
ಬೆಂಗಳೂರು, ಏ.1: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನಾಗರಿಕ ಪ್ರಜ್ಞೆ ಹೇಗೆ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದವೊಂದು ಸಾಕ್ಷಿಯಾಗಿದೆ. ಪುತ್ತಿಗೆ ಮಠದ ಮುಂಭಾಗ ವಾಹನ ನಿಲುಗಡೆ ಮಾಡುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿ ಮತ್ತು ಮಹಿಳಾ ನಡುವೆ ನಡೆದ ಜಗಳ, ಕೊನೆಗೆ ಪೊಲೀಸರ ಸಮ್ಮುಖದಲ್ಲಿ ‘ರಾಜಿ’ಯೊಂದಿಗೆ ಅಂತ್ಯಗೊಂಡಿದೆ.
ವರದಿಗಳ ಪ್ರಕಾರ, ಕಾಲೇಜು ವಿದ್ಯಾರ್ಥಿಯೊಬ್ಬ ಮಠದ ಮುಂಭಾಗ ನಿರ್ಬಂಧವಿದ್ದರೂ ಆತುರದಲ್ಲಿ ವಾಹನ ಪಾರ್ಕ್ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಮಠದ ಭಕ್ತನೊಂದಿಗೆ ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದು, ಇದು ದೈಹಿಕ ಹಲ್ಲೆಯ ಹಂತಕ್ಕೆ ತಲುಪಿದೆ. ಗಲಾಟೆಯ ನಡುವೆ ವಿದ್ಯಾರ್ಥಿಯು ಮಹಿಳೆಯೊಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಇಲ್ಲಿದೆ ನೋಡಿ ವಿಡಿಯೋ:
Parking Dispute Turns Violent, Ends in ‘Compromise’ Instead of Accountability in Bengaluru
A simple parking issue spiralled into violence in Bengaluru’s Basavanagudi area, where a college student and a devotee of the Puttige Mutt got into a physical clash once again exposing… pic.twitter.com/vGTapbQPsj
— Karnataka Portfolio (@karnatakaportf) March 31, 2026
ಈ ಘಟನೆಯ ನಂತರ ಎರಡೂ ಕಡೆಯವರು ಬಸವನಗುಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದರೆ, ಪೊಲೀಸರು ಕಠಿಣ ಕ್ರಮ ಕೈಗೊಳ್ಳುವ ಬದಲು, ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಆತನ ಪೋಷಕರನ್ನು ಕರೆಸಿ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಯಾವುದೇ ಎಫ್ಐಆರ್ (FIR) ದಾಖಲಿಸದೆ ಪ್ರಕರಣವನ್ನು ಪರಸ್ಪರ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!
ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ? ದೈಹಿಕ ಹಲ್ಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ಕೇವಲ ‘ರಾಜಿ’ಯ ಮೂಲಕ ಮುಚ್ಚಿ ಹಾಕುವುದು ಎಷ್ಟರ ಮಟ್ಟಿಗೆ ಸರಿ? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:39 am, Wed, 1 April 26