Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: 8ನೇ ತರಗತಿಯ ನಂತರ ಕನ್ನಡ ಭಾಷಾ ಪಠ್ಯ ಕೈಬಿಡಲು ಖಾಸಗಿ ಶಾಲೆಗೆ ಪೋಷಕರ ಮನವಿ; ಕನ್ನಡ ಸಂಘಟನೆಗಳ ವಿರೋಧ

ಪಠ್ಯಕ್ರಮದಿಂದ ಕನ್ನಡ ಭಾಷೆಯನ್ನು ಕೈಬಿಡಬೇಕೆಂಬ ಪೋಷಕರ ಆಗ್ರಹದ ವಿರುದ್ಧ ಕನ್ನಡ ಪರ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ವಿರೋಧಿಸುತ್ತಿರುವ ಶಾಲೆ ಮತ್ತು ಪೋಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಲವರು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ.

Bengaluru: 8ನೇ ತರಗತಿಯ ನಂತರ ಕನ್ನಡ ಭಾಷಾ ಪಠ್ಯ ಕೈಬಿಡಲು ಖಾಸಗಿ ಶಾಲೆಗೆ ಪೋಷಕರ ಮನವಿ; ಕನ್ನಡ ಸಂಘಟನೆಗಳ ವಿರೋಧ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jul 17, 2023 | 4:01 PM

ಬೆಂಗಳೂರು, ಜುಲೈ 17: ಕನ್ನಡ ಭಾಷೆಯನ್ನು (Kannada Language) 8ನೇ ತರಗತಿಯ ನಂತರ ಪಠ್ಯಕ್ರಮದಲ್ಲಿ ಸೇರಿಸಬಾರದು ಎಂದು ಬೆಂಗಳೂರಿನ ಖಾಸಗಿ ಶಾಲೆಯೊಂದರ (Private School)  ವಿದ್ಯಾರ್ಥಿಗಳ ಪೋಷಕರು ಶಾಲಾ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ. ನಗರದ ಚಾಲುಕ್ಯ ವೃತ್ತದ ಬಳಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ 50 ಕ್ಕೂ ಹೆಚ್ಚು ಮಕ್ಕಳ ಪೋಷಕರು ಪಠ್ಯಕ್ರಮದಿಂದ ಕನ್ನಡ ಭಾಷೆ ಕೈಬಿಡುವಂತೆ ಶಾಲೆಯನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ್ದಾರೆ.

ಖಾಸಗಿ ಶಾಲೆಯು ಪೋಷಕರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಲು ಚಿಂತನೆ ನಡೆಸಿದೆ. ಜತೆಗೆ ಈ ಬಗ್ಗೆ ಶಾಲಾ ಆಡಳಿತಕ್ಕೆ ಪತ್ರ ಬರೆಯುವಂತೆ ಹೇಳಿದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಪಠ್ಯಕ್ರಮದಲ್ಲಿ ಕನ್ನಡದ ಬದಲು ಇಂಗ್ಲಿಷ್ ಸೇರಿಸಿದರೆ ಮಕ್ಕಳು ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದಾಗ ಅನುಕೂಲವಾಗುತ್ತದೆ ಎಂದು ಪೋಷಕರು ವಾದ ಮಂಡಿಸಿದ್ದಾರೆ.

ಈ ಮಧ್ಯೆ, ಪಠ್ಯಕ್ರಮದಿಂದ ಕನ್ನಡ ಭಾಷೆಯನ್ನು ಕೈಬಿಡಬೇಕೆಂಬ ಪೋಷಕರ ಆಗ್ರಹದ ವಿರುದ್ಧ ಕನ್ನಡ ಪರ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ವಿರೋಧಿಸುತ್ತಿರುವ ಶಾಲೆ ಮತ್ತು ಪೋಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಲವರು ಟ್ವಿಟರ್‌ನಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಹುಭಾಷಾ ಶಿಕ್ಷಣದ ಪ್ರಯೋಜನಗಳು: ಸಾಂಸ್ಕೃತಿಕ ತಿಳುವಳಿಕೆ ಮತ್ತು ಅರಿವಿನ ಅಭಿವೃದ್ಧಿಗಾಗಿ ಈ ಕಲಿಕೆ

ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯು ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ