ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆಗೆ ಮುಂದಾಗಿದೆ. ಇದರಿಂದ ಶಾಪಿಂಗ್ ಪ್ರಿಯರಿಗೆ ಉಚಿತ ಪಾರ್ಕಿಂಗ್ ಸೌಲಭ್ಯ ಇರುವುದಿಲ್ಲ. ಇನ್ನು ಮುಂದೆ ವಾಹನ ನಿಲುಗಡೆಗೆ ಶುಲ್ಕ ತೆರಬೇಕು. ಇದರಿಂದ ಗ್ರಾಹಕರ ಮೇಲೆ ಆರ್ಥಿಕ ಹೊರೆ ಹೆಚ್ಚಲಿದ್ದು, GBA ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.

ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ
Pay And Park

Updated on: Jan 20, 2026 | 9:34 PM

ಬೆಂಗಳೂರು, ಜನವರಿ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೇ ಆ್ಯಂಡ್ ಪಾರ್ಕ್ (Pay and Park) ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಹಾಗಾಗಿ ಇದೀಗ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್​ ಮಲ್ಲೇಶ್ವರನ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಲ್ಲೇಶ್ವರನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್. ಸಂಪಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ಸದಾ ವಿವಿಧ ಚಟುವಟಿಕೆಗಳಿಂದ ಗಿಜುಗುಡುತ್ತಿರುತ್ತವೆ. ಆದರೆ ಶಾಪಿಂಗ್ ಅಂತಾ ಕಾರು, ಬೈಕ್​ಗಳಲ್ಲಿ ಬರುವ ಜನರು ಮಾತ್ರ ಶೀಘ್ರದಲ್ಲೇ ಪಾರ್ಕಿಂಗ್​​​ ಅಂತಲೇ ಹೆಚ್ಚುವರಿ ಹಣ ತೆರಬೇಕು.

ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರಿನ ಮಲ್ಲೇಶ್ವರಂ ಐಕಾನಿಕ್ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರಿಗೆ ಅಚ್ಚುಮೆಚ್ಚು. ಕಾರು, ಬೈಕ್​ಗಳಲ್ಲಿ ಶಾಪಿಂಗ್ ಅಂತಾ​ ಇಲ್ಲಿಗೆ ಬರುತ್ತಿದ್ದ ಗ್ರಾಹಕರು ಉಚಿತವಾಗಿ ವಾಹನಗಳನ್ನ ಪಾರ್ಕಿಂಗ್​ ಮಾಡಿ ಹೋಗುತ್ತಿದ್ದರು. ಆದರೆ ಈ ರಸ್ತೆಯಲ್ಲಿ ಪೇ ಆ್ಯಂಡ್​ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡುವುದಕ್ಕೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಮುಂದಾಗಿದೆ.

ಇದನ್ನೂ ಓದಿ: Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ವಾಹನ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!

ಇನ್ನು ಪಶ್ಚಿಮ ನಗರ ಪಾಲಿಕೆ ಟೆಂಡರ್ ಆಹ್ವಾನ ಮಾಡಿದ್ದು, ಸಂಪಿಗೆ ರಸ್ತೆ, 11,15 ಹಾಗೂ 18ನೇ ಅಡ್ಡರಸ್ತೆಗಳಲ್ಲಿ ಪಾರ್ಕಿಂಗ್​ಗೆ ಶುಲ್ಕ ಸಂಗ್ರಹಿಸಲಿದೆ. ವಾರ್ಷಿಕ ಪರವಾನಿಗೆ ಪಡೆಯಲು ಬಯಸುವ ಏಜೆನ್ಸಿಗಳಿಗೆ 2.20 ಕೋಟಿ ರೂಪಾಯಿಗಳ ಶುಲ್ಕವನ್ನ ನಿಗದಿ ಮಾಡಿದೆ. ಆದರೆ ಪಾಲಿಕೆ ನಿರ್ಧಾರದ ವಿರುದ್ಧ ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ವೈಟ್​ ಟ್ಯಾಪಿಂಗ್​ ರಸ್ತೆಗಳಲ್ಲೆಲ್ಲ ಶೀಘ್ರ ಪೇ ಆ್ಯಂಡ್​ ಪಾರ್ಕಿಂಗ್​? ದುಬಾರಿ ವೆಚ್ಚ ಸರಿದೂಗಿಸಲು ಜಿಬಿಎ ಹೊಸ ಪ್ಲಾನ್

ಬಟ್ಟೆ, ಚಪ್ಪಲಿ, ಅಲಂಕಾರಿಕ ವಸ್ತುಗಳು, ಆಹಾರ ಉತ್ಪನ್ನಗಳ ಖರೀದಿಗೆ ಮುಗಿಬೀಳುತ್ತಿದ್ದ ಗ್ರಾಹಕರಿಗೆ ಸಂಪಿಗೆ ರಸ್ತೆ ಮತ್ತಷ್ಟು ದುಬಾರಿಯಾಗಲಿದೆ. ಉಚಿತವಾಗಿ ಪಾರ್ಕ್ ಮಾಡಿ ಹೋಗುತ್ತಿದ್ದ ಜನರಿಗೆ ಶೀಘ್ರದಲ್ಲೇ ಈ ಹೊರೆ ಬಿಸಿಮುಟ್ಟಿಸಲಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us