ಬೆಂಗಳೂರು ಮಳೆ ಅವಾಂತರ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ರಾಜಧಾನಿ ಜನರು

ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ರಸ್ತೆ ಹದಗೆಟ್ಟು ಟ್ರಾಫಿಕ್​ ಸಮಸ್ಯೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಿದ ಬೆಂಗಳೂರು ಮಹಾನಗರ ಟ್ರಾಫಿಕ್ ಪೊಲೀಸರಿಗೆ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ​​

ಬೆಂಗಳೂರು ಮಳೆ ಅವಾಂತರ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ ರಾಜಧಾನಿ ಜನರು
ಸಂಚಾರಿ ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ
Follow us
| Updated By: ವಿವೇಕ ಬಿರಾದಾರ

Updated on:Sep 07, 2022 | 2:48 PM

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ರಸ್ತೆ ಹದಗೆಟ್ಟು ಟ್ರಾಫಿಕ್​ ಸಮಸ್ಯೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಿದ ಬೆಂಗಳೂರು ಮಹಾನಗರ ಟ್ರಾಫಿಕ್ ಪೊಲೀಸರಿಗೆ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ​​

ಮಳೆಯಿಂದಾಗಿ ಅಸ್ತವ್ಯಸ್ತಗೊಂಡಿರುವ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಹಿರಿಯ ಅಧಿಕಾರಿಗಳ‌ ಸೂಚನೆ‌ ಮೇರೆಗೆ ಟ್ರಾಫಿಕ್ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸಂಚಾರಿ ಪೊಲೀಸರು ಮಳೆ ನಡುವೆಯೂ ರೈನ್ ಕೋರ್ಟ್ ಧರಿಸಿ ಕಾರ್ಯಾ ನಿರ್ವಹಿಸಿದ್ದಾರೆ.

ಎಲ್ಲಿಲ್ಲಿ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದಿಯೋ ಆ ಸ್ಥಳಗಳಲ್ಲಿ‌ ಪೊಲೀಸರು ಸುಗಮ ಸಂಚಾರಕ್ಕಾಗಿ‌‌ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಜಲಾವೃತ್ತಗೊಂಡಿರುವ ರಸ್ತೆ ಮಾರ್ಗಗಳಲ್ಲಿ ಸಂಚಾರ ದಟ್ಟಣೆಯಾಗದಂತೆ ಬದಲಿ ಮಾರ್ಗ ಸೂಚಿಸಿದ್ದಾರೆ.

ಬೆಳ್ಳಂದೂರು ಇಕೋ ಸ್ಪೆಸ್ ಬಳಿ ರಸ್ತೆ ತುಂಬಾ ನೀರು ತುಂಬಿದ್ದ ಪರಿಣಾಮ ಮಡಿವಾಳ ಸಂಚಾರ ಪೊಲೀಸರು‌ ಮೈಕ್ ಹಿಡಿದು ಮಾಹಿತಿ ನೀಡುತ್ತಿದ್ದಾರೆ.‌ ಬಾಣಸವಾಡಿ, ಚಿಕ್ಕಪೇಟೆ ವಿವಿಧ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಚಾರಿ ಪೊಲೀಸರು‌ ಮಳೆ ನಡುವೆಯೂ ರಸ್ತೆಯಲ್ಲಿ ತುಂಬಿದ್ದ ನೀರನ್ನು ಚರಂಡಿಗೆ ಹರಿಯುವಂತೆ ಮಾಡಿ ಯೋಗ್ಯ ಸಂಚಾರಕ್ಕೆ ಅನುವು ಮಾಡುತ್ತಿದ್ದಾರೆ.

ನೀರಿನಲ್ಲಿ ಕೆಟ್ಟು ನಿಂತಿರುವ ವಾಹನಗಳಿಗೂ ಪೊಲೀಸರು ಸಾಥ್ ನೀಡಿ ಮುಂದೆ ಹೋಗಲು ನೆರವು ನೀಡುತ್ತಿದ್ದಾರೆ. ಇವರ ಕಾರ್ಯಕ್ಕೆ ರಾಜಧಾನಿ ಜನರು ಟ್ವಿಟರ್​, ಫೇಸ್​ಬುಕ್​​, ವಾಟ್ಸಾಪ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮೂಲಸೌರ್ಕಯ ಕಲ್ಪಿಸದ ಸ್ಥಳೀಯ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Wed, 7 September 22

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ