AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ಚೈತ್ರಾ ಆ್ಯಂಡ್ ಗ್ಯಾಂಗ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎಂಎಲ್​ಟಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ್ದ ಚೈತ್ರಾ ಮತ್ತು ಆಕೆಯ ಗ್ಯಾಂಗ್​ ಇದೀಗ ಪರಪ್ಪಮ ಅಗ್ರಹಾರ ಪಾಲಾಗಿದ್ದು, ಇದೀಗ ಆರೋಪಿಗಳಿಗೆ ಕೈದಿ ನಂಬರ್​ಗಳನ್ನು ನೀಡಲಾಗಿದೆ. ಹಾಗಾದ್ರೆ, ಚೈತ್ರಾಗೆ ಯಾವ ನಂಬರ್? ಇನ್ನುಳಿದ ಆರೋಪಿಗಳಿಗೆ ಯಾವೆಲ್ಲ ನಂಬರ್ ನಿಡಲಾಗಿದೆ ಎನ್ನುವ ವಿವರ ಇಲ್ಲಿದೆ.

ವಂಚನೆ ಪ್ರಕರಣ: ಚೈತ್ರಾ ಆ್ಯಂಡ್ ಗ್ಯಾಂಗ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ
ಆರೋಪಿಗಳು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 24, 2023 | 12:15 PM

ಬೆಂಗಳೂರು, (ಸೆಪ್ಟೆಂಬರ್ 24): ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ (Chaitra) ಆ್ಯಂಡ್​ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಇದೀಗ ಜೈಲಾಧಿಕಾರಿಗಳು ಆರೋಪಿಗಳಿಗೆ ಕೈದಿ ನಂಬರ್ ನೀಡಿದ್ದಾರೆ. ಪ್ರಕರಣದ ಎ1 ಆರೋಪಿ ಚೈತ್ರಾಗೆ 9737 ನೇ ನಂಬರ್ ನೀಡಿದ್ದರೆ, ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್ 9738, ರಮೇಶ್-9739 ಚೆನ್ನಾನಾಯ್ಕ-9740, ಧನರಾಜ್-9741 ಎಂದು ವಿಚಾರಣಾಧೀನ ನಂಬರ್ ನೀಡಲಾಗಿದೆ.

ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ ಕೇಸ್​ನಲ್ಲಿ ಸಿಲುಕಿದ್ದ ಚೈತ್ರಾ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು 10 ದಿನಗಳಿಂದ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದರು. ಆದ್ರೆ ನಿನ್ನೆ(ಸೆಪ್ಟೆಂಬರ್ 23) ಕಸ್ಟಡಿ ಅಂತ್ಯವಾಗಿದ್ದರಿಂದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್​ಗೆ ವಂಚಕರ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು. ನ್ಯಾಯಾಲಯವೂ ಚೈತ್ರಾ ಹಾಗೂ ಆಕೆಯ ಗ್ಯಾಂಗ್​​ನ ಗಗನ್ ಕಡೂರ್, ಧನರಾಜ್, ರಮೇಶ್, ಶ್ರೀಕಾಂತ್ ಮತ್ತು ಚೆನ್ನನಾಯ್​​​​ಗೆ 14 ದಿನಗಳು ಅಂದ್ರೆ ಅಕ್ಟೋಬರ್​ 6 ರ ತನಕ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಆ ವೇಳೆ ಚೈತ್ರಾ ನ್ಯಾಯಾಧೀಶರ ಎದುರು ಗಳಗಳನೆ ಕಣ್ಣೀರು ಹಾಕಿದ್ದಳು. ನಂತರ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ವಂಚನೆ ಕೇಸ್​​ನಲ್ಲಿ ಮೂರನೇ ಆರೋಪಿ ಹಾಲಶ್ರೀಗೆ ಸಂಕಷ್ಟ ಶುರುವಾಗಿದೆ. ಏಕೆಂದ್ರೆ, ವಂಚನೆ ಗ್ಯಾಂಗ್​​​​​ ಪರಪ್ಪನ ಅಗ್ರಹಾರ ಸೇರಿದ್ರೆ, ಹಾಲಶ್ರೀಯನ್ನ ಮಾತ್ರ ಸೆಪ್ಟೆಂಬರ್29 ರವರೆಗೆ CCB ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕಣ್ಣೀರಿನಲ್ಲಿ ರಾತ್ರಿ ಕಳೆದ ಚೈತ್ರಾ

ಪರಪ್ಪನ ಅಗ್ರಾಹರ ಜೈಲಿನಲ್ಲಿ ಚೈತ್ರಾ, ನಿದ್ದೆ ಇಲ್ಲದೇ ಚಿಂತೆಯಲ್ಲೇ ಕಣ್ಣೀರಿನಲ್ಲಿ ರಾತ್ರಿ ಕಳೆದಿದ್ದಾಳೆ. ನಿನ್ನೆ(ಸೆ.23) ಸಂಜೆ 6 ಗಂಟೆ ಸುಮಾರಿಗೆ ಜೈಲು ಪ್ರವೇಶಿಸಿದ್ದ ಚೈತ್ರಾ ಅಂಡ್ ಗ್ಯಾಂಗ್, ಪರಪ್ಪನ ಅಗ್ರಹಾರ ಜೈಲಿನ ಹೊಸ ಬಂದಿಖಾನೆಯಲ್ಲಿದೆ. ಆದ್ರೆ, ಚೈತ್ರಾಳನ್ನು ಪ್ರತ್ಯೇಕ ಕ್ವಾರಂಟೈನ್ ಸೆಲ್​ನಲ್ಲಿ ಇರಿಸಲಾಗಿದ್ದು, ನಿನ್ನೆ ರಾತ್ರಿ ಸಿಬ್ಬಂದಿಗಳು ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ ಚೈತ್ರಾ, ಬಳಿಕ ಇಂದು(ಸೆ.24) ಬೆಳಿಗ್ಗೆ ಜೈಲು ಸಿಬ್ಬಂದಿಗಳು ನೀಡಿ ಪಲಾವ್ ಸೇವಿಸಿದ್ದಾಳೆ. ಸದ್ಯ ಇನ್ನು 9 ದಿನ ಹೊಸ ಬಂಧಿಖಾನೆಯಲ್ಲೇ ಉಳಿಯಲಿರುವ ಚೈತ್ರಾಳನ್ನು ಬಳಿಕ ಹಳೆ ಬಂಧಿಖಾನೆಗೆ ಶಿಫ್ಟ್ ಮಾಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Sun, 24 September 23

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್