಲ್ಬೋರ್ನ್ ಹಾಗೂ ಕೆನಡಾದ ಪ್ರಮುಖ ನಗರಗಳಲ್ಲಿರುವ ಮೂಲಸೌಕರ್ಯ ಮಾದರಿಗಳಿಂದ ಸ್ಪೂರ್ತಿ ಪಡೆದು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: ಸುರಕ್ಷಿತ ಬೆಂಗಳೂರಿಗೆ ಬಿಟಿಪಿ ಹೊಸ ಹೆಜ್ಜೆ: ಅನಾಥ ವಾಹನಗಳ ಬಗ್ಗೆ ದೂರು ನೀಡಲು ಈ ಆಪ್ ಬಳಸಿ

ಅಧಿಕಾರಿಗಳ ಅಂದಾಜಿನ ಪ್ರಕಾರ ಈ ಔಟರ್ ರಿಂಗ್ ರೋಡ್ ಕरिडोरದಲ್ಲಿರುವ ಆಫೀಸ್‌ಗಳಲ್ಲಿ ಸುಮಾರು 6.42 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ 3.38 ಲಕ್ಷ ವಾಹನಗಳು ಸಂಚರಿಸುತ್ತವೆ. ಈ ಕಾಯಕಲ್ಪದಿಂದ ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ಸಾಧ್ಯವಾಗಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 am, Wed, 29 July 26

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್