AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಪಾರ್ಕಿಂಗ್ ಶಾಕ್: ಈ ಪ್ರದೇಶದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೆ ಸಿದ್ಧತೆ, ವಾಹನ ಸವಾರರ ಆಕ್ರೋಶ!

ಬೆಂಗಳೂರಿನ ಜಯನಗರದ 42 ಪ್ರಮುಖ ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಮುಂದಾಗಿದೆ. ಅನಧಿಕೃತ ಪಾರ್ಕಿಂಗ್ ತಡೆಯುವ ಮತ್ತು ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ತೆರಿಗೆ ಹೊರೆಯಿಂದ ಕಂಗಾಲಾಗಿರುವ ವಾಹನ ಸವಾರರು ಈ ಹೊಸ ಶುಲ್ಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಗರಿಗೆ ಪಾರ್ಕಿಂಗ್ ಶಾಕ್: ಈ ಪ್ರದೇಶದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೆ ಸಿದ್ಧತೆ, ವಾಹನ ಸವಾರರ ಆಕ್ರೋಶ!
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Apr 14, 2026 | 7:45 AM

Share

ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನಲ್ಲಿ ಟ್ರಾಫಿಕ್ (Bangalore Traffic) ಕಿರಿಕಿರಿ ನಡುವೆ ವಾಹನ ಸವಾರರಿಗೆ ಈಗ ಪಾರ್ಕಿಂಗ್ ಬಿಸಿ ತಟ್ಟಲಿದೆ. ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಗೆ ಮುಕ್ತಿ ನೀಡಲು ಮತ್ತು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಜಿಬಿಎ (GBA) ಅಧಿಕಾರಿಗಳು, ‘ಪೇ ಆ್ಯಂಡ್ ಪಾರ್ಕಿಂಗ್ (Pay and Parking)’ ವ್ಯವಸ್ಥೆಗೆ ಮತ್ತಷ್ಟು ರಸ್ತೆಗಳನ್ನು ಸೇರ್ಪಡೆ ಮಾಡುತ್ತಿದ್ದಾರೆ. ಈಗಾಗಲೇ ನಗರದ ಅನೇಕ ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ಜಾರಿಯಲ್ಲಿದೆ. ಇದಕ್ಕೆ ಇನ್ನಷ್ಟು ರಸ್ತೆಗಳನ್ನು ಸೇರಿಸಲು ಸಿದ್ಧತೆ ಮಾಡಲಾಗುತ್ತಿದೆ.

ಜಯನಗರದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್

ಹೊಸ ಪಾರ್ಕಿಂಗ್ ನೀತಿಯ ಭಾಗವಾಗಿ ಬೆಂಗಳೂರು ದಕ್ಷಿಣ ವಲಯದ ಜಯನಗರದ ಬರೋಬ್ಬರಿ 42 ರಸ್ತೆಗಳನ್ನು ಪೇ ಆ್ಯಂಡ್ ಪಾರ್ಕಿಂಗ್ ವಲಯಗಳನ್ನಾಗಿ ಗುರುತಿಸಲಾಗಿದೆ. ಈ ರಸ್ತೆಗಳಲ್ಲಿ ಇನ್ನು ಮುಂದೆ ವಾಹನ ನಿಲ್ಲಿಸಬೇಕಾದರೆ ನಿಗದಿತ ಶುಲ್ಕ ಪಾವತಿಸುವುದು ಅನಿವಾರ್ಯವಾಗಲಿದೆ. ಈ ಮೂಲಕ ಪಾಲಿಕೆಯು ತನ್ನ ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ.

ವಾಹನ ಸವಾರರ ಅಸಮಾಧಾನ

ಪಾಲಿಕೆಯ ಈ ನಿರ್ಧಾರದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಹನ ಖರೀದಿಸುವಾಗಲೇ ರಸ್ತೆ ತೆರಿಗೆ ಸೇರಿದಂತೆ ಲಕ್ಷಾಂತರ ರೂಪಾಯಿ ಪಾವತಿಸಿರುತ್ತೇವೆ. ಈಗ ರಸ್ತೆ ಪಕ್ಕದಲ್ಲಿ ಗಾಡಿ ನಿಲ್ಲಿಸುವುದಕ್ಕೂ ಹಣ ವಸೂಲಿ ಮಾಡುವುದು ಜನಸಾಮಾನ್ಯರ ಮೇಲೆ ಹೊರೆ ಹೇರಿದಂತೆ ಎಂದು ವಾಹನ ಸವಾರರು ಕಿಡಿಕಾರಿದ್ದಾರೆ.

ನಗರದಲ್ಲಿ ಸಂಚರಿಸುವ ಲಕ್ಷಾಂತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಶುಲ್ಕದ ಹೆಸರಿನಲ್ಲಿ ಜನರನ್ನು ಪೀಡಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಮೇಲೆ ಸ್ಪೀಡ್ ಬ್ರೇಕ್, ಅತಿ ವೇಗವಾಗಿ ವಾಹನ ಸಂಚರಿಸಿದರೆ ದಂಡ

ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ತಡೆಯಲು ಮತ್ತು ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಏಪ್ರಿಲ್ 5ರಿಂದ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರು ಮಾಡಲಾಗಿದೆ. ಸಾರ್ವಜನಿಕರ ಆಕ್ರೋಶ ಮತ್ತು ಕಿರುಕುಳದ ದೂರುಗಳಿಂದಾಗಿ 2022ರಲ್ಲಿ ಟೋಯಿಂಗ್ ಅನ್ನು ನಿಲ್ಲಿಸಲಾಗಿತ್ತು. ಆದರೆ ಈಗ ಜಿಬಿಎ ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ಟೋಯಿಂಗ್ ಪುನರಾರಂಭಿಸಿದ್ದಾರೆ. ಇದಕ್ಕೂ ಸಾವರ್ಜನಿಕ ವಲುಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು