AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಸಂಭ್ರಮ: ಒಂದು ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ನಿಮಜ್ಜನ

ಬೆಂಗಳೂರಿನಲ್ಲಿ ಇಂದು ಗಣೇಶ ಮೂರ್ತಿ ವಿಸರ್ಜನೆ ನಡೆಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ 40ಕ್ಕೂ ಹೆಚ್ಚು ಕೆರೆಗಳಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಕಳೆದ ಒಂದು ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಇಂದು ಕೂಡ ನಗರದಲ್ಲಿ ಜನರು ಗಣೇಶ ಮೂರ್ತಿ ವಿಸರ್ಜನೆ ಮಾಡಿದರು.

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಸಂಭ್ರಮ: ಒಂದು ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ನಿಮಜ್ಜನ
ಗಣೇಶ ವಿಸರ್ಜನೆImage Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Sep 20, 2026 | 11:11 PM

Share

ಬೆಂಗಳೂರು, ಸೆಪ್ಟೆಂಬರ್​ 20: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸಡಗರ-ಸಂಭ್ರಮದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯ ಭರದಿಂದ ಸಾಗಿದೆ. ಇಂದು ಕೂಡ ನಗರದಾದ್ಯಂತ ವಿಸರ್ಜನೆ ನಡೆಯಿತು. ಕಳೆದ ಒಂದು ವಾರದಲ್ಲಿ ನಗರದಲ್ಲಿ ಬರೋಬ್ಬರಿ 4 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

40ಕ್ಕೂ ಹೆಚ್ಚು ಕೆರೆಗಳಲ್ಲಿ ಜಿಬಿಎ ವತಿಯಿಂದ ವ್ಯವಸ್ಥೆ

ಗಣೇಶ ಮೂರ್ತಿಗಳ ಸುಲಭ ವಿಸರ್ಜನೆಗಾಗಿ ಹಲಸೂರು ಕೆರೆ, ಸ್ಯಾಂಕಿ ಕೆರೆ, ಯಡಿಯೂರು ಕೆರೆ ಸೇರಿದಂತೆ ನಗರದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಿಬಿಎ ವತಿಯಿಂದ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಬೃಹತ್ ಗಾತ್ರದ ಮೂರ್ತಿಗಳನ್ನು ಸುಲಭವಾಗಿ ವಿಸರ್ಜನೆ ಮಾಡಲು ಪ್ರಮುಖ ಕೇಂದ್ರ ಸ್ಥಳಗಳಲ್ಲಿ ಮೂರು ಕ್ರೇನ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.

ಇದನ್ನೂ ಓದಿ: ಬ್ಯಾಂಕಾಕ್‌ನಲ್ಲಿ ವಿಶಿಷ್ಟ ಗಣೇಶ ಪೂಜೆ: ಮೋದಕದ ಬದಲಿಗೆ ಗಣಪನಿಗೆ ‘ಬಬಲ್ ಟೀ’ ನೈವೇದ್ಯ!

ಒಂದೆಡೆ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಇನ್ನೊಂದೆಡೆ ಭಕ್ತರಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.  ಭಕ್ತರು ಡೋಲು, ತಮಟೆ ಸದ್ದು ಹಾಗೂ “ಗಣಪತಿ ಬಪ್ಪಾ ಮೋರ್ಯಾ” ಘೋಷಣೆಗಳೊಂದಿಗೆ, ಭಕ್ತಿಭಾವದಿಂದ ಸಡಗರದಿಂದ ಪಾಲ್ಗೊಂಡು ಬಪ್ಪನಿಗೆ ವಿದಾಯ ಹೇಳಿದರು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡಿರುವ ದೃಶ್ಯಗಳು ಸಾಮಾನ್ಯವಾಗಿದೆ.

LIVE TV

ಹಲಸೂರು, ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಟ್ರಾಫಿಕ್ ಜಾಮ್: ಸವಾರರ ಪರದಾಟ

ಇನ್ನು ಗಣೇಶ ವಿಸರ್ಜನೆಯ ಸಂಭ್ರಮದ ನಡುವೆಯೇ ನಗರದ ಕೆಲವೆಡೆ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಅದರಲ್ಲೂ ಹಲಸೂರು ಮತ್ತು ಕಮರ್ಷಿಯಲ್ ಸ್ಟ್ರೀಟ್ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಗಂಟೆಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿದ್ದವು.

ಇದನ್ನೂ ಓದಿ: ದರ್ಗಾದಲ್ಲೇ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದಲೇ ವಿಘ್ನನಿವಾರಕನ ಪೂಜೆ; ದೇಶಕ್ಕೆ ಮಾದರಿಯಾದ ಕುರಂದವಾಡ

ಪರ್ಯಾಯ ಮಾರ್ಗಗಳ ಕುರಿತು ಸೂಕ್ತ ಮಾಹಿತಿ ಇಲ್ಲದೆ ಸವಾರರು ಪರದಾಡಿದ್ದು, ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:17 pm, Sun, 20 September 26

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!