AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಳೆ ಅವಾಂತರ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ರಾಜಧಾನಿ ಜನರು

ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ರಸ್ತೆ ಹದಗೆಟ್ಟು ಟ್ರಾಫಿಕ್​ ಸಮಸ್ಯೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಿದ ಬೆಂಗಳೂರು ಮಹಾನಗರ ಟ್ರಾಫಿಕ್ ಪೊಲೀಸರಿಗೆ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ​​

ಬೆಂಗಳೂರು ಮಳೆ ಅವಾಂತರ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ರಾಜಧಾನಿ ಜನರು
ಸಂಚಾರಿ ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ
TV9 Web
| Edited By: |

Updated on:Sep 07, 2022 | 2:48 PM

Share

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ರಸ್ತೆ ಹದಗೆಟ್ಟು ಟ್ರಾಫಿಕ್​ ಸಮಸ್ಯೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಿದ ಬೆಂಗಳೂರು ಮಹಾನಗರ ಟ್ರಾಫಿಕ್ ಪೊಲೀಸರಿಗೆ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ​​

ಮಳೆಯಿಂದಾಗಿ ಅಸ್ತವ್ಯಸ್ತಗೊಂಡಿರುವ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಹಿರಿಯ ಅಧಿಕಾರಿಗಳ‌ ಸೂಚನೆ‌ ಮೇರೆಗೆ ಟ್ರಾಫಿಕ್ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸಂಚಾರಿ ಪೊಲೀಸರು ಮಳೆ ನಡುವೆಯೂ ರೈನ್ ಕೋರ್ಟ್ ಧರಿಸಿ ಕಾರ್ಯಾ ನಿರ್ವಹಿಸಿದ್ದಾರೆ.

ಎಲ್ಲಿಲ್ಲಿ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದಿಯೋ ಆ ಸ್ಥಳಗಳಲ್ಲಿ‌ ಪೊಲೀಸರು ಸುಗಮ ಸಂಚಾರಕ್ಕಾಗಿ‌‌ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಜಲಾವೃತ್ತಗೊಂಡಿರುವ ರಸ್ತೆ ಮಾರ್ಗಗಳಲ್ಲಿ ಸಂಚಾರ ದಟ್ಟಣೆಯಾಗದಂತೆ ಬದಲಿ ಮಾರ್ಗ ಸೂಚಿಸಿದ್ದಾರೆ.

ಬೆಳ್ಳಂದೂರು ಇಕೋ ಸ್ಪೆಸ್ ಬಳಿ ರಸ್ತೆ ತುಂಬಾ ನೀರು ತುಂಬಿದ್ದ ಪರಿಣಾಮ ಮಡಿವಾಳ ಸಂಚಾರ ಪೊಲೀಸರು‌ ಮೈಕ್ ಹಿಡಿದು ಮಾಹಿತಿ ನೀಡುತ್ತಿದ್ದಾರೆ.‌ ಬಾಣಸವಾಡಿ, ಚಿಕ್ಕಪೇಟೆ ವಿವಿಧ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಚಾರಿ ಪೊಲೀಸರು‌ ಮಳೆ ನಡುವೆಯೂ ರಸ್ತೆಯಲ್ಲಿ ತುಂಬಿದ್ದ ನೀರನ್ನು ಚರಂಡಿಗೆ ಹರಿಯುವಂತೆ ಮಾಡಿ ಯೋಗ್ಯ ಸಂಚಾರಕ್ಕೆ ಅನುವು ಮಾಡುತ್ತಿದ್ದಾರೆ.

ನೀರಿನಲ್ಲಿ ಕೆಟ್ಟು ನಿಂತಿರುವ ವಾಹನಗಳಿಗೂ ಪೊಲೀಸರು ಸಾಥ್ ನೀಡಿ ಮುಂದೆ ಹೋಗಲು ನೆರವು ನೀಡುತ್ತಿದ್ದಾರೆ. ಇವರ ಕಾರ್ಯಕ್ಕೆ ರಾಜಧಾನಿ ಜನರು ಟ್ವಿಟರ್​, ಫೇಸ್​ಬುಕ್​​, ವಾಟ್ಸಾಪ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮೂಲಸೌರ್ಕಯ ಕಲ್ಪಿಸದ ಸ್ಥಳೀಯ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Wed, 7 September 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!