AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್​ಪೋರ್ಟ್​!

ಇತ್ತೀಚಿಗೆ ಎನ್​ಐಎ ಅಧಿಕಾರಿಗಳು ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಜಿಗಣಿ ಪೊಲೀಸರು ಜಿಗಣಿಯ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ ಓರ್ವ ಪಾಕಿಸ್ತಾನ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತ ಪಾಕಿಸ್ತಾನ ಪ್ರಜೆ ಮತ್ತು ಆತನ ಕುಟುಂಬದ ಬಳಿ ಭಾರತದ ಪಾಸ್​ಪೋರ್ಟ್​ ಇದೆ.

ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್​ಪೋರ್ಟ್​!
ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿ
ರಾಮು, ಆನೇಕಲ್​
| Edited By: |

Updated on:Oct 01, 2024 | 3:10 PM

Share

ಆನೇಕಲ್, ಅಕ್ಟೋಬರ್​ 01: ಬಂಧಿತ ಪಾಕಿಸ್ತಾನ ಪ್ರಜೆಗಳನ್ನು (Pakistan citizen) ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವು ವಿಚಾರಗಳು ಅಧಿಕಾರಿಗಳಿಗೆ ಗೊತ್ತಾಗಿದೆ. ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿ ಕುಟುಂಬ ಭಾರತಕ್ಕೆ ಅಕ್ರಮವಾಗಿ ನುಸುಳಲು, ಭಾರತೀಯ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್​ ಮತ್ತು ಡಿಎಲ್ ಎಲ್ಲವನ್ನು ಹೊಂದಲು ಮೆಹದಿ ಫೌಂಡೇಷನ್​ನ ಪ್ರಮುಖ ವ್ಯಕ್ತಿ ಪರ್ವೇಜ್ ಸಹಾಯ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಪರ್ವೇಜ್​ ಮತ್ತು ಇತನ ಸಂಪರ್ಕದಲ್ಲಿದ್ದವವರಿಗಾಗಿ ಹುಡುಕಾಟ ನಡೆಸಿದ್ದಾರೆ. ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿಗೆ ಮುಂಬೈ ಮತ್ತು ದೆಹಲಿಯಲ್ಲಿ ಹಲವರು ಪರಿಚಯಸ್ಥರಿದ್ದಾರೆ. ಹೀಗಾಗಿ, ಎರಡು ಪೊಲೀಸ್​​ ತಂಡ ಮುಂಬೈ ಮತ್ತು ದೆಹಲಿಗೆ ತೆರಳಿದೆ. ರಶೀದ್ ಕುಟುಂಬದವರ ಸಂಪರ್ಕದಲ್ಲಿರುವವರಿಗಾಗಿ ಶೋಧ ನಡೆಸುತ್ತಿವೆ.

ಇದನ್ನೂ ಓದಿ:  ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಸಿದ ಎನ್​ಐಎ: ಆಘಾತಕಾರಿ ಮಾಹಿತಿ ಬೆಳಕಿಗೆ

ಪಾಕ್ ಪ್ರಜೆಗಳ ಬಳಿ ಇದೆ ಭಾರತದ ಪಾಸ್‌ಪೋರ್ಟ್

ರಶೀದ್ ಅಲಿ ಸಿದ್ಧಕಿ ಮತ್ತು ಈತನ ಕುಟುಂಬಸ್ಥರ ಬಳಿ ಭಾರತದ ಪಾಸ್​ಪೋರ್ಟ್​ ಪತ್ತೆಯಾಗಿದೆ. ದೆಹಲಿಯ ಪರ್ವೇಜ್ ಮೂಲಕ ಭಾರತೀಯ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದಾರೆ. ಪಾಸ್‌ಪೋರ್ಟ್ ಜೊತೆ ಅಧಾರ್, ಪ್ಯಾನ್ ಮತ್ತು ಡಿಎಲ್ ಸಹ ಮಾಡಿಸಿಕೊಂಡಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಸೋಮವಾರ ಬಂಧಿಸಿದ್ದರು. ಪಾಕಿಸ್ತಾನ ಪ್ರಜೆ ಸೇರಿಂದತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪಾಕಿಸ್ತಾನ ಪ್ರಜೆ ರಷೀದ್ ಸಿದ್ದಿಕಿ ಅಲಿಯಾಸ್​ ಶಂಕರ್ ಶರ್ಮಾ (48), ಆಯುಷಾ ಅನಿಫ್ ಅಲಿಯಾಸ್​ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ ಅಲಿಯಾಸ್​ ರಾಮ್ ಬಾಬಾ ಶರ್ಮಾ (73), ರುಬೀನಾ ಅಲಿಯಾಸ್​ ರಾಣಿ ಶರ್ಮಾ (61) ಬಂಧಿತರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:05 pm, Tue, 1 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್