AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು

ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಗೊಂಡ ಇರ್ಫಾನ್, ಅಪ್ರೋಜ್ ಪಾಷಾ ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ ಅಂತ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇನ್ನು ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಕೆಲಸಕ್ಕೆ ಸೇರಿದ್ದರು.

ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು
ಮೃತ ಮೆಹಬೂಬ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 19, 2024 | 9:10 AM

Share

ಬೆಂಗಳೂರು, ಫೆಬ್ರವರಿ 19: ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ (Perfume Factory) ಅಗ್ನಿ ಅವಘಡ (Fire accident) ಸಂಭವಿಸಿದ್ದು, ಮೃತಪಟ್ಟ ಮೂವರು ಕಾರ್ಮಿಕರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಗೊಡೌನ್ ಮಾಲಿಕ ಸಲೀಂ (50), ನಾಯಂಡಹಳ್ಳಿ ನಿವಾಸಿ ಚಾಲಕ ಮೆಹಬೂಬ್ (35) ಮೃತರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಆರ್​ಆರ್​ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಾಯಗೊಂಡವರಲ್ಲಿ 10 ವರ್ಷದ ಬಾಲಕನಿದ್ದು, ಈತನಿಗೆ ಶೇ60 ರಷ್ಟು ಸುಟ್ಟ ಗಾಯಗಳಾಗಿವೆ. ಬಾಲಕ ರಿಹಾನ್ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದ ಐವರಿಗೆ ಶೇ25 ರಷ್ಟು ಸುಟ್ಟ ಗಾಯಗಳಾಗಿವೆ.

ಪ್ರಕರಣ ಸಂಬಂಧ ಗೊಡೌನ್ ಮಾಲಿಕ ಸಲೀಂ ಮತ್ತು ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಎಫ್​ಐಆರ್​ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ವಿಠ್ಠಲ್ ಪರಾರಿಯಾಗಿದ್ದಾನೆ.  ಐಪಿಸಿ ಸೆಕ್ಷನ್ 420, 304, 467, 64, 67 ಅಡಿ ದೂರು ದಾಖಲಾಗಿದೆ.

600 ರೂ. ಕೂಲಿ ಕೆಲಸಕ್ಕೆ ಹೋಗಿ ಜೀವಕ್ಕೆ ಕುತ್ತು

ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ, ಅಲ್ಲದೆ ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಅಂತ ಗಾಯಾಳುಗಳು ಇರ್ಫಾನ್, ಅಪ್ರೋಜ್ ಪಾಷಾ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇರ್ಫಾನ್ ಪಾಷಾ ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಕ್ಯಾಂಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಆದರೆ ಹೆಚ್ಚಿನ ಸಂಬಳ ನೀಡುತ್ತಾರೆ ಎಂಬ ಆಸೆಯಿಂದ ಡ್ರೈವರ್ ಕೆಲಸ ಬಿಟ್ಟು ಫ್ಯಾಕ್ಟರಿಗೆ ಸೇರಿದ್ದನು.

ಇದನ್ನೂ ಓದಿ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಬಚಾವ್​

ಇನ್ನು ರವಿವಾರ (ಫೆ.18) ರಂದು ರಜೆ ಇದ್ದ ಕಾರಣ, ಇರ್ಫಾನ್ ಪಾಷಾಗೆ ಊಟ ಕೊಡಲು ಅಪ್ರೋಜ್ ಪಾಷಾ, ಅಪ್ರೋಜ್ ಪಾಷಾರ ಮಗ ಮತ್ತು ಅಪ್ರೋಜ್ ಪಾಷಾರ ಅಕ್ಕನ ಮಗ ಕಾರ್ಖಾನೆಗೆ ಹೋಗಿದ್ದರು. ಈ ವೇಳೆ ಕಾರ್ಖಾನೆಯಲ್ಲಿ ಧಿಡೀರನೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಐವರು ಹೊರಗೆ ಓಡಿ ಬಂದರೂ, ಬೆಂಕಿ ತಗುಲಿತ್ತು. ಗಾಯಾಳುಗಳು ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ: ಎಸ್‌ಪಿ ಕಾರ್ತಿಕ್‌ ರೆಡ್ಡಿ

ಘಟನಾ ಸ್ಥಳದಲ್ಲಿ ರಾಮನಗರ ಎಸ್‌ಪಿ ಕಾರ್ತಿಕ್‌ ರೆಡ್ಡಿ ಪ್ರತಿಕ್ರಿಯಿಸಿದ್ದು, ರಾಮಸಂದ್ರದಲ್ಲಿ ಸಂಜೆ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಸಲೀಂ ಸೇರಿ ಮೂವರು ಮೃತಪಟ್ಟಿದ್ದಾರೆ. ಗಾಯಾಳು ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ಗ್ರಾಮ ಪಂಚಾಯಿತಿನಿಂದ ಅನುಮತಿ ಪಡೆದಿದ್ದ ಬಗ್ಗೆ ಪರಿಶೀಲಿಸ್ತಿದ್ದೇವೆ. ವಿಠಲ್ ಎಂಬುವವರ ಜಾಗದಲ್ಲಿ ಸಲೀಂ ಗೋಡೌನ್ ನಡೆಸುತ್ತಿದ್ದ. ಕಳೆದ ಒಂದು ತಿಂಗಳ ಹಿಂದಷ್ಟೆ ಗೋದಾಮು ಆರಂಭಿಸಿದ್ದರು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:46 am, Mon, 19 February 24

ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು?
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ