AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಫ್ಲೈಓವರ್ ರಿ ಓಪನ್; ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ

ಮೂರು ದಿನಗಳ ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಫ್ಲೈಓವರ್ ರಿ ಓಪನ್ ಆಗಿದೆ. ಇಂದು (ಜ.19) ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಫ್ಲೈ ಓವರ್ ಮೇಲೆ ವಾಹನಗಳು ಸಂಚರಿಸಲು ಆರಂಭಿಸಿದವು. ಈ ಮೇಲ್ಸೇತುವೆ ಮೇಲೆ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ.

ಪೀಣ್ಯ ಫ್ಲೈಓವರ್ ರಿ ಓಪನ್; ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ
ಪೀಣ್ಯ ಫ್ಲೈಓವರ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 19, 2024 | 11:41 AM

Share

ಬೆಂಗಳೂರು, ಜನವರಿ 19: ಮೂರು ದಿನಗಳ ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಫ್ಲೈಓವರ್ (Dr. Shivakumara Swamiji Flyover) ರಿ ಓಪನ್ ಆಗಿದೆ. ಇಂದು (ಜ.19) ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಫ್ಲೈ ಓವರ್ ಮೇಲೆ ವಾಹನಗಳು ಸಂಚರಿಸಲು ಆರಂಭಿಸಿದವು. ಇನ್ನು ಈ ಮೇಲ್ಸೇತುವೆ (Flyover) ಮೇಲೆ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಈ ಮೂಲಕ ಲಘು ಗಾತ್ರದ ವಾಹನಗಳ ಚಾಲಕರು ಮತ್ತು ಮಾಲಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಲೋಡ್​​ ಟೆಸ್ಟಿಂಗ್​ನಲ್ಲಿ​ ಪಾಸಿಟಿವ್ ರಿಪೋರ್ಟ್ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ 20-30 ದಿನಗಳ ಅಂತರದಲ್ಲಿ ಮೇಲ್ಸೇತುವೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ ಇದೆ.

ಯಾಕಾಗಿ ಫ್ಲೈಓವರ್ ಬಂದ್?

ಪೀಣ್ಯ ಎಲಿವೇಟೆಡ್ ಹೈವೆಯಲ್ಲಿ ಅಳವಡಿಸಲಾಗಿದ್ದ ವಯಾಡಕ್ಟ್​ನಲ್ಲಿ ದೋಷ ಕಂಡು ಬಂದಿದ್ದರಿಂದ ಪೀಣ್ಯ ಮೇಲ್ಸೇತುವೆಯಲ್ಲಿ ಲಘು ಗಾತ್ರದ ವಾಹನ ಹೊರತುಪಡಿಸಿ, ಭಾರಿ ಗಾತ್ರದ ವಾಹನಗಳನ್ನ ನಿಷೇಧಿಸಲಾಗಿತ್ತು. 2021 ರಿಂದ ಇಲ್ಲಿ ದುರಸ್ತಿ ಕಾರ್ಯ ನಡೆಯುತಿತ್ತು. ಭಾರತೀಯ ವಿಜ್ಞಾನ ಸಂಸ್ಥೆ (ಐಎಎಸ್ಸಿ) ನೀಡಿದ ಸಲಹೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕಾಮಗಾರಿ ನಡೆಸುತ್ತಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದೆ.

ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಬಂದ್: ಪೀಣ್ಯ ರಸ್ತೆಯಲ್ಲಿ ಟ್ರಾಫಿಕ್​ನಲ್ಲಿ ಸಿಲುಕಿರುವ ಆ್ಯಂಬುಲೆನ್ಸ್​

ಈ ಹಿನ್ನೆಲೆಯಲ್ಲಿ ಲೋಡ್ ಟೆಸ್ಟಿಂಗ್ ಮಾಡಬೇಕಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಜನವರಿ 16 ರ ರಾತ್ರಿ 11 ಗಂಟೆಯಿಂದ ಮೂರು ದಿನ ಸ್ಟ್ರಕ್ಚರಲ್ ಇಂಟಿಗ್ರಿಟಿ ಟೆಸ್ಟ್ ನಡೆಸಿದರು. ಇದೀಗ ಲೋಡ್​ ಟೆಸ್ಟಿಂಗ್​ ಮುಗಿದಿದ್ದು, ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು