AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಫ್ಲೈಓವರ್ ಘನ ವಾಹನ ಸಂಚಾರಕ್ಕೂ ಶೀಘ್ರ ಮುಕ್ತ: ಶುಕ್ರವಾರ ಅಧಿಕಾರಿಗಳ ಸಭೆ

ತಜ್ಞರ ಸಮಿತಿಯ ಸದಸ್ಯರು ಮತ್ತು ಎನ್‌ಎಚ್‌ಎಐ ಅಧಿಕಾರಿಗಳು ಫೆಬ್ರವರಿ 2 ರಂದು ಸಭೆ ಸೇರಿ ವರದಿಯ ಬಗ್ಗೆ ಚರ್ಚಿಸಲು ಮತ್ತು ಘನ ವಾಹನಗಳ ಸಂಚಾರಕ್ಕೆ ಫ್ಲೈಓವರ್‌ನಲ್ಲಿ ಅವಕಾಶ ನೀಡುವ ಬಗ್ಗೆ ನಿರ್ಧರಿಸುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರ ಸಮಿತಿಯ ಮುಖ್ಯಸ್ಥರೂ ಆಗಿರುವ ಐಐಎಸ್‌ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಜೆಎಂ ಮಾಹಿತಿ ನೀಡಿದ್ದಾರೆ.

ಪೀಣ್ಯ ಫ್ಲೈಓವರ್ ಘನ ವಾಹನ ಸಂಚಾರಕ್ಕೂ ಶೀಘ್ರ ಮುಕ್ತ: ಶುಕ್ರವಾರ ಅಧಿಕಾರಿಗಳ ಸಭೆ
ಪೀಣ್ಯ ಫ್ಲೈಓವರ್
ಗಣಪತಿ ಶರ್ಮಾ
|

Updated on: Jan 31, 2024 | 8:11 AM

Share

ಬೆಂಗಳೂರು, ಜನವರಿ 31: ಉತ್ತರ ಬೆಂಗಳೂರಿನ ಪೀಣ್ಯ ಮೇಲ್ಸೇತುವೆ (Peenya flyover) ಎರಡು ವರ್ಷಗಳ ನಂತರ ಫೆಬ್ರವರಿಯಲ್ಲಿ ಘನ ವಾಹನಗಳ (Heavy Vehicles) ಸಂಚಾರಕ್ಕೆ ಮತ್ತೆ ತೆರೆಯುವ ಸಾಧ್ಯತೆಯಿದೆ. ತುಮಕೂರು ರಸ್ತೆಯಲ್ಲಿರುವ 15 ಮೀಟರ್ ಅಗಲದ, 4.2 ಕಿಮೀ ಉದ್ದದ ಫ್ಲೈಓವರ್ ಅನ್ನು 2021 ರ ಡಿಸೆಂಬರ್ ತಿಂಗಳಿನಿಂದ ಬಸ್ಸುಗಳು ಮತ್ತು ಟ್ರಕ್​ಗಳ ಸಂಚಾರಕ್ಕೆ ನಿಷೇಧಿಸಲಾಗಿತ್ತು. ಫ್ಲೈಓವರ್​ನ ಮೂರು ವ್ಯಾಪ್ತಿಯಲ್ಲಿರುವ ಪ್ರಿಸ್ಟ್ರೆಸ್ಡ್ ಕೇಬಲ್​​ಗಳು ತುಕ್ಕು ಹಿಡಿದಿರುವುದು ಬೆಳಕಿಗೆ ಬಂದು ಘನ ವಾಹನ ಸಂಚಾರ ಅಸಾಧ್ಯವಾದ ಕಾರಣ ನಿಷೇಧ ನಿರ್ಧಾರ ಕೈಗೊಳ್ಳಲಾಗಿತ್ತು. ಇದು ಸರ್ವೀಸ್ ರಸ್ತೆಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗಿತ್ತು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕಳೆದ ವರ್ಷ 38.5 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಕೇಬಲ್‌ಗಳನ್ನು ಹೆಚ್ಚುವರಿಯಾಗಿ ಸೇರಿಸಲು ಮತ್ತು ಫ್ಲೈಓವರ್ ಅನ್ನು ಬಲಪಡಿಸಲು ಕಾಮಗಾರಿ ಆರಂಭಿಸಿತ್ತು. ಫ್ಲೈಓವರ್‌ನಲ್ಲಿ 120 ಸ್ಪ್ಯಾನ್‌ಗಳೊಂದಿಗೆ, ಎನ್‌ಎಚ್‌ಎಐ 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಸೇರಿಸಿದ್ದು, ಅದನ್ನು ಬಲಪಡಿಸಿದೆ.

240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಜನವರಿ 16 ರಂದು ರಾತ್ರಿ 11 ರಿಂದ ಜನವರಿ 19 ರಂದು ಬೆಳಿಗ್ಗೆ 11 ರವರೆಗೆ ಫ್ಲೈಓವರ್‌ನಲ್ಲಿ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಲೋಡ್ ಪರೀಕ್ಷೆಯ ಸಮಯದಲ್ಲಿ, 105-106 ಮತ್ತು 117-118 ಕಂಬಗಳನ್ನು ಸಂಪರ್ಕಿಸುವ ಎರಡು ಸ್ಪ್ಯಾನ್‌ಗಳಲ್ಲಿ ತಲಾ 32 ಟನ್‌ಗಳನ್ನು ಹೊತ್ತ ಎಂಟು ಟ್ರಕ್‌ಗಳನ್ನು ನಿಲ್ಲಿಸಿ ಪರೀಕ್ಷೆ ನಡೆಸಲಾಗಿತ್ತು.

ತಜ್ಞರ ಸಮಿತಿ ಹೇಳಿದ್ದೇನು?

ಲೋಡ್ ಟೆಸ್ಟಿಂಗ್ ಫಲಿತಾಂಶಗಳು ತೃಪ್ತಿಕರವಾಗಿವೆ ಮತ್ತು ಮುಂದಿನ ಅಗತ್ಯ ಕ್ರಮಕ್ಕಾಗಿ ವರದಿಯನ್ನು ಎನ್‌ಎಚ್‌ಎಐ ಪ್ರಧಾನ ಕಚೇರಿಗೆ ಕಳುಹಿಸಲಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಜೆಎಂ ಹೇಳಿದ್ದಾರೆ. ಇವರು ಮೇಲ್ಸೇತುವೆ ಕುರಿತು ರಚಿಸಲಾಗಿರುವ ನಾಲ್ಕು ಸದಸ್ಯರ ತಜ್ಞರ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ.

ಪ್ರೊ ಕಿಶನ್ ಪ್ರಕಾರ, ಸಮಿತಿಯ ಸದಸ್ಯರು ಮತ್ತು ಎನ್‌ಎಚ್‌ಎಐ ಅಧಿಕಾರಿಗಳು ಫೆಬ್ರವರಿ 2 ರಂದು ಸಭೆ ಸೇರಿ ವರದಿಯ ಬಗ್ಗೆ ಚರ್ಚಿಸಲು ಮತ್ತು ಘನ ವಾಹನಗಳ ಸಂಚಾರಕ್ಕೆ ಫ್ಲೈಓವರ್‌ನಲ್ಲಿ ಅವಕಾಶ ನೀಡುವ ಬಗ್ಗೆ ನಿರ್ಧರಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಪೀಣ್ಯ ಫ್ಲೈಓವರ್ ರಿ ಓಪನ್; ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ

ಘನ ವಾಹನ ಸಂಚಾರಕ್ಕೆ ದಿನಾಂಕವನ್ನು ನಿಗದಿಪಡಿಸಲಾಗಿಲ್ಲವಾದರೂ, ಫೆಬ್ರವರಿ ಆರಂಭದಲ್ಲಿ ಭಾರೀ ವಾಹನಗಳು ಫ್ಲೈಓವರ್ ಅನ್ನು ಬಳಸಲು ಪ್ರಾರಂಭಿಸಬಹುದು ಎಂದು ಅವರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಈಗಿರುವ ಕೇಬಲ್‌ಗಳ ಬದಲಾವಣೆಯನ್ನು ಪರಿಶೀಲಿಸಿದ ನಂತರ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎನ್‌ಎಚ್‌ಎಐನ ಬೆಂಗಳೂರು ಯೋಜನಾ ನಿರ್ದೇಶಕ ಕೆ.ಬಿ.ಜಯಕುಮಾರ್ ಕೂಡ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ